ಕಾರ್ಕಳ ಕ್ರೈಸ್ಟ್ ಕಿಂಗ್: 79ನೇ ಸ್ವಾತಂತ್ರ್ಯ ದಿನಾಚರಣೆ

ಕಾರ್ಕಳ: ಇಲ್ಲಿನ ಕ್ರೈಸ್ಟ್ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಭಾರತೀಯ ವಾಯುಸೇನೆಯ ಮಾಜಿ ಯೋಧ ಡಾ.ನವೀನ್ ಅಮಾನ್ನ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು “ಸ್ವಾತಂತ್ರ್ಯ ಎಂದರೆ ಕೇವಲ ಬೇಡಿಗಳಿಂದ ಮುಕ್ತವಾಗುವುದು ಮಾತ್ರವಲ್ಲ, ಅದು ಜವಾಬ್ಧಾರಿಯ ಪ್ರತೀಕವಾಗಿದೆ. ನಾವು ಪ್ರತಿಯೊಬ್ಬರೂ ದೇಶವನ್ನು ಪ್ರಗತಿಯ ಮಾರ್ಗದಲ್ಲಿ ಕೊಂಡೊಯ್ಯುವ ಸೇನಾನಿಗಳಾಗಬೇಕು” ಎಂದು ಹೇಳಿದರು. ಹತ್ತನೇ ತರಗತಿಯ ಶೆಹ್ನುಮ್ ಫಾತಿಮಾ, ಪ್ರಥಮ ವಿಜ್ಞಾನ ವಿಭಾಗದ ಬ್ರೋವಿನ್ ಅಗೇರ ಸ್ವಾತಂತ್ರ್ಯ ದಿನಾಚರಣೆಯ ಕುರಿತು ತಮ್ಮ […]

ಮೂಡುಬಿದಿರೆ:ಪ್ರತಿಯೊಬ್ಬರ ಶ್ರಮದಿಂದ ಆಧುನಿಕ ಭಾರತ ನಿರ್ಮಾಣ ಸಾಧ್ಯ:ಲೆ. ಜನರಲ್ ಅರುಣ್ ಅನಂತ ನಾರಾಯಣ್

ಮೂಡುಬಿದಿರೆ: ಶಿಕ್ಷಕರು ಉತ್ತಮ ವಿದ್ಯಾರ್ಥಿಗಳನ್ನು ರೂಪಿಸಿ ಆಧುನಿಕ ಭಾರತ ನಿರ್ಮಿಸುವಲ್ಲಿ ಶ್ರಮವಹಿಸುತ್ತಿದ್ದಾರೆ  ಎಂದು ಭಾರತೀಯ ಸೇನೆ ನಿವೃತ್ತ ಅಧಿಕಾರಿ ಲೆ. ಜನರಲ್ ಅರುಣ್ ಅನಂತನಾರಾಯಣ್ ಹೇಳಿದರು. ವಿದ್ಯಾಗಿರಿಯ ಕೆ. ವಿ. ಸುಬ್ಬಣ್ಣ ಬಯಲು ವೇದಿಕೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ವತಿಯಿಂದ ನಡೆದ 79ನೇ ಸ್ವಾತಂತ್ರ‍್ಯ ದಿನಾಚರಣೆಯಲ್ಲಿ ಧ್ವಜಾರೋಹಣ ಗೈದು ಮಾತನಾಡಿದ ಅವರು, ಇಂದಿನ ಪೀಳಿಗೆಗೆ ಸ್ವಾತಂತ್ರ‍್ಯವೆಂದರೆ ಏನನ್ನಾದರೂ ಸಾಧಿಸುವ ಅವಕಾಶ  ಎಂದು ಭಾಸವಾಗಬಹುದು, ಆದರೆ ನಮ್ಮ ಹಿರಿಯರು ಸರಿಯಾದ ಶಿಕ್ಷಣ ವೈದ್ಯಕೀಯ ಸೌಲಭ್ಯ ಮತ್ತು ಇನ್ನಿತರ […]

ಉಡುಪಿ:ಮಕ್ಕಳು ಶಿಕ್ಷಣವಂತರಾಗಿ ಉನ್ನತ ಹುದ್ದೆ ಅಲಂಕರಿಸಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಬೇಕು : ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್

ಉಡುಪಿ: ಮಕ್ಕಳು ವಿದ್ಯಾರ್ಥಿ ಜೀವನದಲ್ಲಿ ಹೆಚ್ಚು ವಿದ್ಯಾಭ್ಯಾಸಕ್ಕೆ ಒತ್ತು ನೀಡಿ, ಶಿಕ್ಷಣವಂತರಾಗಿ ಉನ್ನತ ಹುದ್ದೆಗಳನ್ನು ಅಲಂಕರಿಸುವುದರೊಂದಿಗೆ ರಾಜ್ಯ ಹಾಗೂ ರಾಷ್ಟ್ರಕ್ಕೆ ಹೆಸರು ತರಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಕರೆ ನೀಡಿದರು. ಅವರು ಶುಕ್ರವಾರ ಪರ್ಕಳ ಶೆಟ್ಟಿಬೆಟ್ಟು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಉವರ ಸಹಯೋಗದಲ್ಲಿ ಶಾಲೆಯ “ಸುಜ್ಞಾನ” ಸಭಾಂಗಣ ಉದ್ಘಾಟಿಸಿ, ಪ್ರಾಥಮಿಕ ವಿಭಾಗದ […]

ಆತ್ರಾಡಿ ವಿವೇಕಾನಂದ SPYSS ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಉಡುಪಿ: ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕರ್ನಾಟಕ ಇದರ SPYSS ವಿವೇಕಾನಂದ ನಗರ ಆತ್ರಾಡಿ ಶಾಖೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯಯನ್ನು ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡಲಾಯಿತು. ಭಾರತ ಮಾತೆಯ ಭಾವಚಿತ್ರಕ್ಕೆ ತಿಲಕ ಇರಿಸಿಅದರ ಪಕ್ಕದಲ್ಲಿ ತ್ರಿವರ್ಣ ಧ್ವಜ ವನ್ನು ಇರಿಸಿ ಮಂಗಳಾರತಿ ಮಾಡಿ ಸರ್ವ ಯೋಗ ಬಂದುಗಳು ಭಾರತಮಾತೆಗೆ ಪುಷ್ಪಾರ್ಚನೆ ಮಾಡಿದರು. ತದನಂತರ ತ್ರಿವರ್ಣ ಧ್ವಜಗಳನ್ನು ಕೈಯಲ್ಲಿ ಹಿಡಿದು ಕೊಂಡು ಯೋಗ ನೃತ್ಯವನ್ನು ಮಾಡಿದರು. ಸ್ವಾತಂತ್ರ್ಯ ಹೋರಾಟಗಾರರಿಗೆ ಜಯಕಾರ ಘೋಷಣೆ ಗಳನ್ನು ಕೂಗಿದರು. ವಂದೇ […]

ಸಂತೋಷ್ ನಾಯಕ್ ರವರಿಗೆ ಡಾಕ್ಟರೇಟ್ ಪದವಿ

ಉಡುಪಿ: ಮಣಿಪಾಲ್ ಸ್ಕೂಲ್ ಆಫ್ ಕಾಮರ್ಸ್ ಅಂಡ್ ಎಕನಾಮಿಕ್ಸ್, ಮಣಿಪಾಲ್ ಅಕಾಡೆಮಿ ಆಫ್ ಎಜುಕೇಶನ್, ಮಣಿಪಾಲದ ಸಹಪ್ರಾಧ್ಯಾಪಕರಾದ ಡಾ. ಸತೀಶ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಹಾಗೂ ಸಹಾಯಕ ಪ್ರಾಧ್ಯಾಪಕಿಯಾದ ಡಾ.ಅಂಕಿತಾ ಶೆಟ್ಟಿ ಇವರ ಸಹಮಾರ್ಗದರ್ಶನದಲ್ಲಿ ಡಾ. ಸಂತೋಷ್ ನಾಯಕ್ ರವರು ಮಂಡಿಸಿದ “ಇನ್ಫ್ಲುಯೆನ್ಸ್ ಆಫ್ ರಿಲೇಶನ್ಶಿಪ್ ಸೆಲ್ಲಿಂಗ್ ಬಿಹೇವಿಯರ್ ಆನ್ ಹೆಲ್ತ್ ಇನ್ಸೂರೆನ್ಸ್: ಎನ್ ಎವಾಲ್ಯೂವೇಶನ್ ಫ್ರಮ್ ಏಜೆಂಟ್ಸ್ ಪರ್ಸ್ಪೆಕ್ಟಿವ್” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಮಾಹೆ ಮಣಿಪಾಲ ವಿಶ್ವವಿದ್ಯಾನಿಲಯವು ಪಿ.ಎಚ.ಡಿ ಪದವಿ ಪ್ರಧಾನ ಮಾಡಿದೆ. ಮೂಲತಃ ಬೆಳಗಾವಿಯವರಾದ […]