ಜೆ.ಇ.ಇ ಅಡ್ವಾನ್ಸ್ಡ್‌ನಲ್ಲಿ ಕ್ರಿಯೇಟಿವ್‌ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

ಕಾರ್ಕಳ: ದೇಶದ ಪ್ರತಿಷ್ಠಿತ IIT, IIST, IISc ನಂತಹ ಸಂಸ್ಥೆಗಳಲ್ಲಿ ಬಿ.ಟೆಕ್ (B.Tech) ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಅತೀ ಕಠಿಣವಾದ ಜೆ.ಇ.ಇ (JEE) ಅಡ್ವಾನ್ಸ್ಡ್‌ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ನ ಚೇತನ್ ಗೌಡ ಎನ್ ಎಸ್ ಸಾಮಾನ್ಯ ವಿಭಾಗದಲ್ಲಿ 3420 (OBC ವರ್ಗದಲ್ಲಿ 639)ನೇ ರ‍್ಯಾಂಕ್‌, ತೇಜಸ್ ವಿ ನಾಯಕ್ ಸಾಮಾನ್ಯ ವಿಭಾಗದಲ್ಲಿ 7773(OBC ವರ್ಗದಲ್ಲಿ 1661)ನೇ ರ‍್ಯಾಂಕ್‌, ಸಾನಿಕ ಕೆ ಎನ್ ಸಾಮಾನ್ಯ ವಿಭಾಗದಲ್ಲಿ 9701, ಮೋಹಿತ್ ಎಂ ಸಾಮಾನ್ಯ ವಿಭಾಗದಲ್ಲಿ 17504 (ST ವರ್ಗದಲ್ಲಿ […]

ದಕ್ಷಿಣ ಕನ್ನಡ ಜಿಲ್ಲೆಯಿಂದ ಅರುಣ್ ಪುತ್ತಿಲ, ಭರತ್ ಕುಮ್ಡೇಲು, ಮಹೇಶ್ ಶೆಟ್ಟಿ ತಿಮರೋಡಿ ಸೇರಿ 36 ಜನರ ಗಡೀಪಾರಿಗೆ ಪ್ರಕ್ರಿಯೆ ಆರಂಭ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಸಾಲು ಸಾಲು ಕೊಲೆಗಳು ಸರ್ಕಾರವನ್ನು ಬಡಿದೆಬ್ಬಿಸಿದ್ದು, ಬಂಟ್ವಾಳದ ಅಬ್ದುಲ್ ರಹಿಮಾನ್ ಹತ್ಯೆ ಬಳಿಕ ಜಿಲ್ಲೆಯ ಪೊಲೀಸ್ ವ್ಯವಸ್ಥೆಗೆ ಮೇಜರ್ ಸರ್ಜರಿ ಆಗಿದೆ. ಹೊಸದಾಗಿ ಅಧಿಕಾರ ಸ್ವೀಕರಿಸಿರುವವರು ಆಪರೇಷನ್ ಆರಂಭಿಸಿದ್ದಾರೆ. ಸರಣಿ ಕೊಲೆಗಳಿಂದ ಪ್ರಕ್ಷುಬ್ಧಗೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಕೋಮು ಪ್ರಚೋದನೆ ನೀಡುತ್ತಿದ್ದವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. 15 ಮುಸ್ಲಿಮರೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಟ್ಟು 36 ಜನರ ಗಡೀಪಾರಿಗೆ ಪ್ರಕ್ರಿಯೆ ಆರಂಭವಾಗಿದೆ. […]

ಉಡುಪಿ: ಹಿಂದೂ ಕಾರ್ಯಕರ್ತರನ್ನು ದಮನಿಸಲು ಹೊರಟ ಕಾಂಗ್ರೆಸ್ ಸರಕಾರ: ಶಾಸಕ ಯಶ್ಪಾಲ್ ಸುವರ್ಣ

ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಇಲಾಖೆಯ ಪೂರ್ಣ ವೈಫಲ್ಯದಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗದೇ ಹತಾಶಗೊಂಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಸುಳ್ಳು ಕೇಸ್ ದಾಖಲಿಸಿ ದಮನಿಸಲು ಹೊರಟಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದೂ ಮುಖಂಡರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ರವರ ಮೇಲೆ ಎಫ್ ಐ ಆರ್ ದಾಖಲಿಸಿ, ಅರುಣ್ ಕುಮಾರ್ ಪುತ್ತಿಲ ರನ್ನು ಗಡೀಪಾರು ಮಾಡಲು ನೋಟಿಸ್ ಜಾರಿ ಮಾಡಿದ್ದು, ಹಿಂದೂ ಕಾರ್ಯಕರ್ತರ ಮನೆಗೆ […]

ಕಾರ್ಕಳ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್: ಹಿಂದೂ ಜಾಗರಣ ವೇದಿಕೆಯ ಮುಖಂಡನ ಬಂಧನ

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಜಾತಿ ಮತ್ತು ಧರ್ಮಗಳ ನಡುವೆ ವೈರತ್ವ ಮತ್ತು ಕೋಮು ಗಲಭೆಗೆ ಪ್ರಚೋದನೆ ನೀಡುವ ಪೋಸ್ಟ್ ಹಾಕಿದ ಹಿಂದೂ ಜಾಗರಣ ವೇದಿಕೆಯ ಮುಖಂಡನನ್ನು ಅಜೆಕಾರು ಪೊಲೀಸರು ಬಂಧಿಸಿದ್ದಾರೆ. ಹಿಂದೂ ಜಾಗರಣ ವೇದಿಕೆಯ ಮುಖಂಡ ಅಜೆಕಾರು ಮರ್ಣೆ ಗ್ರಾಮದ ನಿವಾಸಿ ರತ್ನಾಕರ ಅಮೀನ್ ಬಂಧಿತ ಆರೋಪಿ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಉಡುಪಿಯ ಸುವಿದ್ಯಾ ಅಕಾಡೆಮಿಯಲ್ಲಿ ಡೈರೆಕ್ಟ್ ದ್ವಿತೀಯ ಪಿಯುಸಿ ಮಾಡುವ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಆರಂಭ

ಉಡುಪಿ: ಉಡುಪಿ ರಥ ಬೀದಿಯಲ್ಲಿರುವ ಶ್ರೀ ಪೇಜಾವರ ಮಠದ ಸನಿಹದಲ್ಲಿರುವ ಸುವಿಧ್ಯಾ ಅಕಾಡೆಮಿಯಲ್ಲಿ ಡೈರೆಕ್ಟ್ ದ್ವಿತೀಯ ಪಿಯುಸಿ ಮಾಡುವ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಆರಂಭಗೊಂಡಿದೆ. ಪ್ರಥಮ ಪಿಯುಸಿಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳು ನೇರವಾಗಿ ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ವಾಣಿಜ್ಯ ವಿಭಾಗಕ್ಕೆ ಪ್ರವೇಶ ಪಡೆದು ಅಧ್ಯಯನ ಮಾಡಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಬಹುದು. ಇಲ್ಲಿ ಪ್ರವೇಶಾತಿ ಪಡೆದವರಿಗೆ ರೆಗ್ಯುಲರ್ ತರಗತಿಗಳಿದ್ದು ಉತ್ತಮ ಬೋಧಕ ವರ್ಗದವರಿಂದ ಫಲಿತಾಂಶ ಆಧಾರಿತ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಇರುತ್ತದೆ. ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ICSF, CBSE ಮತ್ತು State […]