ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಾಳೆ ಶ್ರೀ ಮನ್ಮಹಾರಥೋತ್ಸವ

ಉಚ್ಚಿಲ: ಶ್ರೀ ಕ್ಷೇತ್ರ ಉಚ್ಶಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವರ್ಷಾವಧಿ ಮಹೋತ್ಸವ ಎ. 4 ರಿಂದ 9ರವರೆಗೆ ನಡೆಯಲಿದ್ದು ಎ. 7 ರಂದು ಶ್ರೀ ಮಹಾಲಕ್ಷ್ಮೀ ರಥಾರೋಹಣ ನಡೆಯಲಿದೆ. ಎ. 6 ರಂದು ಬೆಳಿಗ್ಗೆ 9.30 ರಿಂದ ನಾಗಾಲಯದಲ್ಲಿ ನವಕ ಪ್ರಧಾನ ಹೋಮ, ಕಲಶಾಭಿಷೇಕ, ಆಶ್ಲೇಷಾ ಬಲಿ, ಮಧ್ಯಾಹ್ನ 12: 30ಕ್ಕೆ ಮಹಾಲಕ್ಷ್ಮೀ ಸನ್ನಿಧಿಯಲ್ಲಿ ಪ್ರಧಾನ ಯಾಗ, ಮಹಾಪೂಜೆ, ರಾತ್ರಿ 7.30 ರಿಂದ ಆರಾಧನಾ ಪೂಜೆ, ಅನ್ನ ಸಂತರ್ಪಣ ಪ್ರಾರ್ಥನೆ, ರಾತ್ರಿ 11 ರಿಂದ ನಿತ್ಯ ಬಲಿ, […]

ಸುಧಾ ಮೂರ್ತಿ, ಎಸ್.ಎಲ್ ಭೈರಪ್ಪ ಸೇರಿ ಹಲವು ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ

ನವದೆಹಲಿ(ಏ.05): ಗಣರಾಜ್ಯೋತ್ಸವದಿಂದ ಘೋಷಿಸಲಾದ ಪದ್ಮ ಪ್ರಶಸ್ತಿ ಸಾಧಕರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರಧಾನ ಮಾಡಿದ್ದಾರೆ. ಮಾರ್ಚ್ 22 ರಂದು ಮೊದಲ ಹಂತದಲ್ಲಿ 54 ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗಿತ್ತು. ಇಂದು ಇನ್ನುಳಿದ 54 ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಕರ್ನಾಟಕದ ಹೆಮ್ಮೆಯ, ಇಸ್ಫೋಸಿಸ್‌ ಪ್ರತಿಷ್ಠಾನದ ಸುಧಾಮೂರ್ತಿ ಇಂದು ಪದ್ಮ ಭೂಷಣ ಪ್ರಶಸ್ತಿ ಸ್ವೀಕರಿಸಿದ್ದಾರೆ. ಸಾಹಿತಿ, ಕನ್ನಡದ ಪ್ರಸಿದ್ಧ ಕಾದಂಬರಿಕಾರ ಎಸ್‌ಎಲ್ ಬೈರಪ್ಪ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಉಮ್ಮತ್ತಾಟ್‌ ನೃತ್ಯ ಕಲಾವಿದೆ ಕೊಡಗಿನ ರಾಣಿ […]

ನಾಳೆ ಹೆಬ್ರಿಯಲ್ಲಿ ಕಲ್ಪರಸ ಮಳಿಗೆ ಉದ್ಘಾಟನೆ..

ಹೆಬ್ರಿ: ರುಚಿಕರವೂ.. ಆರೋಗ್ಯಕರವೂ.. ಆದ ಕಲ್ಪರಸ ಇದೀಗ ಹೆಬ್ರಿಯ ಸಮೃದ್ಧಿ ಸ್ವದೇಶಿ ಆಯುರ್ವೇದ ಹೆಬ್ರಿ ಇಲ್ಲಿ ಲಭ್ಯವಿದೆ. ರೈತರಿಂದ ನೇರವಾಗಿ ಗ್ರಾಹಕರಿಗೆ ಅನ್ನುವಂತೆ ಕೆಮಿಕಲ್ ರಹಿತವಾದ ಸಕ್ಕರೆ ಖಾಯಿಲೆಯವರೂ ಬಳಸಬಹುದಾದ ಏಕೈಕ ಪಾನೀಯವೇ ಕಲ್ಪರಸ. ನಿಮ್ಮ ಹೆಬ್ರಿಯ ಬಸ್ ನಿಲ್ದಾಣದ ಎದುರುಗಡೆ ಇರುವ ರಾಮನಾಥ (ಪೂಜಾ) ಕಾಂಪ್ಲೆಕ್ಸ್ ನಲ್ಲಿ ಲಭ್ಯವಿದ್ದು, ನಾಳೆ ಇದರ ಉದ್ಘಾಟನಾ ನಡೆಯಲಿದೆ. ಉಕಾಸ ಕಂಪೆನಿಯ ಅಧಿಕೃತ ಮಾರಾಟ ಮಳಿಗೆ ಇದಾಗಿದ್ದು, ಕಲ್ಪರಸವು ಆರೋಗ್ಯಕರವಾದ ಅಮಲು ರಹಿತ ಪಾನೀಯವಾಗಿದೆ. ಏನಿದು ಕಲ್ಪರಸ: ತೆಂಗಿನಮರದ ಇನ್ನೂ […]

ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ಆರಂಭ

ಉಡುಪಿ:ರಾಜ್ಯದಲ್ಲಿ 2022-23ನೇ ಸಾಲಿನ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಗಳು ಮುಕ್ತಾಯವಾಗಿವೆ. ಇಂದಿನಿಂದ ಅಂದರೆ ಏಪ್ರಿಲ್ 5, 2023 ರಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ ರಾಜ್ಯಾದ್ಯಂತ 65 ಕಡೆ ಮೌಲ್ಯಮಾಪನ ನಡೆಯುತ್ತಿದ್ದು, ವಿಜ್ಞಾನ ವಿಷಯದ ಮೌಲ್ಯಮಾಪನ ಬೆಂಗಳೂರಿನಲ್ಲಿ ಮಾಡಲಾಗುತ್ತಿದೆ.ಉಡುಪಿ ಜಿಲ್ಲೆಯಲ್ಲಿ ಯಾವುದೇ ವಿಷಯದ ಮೌಲ್ಯಮಾಪನ ಕೇಂದ್ರ ಇಲ್ಲ. ಮಂಗಳೂರಿನಲ್ಲಿ ಕಲಾ ಮತ್ತು ವಾಣಿಜ್ಯ ವಿಭಾಗದ ಕೆಲವು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯುತ್ತಿದೆ. ಉಡುಪಿ ಜಿಲ್ಲೆಯ ಮೌಲ್ಯಮಾಪಕರು ಮಂಗಳೂರಿಗೆ ಹೋಗಿ ಮೌಲ್ಯಮಾಪನ ಮಾಡುತ್ತಿದ್ದಾರೆ. ಇನ್ನು ವಿಜ್ಞಾನ ವಿಭಾಗದ ಮೌಲ್ಯಮಾಪಕರು ಈಗಾಗಲೇ […]

ನಾಟ್ಯಶಾಸ್ತ್ರದ 108 ಕರಣಗಳ ಯಶಸ್ವಿ ಪ್ರದರ್ಶನ: ತನುಶ್ರೀ ಮುಡಿಗೆ 8ನೇ ವಿಶ್ವದಾಖಲೆ

ಉಡುಪಿ: ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ 7 ವಿಶ್ವದಾಖಲೆಗಳನ್ನು ಮುಡಿಗೇರಿಸಿಕೊಂಡಿರುವ ಉಡುಪಿಯ ಯೋಗ ಸಾಧಕಿ ತನುಶ್ರೀ ಪಿತ್ರೋಡಿ ಅವರು ನಾಟ್ಯ ಶಾಸ್ತ್ರದಲ್ಲಿ 8ನೇ ವಿಶ್ವದಾಖಲೆ ನಿರ್ಮಿಸಿದ್ದಾರೆ. ಮಂಗಳವಾರ ಬನ್ನಂಜೆ ನಾರಾಯಣ ಗುರು ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಟ್ಯಶಾಸ್ತ್ರದ 108 ಕರಣಗಳ ಭಂಗಿಗಳನ್ನು 3 ನಿಮಿಷ 29 ಸೆಕೆಂಡ್‌ ನಲ್ಲಿ ಪ್ರಸ್ತುತಪಡಿಸುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ಗೆ ಸೇರ್ಪಡೆಯಾದರು. ಕಾಲು, ಕೈಗಳ ಚಲನೆ, ದೇಹದ ಭಂಗಿ ಈ ಮೂರು ಅಂಶಗಳ ಸಂಯೋಜನೆ 108 ಕರಣಗಳಾಗಿವೆ. ಭಗವಂತ ಶಿವ […]