20 ನವಿಲುಗಳ ನಿಗೂಢ ಸಾವು: ತನಿಖೆಗೆ ಸಚಿವ ಖಂಡ್ರೆ ಆದೇಶ

ತುಮಕೂರು: ಕರ್ನಾಟಕದಲ್ಲಿ ವನ್ಯಜೀವಿಗಳ ಸರಣಿ ಸಾವು ಪ್ರಕರಣ ಮುಂದುವರೆದಿದ್ದು, 4 ಹುಲಿಗಳ ಸಾವು ಪ್ರಕರಣ ಹಸಿರಾಗಿರುವಂತೆಯೇ ಇತ್ತ 20 ನವಿಲುಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿವೆ. ಕರ್ನಾಟಕದ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರ ಗ್ರಾಮದ ಕೆರೆ ಕೋಡಿ ನೀರು ಹರಿಯುವ ಪಕ್ಕದ ಜಮೀನುಗಳಲ್ಲಿ 5 ಗಂಡು ಹಾಗೂ 15 ಹೆಣ್ಣು ಸೇರಿ ಒಟ್ಟು 20 ನವಿಲುಗಳು ನಿಗೂಢವಾಗಿ ಸಾವನ್ನಪ್ಪಿರುವುದು ಪತ್ತೆ ಆಗಿದೆ. ಬೆಳಗ್ಗೆ ರೈತರು ಜಮೀನಿಗೆ ಬಂದಾಗ ನವಿಲುಗಳ ಮೃತದೇಹಗಳು ಪತ್ತೆ ಆಗಿದ್ದು, ಆಗಸ್ಟ್ 1ರ ರಾತ್ರಿ […]

ಉಸಿರಾಟದ ಸಮಸ್ಯೆಯಿಂದ 30 ವರ್ಷದ ಬಾಡಿಬಿಲ್ಡರ್ ಮೃತ್ಯು.

ಹಾಸನ: ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬೆಳಗೋಡು ಗ್ರಾಮದಲ್ಲಿ ಶ್ವಾಸಕೋಶದ ಸೋಂಕಿನಿಂದ ದೇಹದಾರ್ಢ್ಯ ಪಟು ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ಯುವಕ ಸೋಮಶೇಖರ್ (30). ‘ಜಿಮ್ ಸೋಮ‌’ ಎಂದೇ ಖ್ಯಾತಿಯಾಗಿದ್ದ ಸೋಮಶೇಖರ್ ಆರೂವರೆ ಅಡಿ ಎತ್ತರ, 110‌ ಕೆಜಿ ತೂಕವಿದ್ದರು. ಬಾಡಿಬಿಲ್ಡಿಂಗ್‌ನಲ್ಲಿ ಹಲವಾರು ಟೈಟಲ್ ಜಯಿಸಿದ್ದ ಸೋಮ ರಾಷ್ಟ್ರಮಟ್ಟದ ದೇಹದಾರ್ಢ್ಯ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿದ್ದರು. ಒಂದು ವಾರದಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು,‌ ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.

ಉಡುಪಿ:ಎಣ್ಣೆಕಾಳು ಕೊಯ್ಲೋತ್ತರ ಘಟಕಕ್ಕೆ ಮೂಲಸೌಕರ್ಯ ಕಲ್ಪಿಸಲು ಅರ್ಜಿ ಆಹ್ವಾನ

ಉಡುಪಿ: ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ಎಣ್ಣೆಕಾಳು ಕೊಯ್ಲೋತ್ತರ ಘಟಕಕ್ಕೆ ಮೂಲ ಸೌಕರ್ಯ ಕಲ್ಪಿಸಲುಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು, ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲ ಆಗುವಂತೆ ಹಾಗೂ ಎಣ್ಣೆಕಾಳು ಬೆಳೆ ಉತ್ತೇಜಿಸಲು ಈ ಯೋಜನೆ ಅನುಷ್ಟಾನಗೊಳಿಸಲಾಗುತ್ತಿದೆ. ಎಣ್ಣೆಕಾಳು ಕೊಯ್ಲೋತ್ತರ ಘಟಕಗಳಿಗೆ ಅವಶ್ಯವಿರುವಯಂತ್ರೋಪಕರಣಗಳಾದ ಎಣ್ಣೆ ತೆಗೆಯುವ ಯಂತ್ರ, ಆಯಿಲ್ ಫಿಲ್ಟರ್, ಡಿಕಾರ್ಟಿಕೇಟರ್, ಆಯಿಲ್ ಪಿಲ್ಲಿಂಗ್ ಮೆಷಿನ್, ಆಯಿಲ್ ಕೇಕ್, ಕಟ್ಟಿಂಗ್ ಮಿಷನ್ ಇತ್ಯಾದಿಗಳನ್ನು ಖರೀದಿಸಲು ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳು, ರೈತ ಉತ್ಪಾದಕ ಸಂಘಗಳು […]

ಉಡುಪಿ:ವಿಕಲಚೇತನರ ರಾಜ್ಯಪ್ರಶಸ್ತಿ :ಅರ್ಜಿ ಆಹ್ವಾನ

ಉಡುಪಿ:ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿಡಿಸೆಂಬರ್ 3 ರಂದು ವಿಶ್ವ ವಿಕಲಚೇತನರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ, ಸರ್ಕಾರದ ವತಿಯಿಂದ ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡಿದ ಸಂಸ್ಥೆಗಳಿಗೆ, ವಿಶೇಷ ಶಿಕ್ಷಕರಿಗೆ ಮತ್ತು ವೈಯಕ್ತಿಕ ಪ್ರಶಸ್ತಿಗಳನ್ನು ರಾಜ್ಯ ಮಟ್ಟದಲ್ಲಿ ನೀಡಿ ಗೌರವಿಸಲು ಉದ್ದೇಶಿಸಿದೆ. ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು, […]

ಉಡುಪಿ:ಜನಸಾಮಾನ್ಯರು ನಮ್ಮ ಕ್ಲಿನಿಕ್‌ನಲ್ಲಿ ಲಭ್ಯವಿರುವ ಆರೋಗ್ಯ ಸೇವೆಯ ಪ್ರಯೋಜನ ಪಡೆದುಕೊಳ್ಳಿ : ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ: ಜನಸಾಮಾನ್ಯರು ಮೂಲಭೂತ ಪ್ರಾಥಮಿಕ ಆರೋಗ್ಯ ಸೇವೆಗಾಗಿ ದೂರ ಪ್ರಯಾಣಿಸದೇ ಜನವಸತಿಪ್ರದೇಶದಲ್ಲಿ ಆರಂಭಿಸಿರುವ ನಮ್ಮ ಕ್ಲಿನಿಕ್‌ನಲ್ಲಿ ಸುಲಭವಾಗಿ ಆರೋಗ್ಯ ಸೇವೆಗಳನ್ನು ಪಡೆದುಕೊಳ್ಳುವಂತೆ ಶಾಸಕ ಯಶ್‌ಪಾಲ್ ಎ ಸುವರ್ಣ ತಿಳಿಸಿದರು. ಅವರು ಶುಕ್ರವಾರ ನಗರದ ಗುಂಡಿಬೈಲು ದೊಡ್ಡನಗುಡ್ಡೆಯಲ್ಲಿ ನಮ್ಮ ಕ್ಲಿನಿಕ್ ಘಟಕವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ನಗರ ಪ್ರದೇಶಗಳಲ್ಲಿ ವಾಸಿಸುವ ಬಡ ಜನರಿಗೆ ನೆರವಾಗುವಂತೆ ಕೇಂದ್ರ ಮತ್ತು ರಾಜ್ಯ ಸರಕಾರದ ಸಹಯೋಗದಲ್ಲಿ ನಮ್ಮ ಕ್ಲಿನಿಕ್ ಎಂಬ ಉಚಿತ ಆರೋಗ್ಯ ಸೇವಾ ವ್ಯವಸ್ಥೆಯನ್ನು ಸ್ಥಾಪಿಸಲಾಗಿದ್ದು, ನಮ್ಮ ಕ್ಲಿನಿಕ್ ಸ್ಥಾಪನೆಯಿಂದ ಸರಕಾರಿ ಆಸ್ಪತ್ರೆಗಳ ಮೇಲಿರುವ […]