ಮೊದಲ ದಿನವೇ ರಾಜ್ಯಾದ್ಯಂತ 5.71 ಲಕ್ಷ ಮಹಿಳಾ ಪ್ರಯಾಣಿಕರ ಸಂಚಾರ

ಬೆಂಗಳೂರು : ಉಚಿತ ಬಸ್​ ಪ್ರಯಾಣ ಸೌಲಭ್ಯದ ಲಾಭವನ್ನು ಸಾಕಷ್ಟು ಮಹಿಳೆಯರು ಪಡೆದುಕೊಂಡಿದ್ದಾರೆ. ನಿನ್ನೆ ಮಧ್ಯಾಹ್ನ 1 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ಶಕ್ತಿ ಯೋಜನೆಯಡಿ ಸುಮಾರು 5 ಲಕ್ಷದ 71 ಸಾವಿರಕ್ಕೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷೆ ಶಕ್ತಿ ಯೋಜನೆಗೆ ಮೊದಲ ದಿನವೇ ಮಹಿಳೆಯರಿಂದ ಭರ್ಜರಿ ಸ್ಪಂದನೆ ಸಿಕ್ಕಿದೆ. ಭಾನುವಾರ ವಿಧಾನಸೌಧದಲ್ಲಿ ಚಾಲನೆ ಸಿಕ್ಕ ಶಕ್ತಿ ಗ್ಯಾರಂಟಿ ಯೋಜನೆಯನ್ನು ರಾಜ್ಯದ ಮಹಿಳೆಯರು ಖುಷಿ ಖುಷಿಯಾಗಿ ಸ್ವೀಕಾರ ಮಾಡಿದ್ದಾರೆ. ಯೋಜನೆ ಜಾರಿಗೊಂಡ […]

ಏಕದಿನ ವಿಶ್ವಕಪ್ ಕರಡು ವೇಳಾಪಟ್ಟಿ ಪ್ರಕಟ ಅಕ್ಟೋಬರ್ 15 ರಂದು ಇಂಡಿಯಾ-ಪಾಕ್​ ಕದನ.. ಗುಜರಾತ್​ ಮೈದಾನ ಸಜ್ಜು

ನವದೆಹಲಿ: “ಬಿಸಿಸಿಐ ಕರಡು ವೇಳಾಪಟ್ಟಿಯನ್ನು ಐಸಿಸಿಯೊಂದಿಗೆ ಹಂಚಿಕೊಂಡಿದೆ, ಮುಂದಿನ ವಾರದ ಆರಂಭದಲ್ಲಿ ಅಂತಿಮ ವೇಳಾಪಟ್ಟಿಯನ್ನು ಹೊರತರುವ ಮೊದಲು ಭಾಗವಹಿಸುವ ದೇಶಗಳಿಗೆ ಪ್ರತಿಕ್ರಿಯೆಗಾಗಿ ಕಳುಹಿಸಲಾಗಿದೆ” ಎಂದು ಸುದ್ದಿ ಮಾಧ್ಯಮ ಒಂದು ವರದಿ ಮಾಡಿದೆ. ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯದ ವೇಳೆ ಭಾರತದಲ್ಲಿ ಈ ವರ್ಷ ಅಂತ್ಯಕ್ಕೆ ನಡೆಯುವ ವಿಶ್ವಕಪ್​ನ ವೇಳಾ ಪಟ್ಟಿ ಪ್ರಕಟ ಆಗಲಿದೆ ಎಂದು ಹೇಳಲಾಗಿತ್ತು.ಭಾರತದಲ್ಲಿ ನಡೆಯುವ ವಿಶ್ವಕಪ್​ಗೆ ಇನ್ನು ನಾಲ್ಕು ತಿಂಗಳು ಮಾತ್ರ ಬಾಕಿ ಇದೆ. ಆದರೆ ಐಸಿಸಿ ಇನ್ನೂ ವೇಳಾ ಪಟ್ಟಿಯನ್ನು ಪ್ರಕಟಿಸಿಲ್ಲ. […]

ಭೋಪಾಲ್‌ನಲ್ಲಿ ಸರ್ಕಾರಿ ಕಚೇರಿಗಳಿರುವ ಬಹುಮಹಡಿ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ

ಭೋಪಾಲ್ (ಮಧ್ಯಪ್ರದೇಶ): ಸರ್ಕಾರಿ ಕಚೇರಿಗಳನ್ನು ಹೊಂದಿರುವ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಇಂದು ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ನಡೆದಿದೆ.ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಸರ್ಕಾರಿ ಕಚೇರಿಗಳನ್ನು ಹೊಂದಿರುವ ಸಾತ್ಪುರ ಭವನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹಲವು ದಾಖಲೆಗಳು ಹಾಗೂ ಕಂಪ್ಯೂಟರ್‌ಗಳು ಬೆಂಕಿಗಾಹುತಿಯಾಗಿವೆ ಎನ್ನಲಾಗಿದೆ. ಬೆಂಕಿಯು ಕ್ಷಣಾರ್ಧದಲ್ಲಿ ಬಹುದೊಡ್ಡ ರೂಪ ಪಡೆದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಆರು ವಾಹನಗಳ ಸಮೇತ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇಲ್ಲಿನ ಆಡಳಿತ ಕಟ್ಟಡವಾದ ಸಾತ್ಪುರ ಭವನದ ಬುಡಕಟ್ಟು ಕಲ್ಯಾಣ […]

ಭೀಮ’ನಾಗಿ ಗೋಪಿಚಂದ್, ಟಾಲಿವುಡ್​ ನಿರ್ದೇಶಕನಾಗಿ ‘ಭಜರಂಗಿ’ ಹರ್ಷ ಎಂಟ್ರಿ.. ‘ಫಿಕ್ಸ್

ತೆಲುಗಿನ ಮ್ಯಾಚೋ ಸ್ಟಾರ್ ಖ್ಯಾತಿಯ ಗೋಪಿಚಂದ್ ಹಾಗೂ ಕನ್ನಡದ ಎ. ಹರ್ಷ ಕಾಂಬೋದ ಸಿನಿಮಾಗೆ ಟೈಟಲ್ ಫಿಕ್ಸ್ ಆಗಿದೆ. ಗೋಪಿಚಂದ್ ಜನ್ಮದಿನದ ಪ್ರಯುಕ್ತ ಫಸ್ಟ್ ಲುಕ್​ ಹಾಗೂ ಟೈಟಲ್​ ಅನ್ನು ಚಿತ್ರತಂಡ ರಿವೀಲ್ ಮಾಡಿದೆ. ಕನ್ನಡದ ನಿರ್ದೇಶಕ ಎ. ಹರ್ಷ, ಟಾಲಿವುಡ್​ ಸ್ಟಾರ್​ ನಟ ಗೋಪಿಚಂದ್​ ಜೊತೆ ‘ಭೀಮ’ ಸಿನಿಮಾ ಮಾಡಲಿದ್ದಾರೆ. ‘ಭೀಮ’ನಾಗಿ ಮ್ಯಾಚೋ ಸ್ಟಾರ್ ಎಂಟ್ರಿ ಕೊಟ್ಟಿದ್ದು, ಪೊಲೀಸ್ ಖದರ್‌ನಲ್ಲಿ ಪ್ರತ್ಯಕ್ಷರಾಗಿದ್ದಾರೆ. ಮುಖದ ಮೇಲೆ ಗಾಯದ ಗುರುತು, ಉಗ್ರ ರೂಪಿಯಾಗಿ ತೀಕ್ಷ ನೋಟದ ಗೋಪಿಚಂದ್ ಹೊಸ […]

ವಸಿಷ್ಠ ಸಿಂಹಗೆ ರವಿಚಂದ್ರನ್​, ಉಪೇಂದ್ರ ಜೊತೆ ಸೇರಿ ‘ಲವ್​ ಲಿ’ ಟೈಟಲ್​ ಸಾಂಗ್​ ರಿಲೀಸ್​​..

. ನಟ ವಸಿಷ್ಠ ಸಿಂಹ ನಾಯಕನಾಗಿ ಅಭಿನಯಿಸಿರುವ ‘ಲವ್ ಲಿ’ ಚಿತ್ರದ ಟೈಟಲ್ ಹಾಡು ಇತ್ತೀಚೆಗೆ ಬಿಡುಗಡೆಯಾಗಿದ್ದು, ಸೋಷಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್ ಆಗುತ್ತಿದೆ. ವಸಿಷ್ಠ ಸಿಂಹ ನಾಯಕನಾಗಿ ನಟಿಸಿರುವ ‘ಲವ್ ​ಲಿ’ ಚಿತ್ರದ ಟೈಟಲ್​ ಹಾಡನ್ನು ಸ್ಯಾಂಡಲ್​ವುಡ್​ನ ಸ್ಟಾರ್​ ನಟರು ಬಿಡುಗಡೆಗೊಳಿಸಿದ್ದಾರೆ ಚೇತನ್ ಕೇಶವ್ ನಿರ್ದೇಶನದ ಈ ಸಿನಿಮಾದ ಹಾಡನ್ನು ಕ್ರೇಜಿ ಸ್ಟಾರ್​ ರವಿಚಂದ್ರನ್​, ರಿಯಲ್ ಸ್ಟಾರ್ ಉಪೇಂದ್ರ, ‘ನೆನಪಿರಲಿ’ ಪ್ರೇಮ್, ಪ್ರಿಯಾಂಕಾ ಉಪೇಂದ್ರ ಹಾಗೂ ಹರಿಪ್ರಿಯಾ ಜೊತೆಯಾಗಿ ಅನಾವರಣಗೊಳಿಸಿದ್ದಾರೆ. ಬಳಿಕ ಚಿತ್ರದ ಬಗ್ಗೆ ಮಾತನಾಡಿದ […]