ಕೆಳಪರ್ಕಳದಲ್ಲಿ ಕಾರುಗಳ ನಡುವೆ ಮುಖಾಮುಖಿ ಅಪಘಾತ: ಪ್ರಯಾಣಿಕರು ಅಪಾಯದಿಂದ ಪಾರು

ಕೆಳಪರ್ಕಳ ತಿರುವಿನಲ್ಲಿ ಕಾರುಗಳ ಮಧ್ಯೆ ಮುಖಾಮುಖಿ ಅಪಘಾತ ಸಂಭವಿಸಿದ ಘಟನೆ ಇಂದು ಸಂಜೆ 4 ಗಂಟೆಗೆ ನಡೆದಿದೆ. ಪರ್ಕಳದಿಂದ ಮಣಿಪಾಲ ಕಡೆಗೆ ತೆರಳುತ್ತಿದ್ದ ಮಾರುತಿ ರಿಡ್ಜ್ ಕಾರು, ಮಣಿಪಾಲದಿಂದ ಪರ್ಕಳದ ಕಡೆಗೆ ಬರುತ್ತಿದ್ದ ಟಾಟಾ ನೆಕ್ಸನ್ ಕಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಮಾರುತಿ ರಿಡ್ಸ್ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಟಾಟಾ ನೆಕ್ಸಾನ್ ಕಾರಿಗೂ ಹಾನಿಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಅಪಾಯವಾಗಿಲ್ಲ. ಬಳಿಕ ಎರಡು ಕಾರಿನವರು ರಾಜಿ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥಗೊಳಿಸಿದ್ದಾರೆ.

ಸೆಂಗೋಲ್ ಅಳವಡಿಕೆಗೆ ಅಭಿನಂದನೆ ಸಲ್ಲಿಸಿದ ರಜನಿಕಾಂತ್; ಹೊಸ ಸಂಸತ್ ಭವನದಲ್ಲಿ ಅಖಂಡ ಭಾರತ ಭಿತ್ತಿ ಚಿತ್ರ

ನವದೆಹಲಿ: ಸಂಸತ್ ಭವನದಲ್ಲಿ ತಮಿಳುನಾಡಿನ ಚೋಳ ರಾಜರ ಅಧಿಕಾರ ಹಸ್ತಾಂತರದ ಪ್ರತೀಕವಾದ ಸೆಂಗೋಲ್ ಅಳವಡಿಸಿದ್ದಕ್ಕಾಗಿ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಪ್ರಧಾನಿ ಮೋದಿಯವರಿಗೆ ಧನ್ಯವಾದ ಹೇಳಿದ್ದಾರೆ. “ತಮಿಳಿನ ಶಕ್ತಿಯ ಸಾಂಪ್ರದಾಯಿಕ ಸಂಕೇತವಾದ ರಾಜದಂಡವು (ಸೆಂಗೊಲ್) ಭಾರತದ ಹೊಸ ಸಂಸತ್ತಿನ ಕಟ್ಟಡದಲ್ಲಿ ಪ್ರಕಾಶಮಾನವಾಗಿ ಹೊಳೆಯುತ್ತದೆ. ತಮಿಳರನ್ನು ಹೆಮ್ಮೆ ಪಡುವಂತೆ ಮಾಡಿದ್ದಕ್ಕಾಗಿ ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ನನ್ನ ಹೃದಯದ ಕೆಳಗಿನಿಂದ ಧನ್ಯವಾದಗಳು” ಎಂದು ರಜನಿಕಾಂತ್ ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಹಿಂದಿ ಚಿತ್ರನಟರಾದ ಶಾರುಖ್ ಖಾನ್, ಅಕ್ಷಯ್ ಕುಮಾರ್, ಅನುಪಮ್ […]

ನೂತನ ಸಂಸತ್ ಭವನ ಕಟ್ಟಡದಲ್ಲಿ “ಸೆಂಗೋಲ್” ಪ್ರತಿಷ್ಠಾಪಿಸಿದ ಪ್ರಧಾನಿ ಮೋದಿ

ನವದೆಹಲಿ: ಇಂದು ಬೆಳಿಗ್ಗೆ ಹೊಸ ಸಂಸತ್ ಸದನದ ಆವರಣಕ್ಕೆ ಆಗಮಿಸಿದ ಮೋದಿ, ಮಹಾತ್ಮ ಗಾಂಧೀಜಿಯವರಿಗೆ ಪುಷ್ಪ ನಮನ ಸಲ್ಲಿಸಿದರು. ನಂತರ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ನೂತನ ಕಟ್ಟಡದ ಉದ್ಘಾಟನೆಯ ಪೂಜೆಯಲ್ಲಿ ಪಾಲ್ಗೊಂಡರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೊಸ ಕಟ್ಟಡಾದ ಉದ್ಘಾಟನೆ ನಡೆಸಬೇಕು ಎಂದು ಒತ್ತಾಯಿಸಿ ಹಲವು ವಿರೋಧ ಪಕ್ಷಗಳ ಬಹಿಷ್ಕಾರದ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನೂತನ ಸಂಸತ್ ಭವನದ ಉದ್ಘಾಟನೆಗೆ ಚಾಲನೆ ನೀಡಿದರು. ನೂತನ ಕಟ್ಟಡದಲ್ಲಿ ಅತ್ಯಾಧುನಿಕ ತಂತ್ರಜ್ಞಾನ […]

ಕಾರ್ಕಳ: ಸೀರೆಯ ಜೋಕಾಲಿ ಕತ್ತಿಗೆ ಸಿಲುಕಿ ಹಾರಿಹೋಯ್ತು ಬಾಲಕಿಯ ಪ್ರಾಣಪಕ್ಷಿ

ಕಾರ್ಕಳ: ಜೋಕಾಲಿ ಆಟದಲ್ಲಿ ನಿರತರಾಗಿದ್ದಾಗ ಕುತ್ತಿಗೆಗೆ ಸೀರೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ದಾರುಣ ರೀತಿಯಲ್ಲಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ನಿಟ್ಟೆ  ಗ್ರಾಮದ ಕೆಮ್ಮಣ್ಣು ಅಂತೊಟ್ಟು ಎಂಬಲ್ಲಿ ಸಂಭವಿಸಿದೆ ಅಂತೊಟ್ಟು ನಿವಾಸಿ ಲಕ್ಷ್ಮಣ್ ಪೂಜಾರಿ ಎಂಬವರ ಮಗಳು ಮಾನ್ವಿ (9) ಎಂಬ ಬಾಲಕಿ ಮೇ 26ರ ಸಂಜೆ ಹೊತ್ತಿಗೆ ಚಿಕ್ಕಪ್ಪ ಉದಯ ಪೂಜಾರಿ ಎಂಬವರ ಮನೆಯ ಬಳಿ  ಪಕ್ಕದ್ ಮನೆಯ ದೀಕ್ಷಾ ಎಂಬಾಕೆಯ ಜೊತೆ ಸೀರೆಯನ್ನು ಕಟ್ಟಿ ಜೋಕಾಲಿ ಆಟ ಆಡುವಾಗ ಆಕಸ್ಮಿಕವಾಗಿ ಜೋಕಾಲಿಗೆ ಕಟ್ಟಿದ ಸೀರೆ ಆಕೆಯ […]

ಗೂಗಲ್ ಪ್ಲೇ ಸ್ಟೋರ್ ನಲ್ಲಿ ಬ್ಯಾಟಲ್ ಗ್ರೌಂಡ್ ಮೊಬೈಲ್ ಇಂಡಿಯಾ ವಾಪಸಾತಿ: ಮೇ 29 ರಿಂದ BGMI ಎಲ್ಲ ಸ್ಮಾರ್ಟ್ ಫೋನ್ ಗಳಲ್ಲಿ ಲಭ್ಯ

ನವದೆಹಲಿ: ಭಾರತದಾದ್ಯಂತ ಲಕ್ಷಾಂತರ ಆಟಗಾರರು ಹಂಬಲಿಸಿ ಕಾಯುತ್ತಿರುವ ಘಳಿಗೆಯೊಂದು ಅಂತಿಮವಾಗಿ ಕೊನೆಗೊಂಡಿದೆ. ಕ್ರಾಫ್ಟನ್ ಇಂಡಿಯಾ ಇದೀಗ ದೇಶಾದ್ಯಂತ ಎಲ್ಲಾ ಅಭಿಮಾನಿಗಳಿಗಾಗಿ ಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ (BGMI) ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದೆ. ಸಂಸ್ಥೆಯ ಪ್ರಕಟಣೆಯ ಪ್ರಕಾರ, ಆಟವು ಸೋಮವಾರ, ಮೇ 29, 2023 ರಿಂದ ಎಲ್ಲಾ ಮೊಬೈಲ್ ಗಳಲ್ಲಿ ಆಡಲು ಲಭ್ಯವಿರುತ್ತದೆ. ಹೆಚ್ಚುವರಿಯಾಗಿ, ಆಟವು ಈಗ Android ಸಾಧನಗಳಲ್ಲಿ ಡೌನ್‌ಲೋಡ್ ಮಾಡಲು ಲಭ್ಯವಿದೆ. ಮೇ 29 ರಂದು ಮಾತ್ರ ಐಒಎಸ್ ಬಳಕೆದಾರರಿಗೆ ಆಟವು ಡೌನ್‌ಲೋಡ್ ಮಾಡಲು […]