Belthangadi; ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಮಹಾ ಸಂಪರ್ಕ ಅಭಿಯಾನ ಯಶಸ್ವಿ

ಬೆಳ್ತಂಗಡಿ: ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಹಮ್ಮಿಕೊಂಡಿದ್ದ ಮಹಾ ಸಂಪರ್ಕ ಅಭಿಯಾನದಡಿ ಬೆಳ್ತಂಗಡಿ ಮಂಡಲದಲ್ಲಿ ಬಿಜೆಪಿ ಅಭ್ಯರ್ಥಿ, ಶಾಸಕ ಹರೀಶ್‌ ಪೂಂಜ ಅವರ ಪರ 20 ಸಾವಿರ ಕಾರ್ಯಕರ್ತರು 50 ಸಾವಿರ ಮನೆಗಳನ್ನು ಸಂಪರ್ಕಿಸುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಿದರು. ಬೆಳ್ತಂಗಡಿ ಮಂಡಲದ 81 ಗ್ರಾಮಗಳ 241 ಬೂತ್‌ಗಳಲ್ಲಿ ಮಹಾಸಂಪರ್ಕ ಅಭಿಯಾನ ಹಮ್ಮಿಕೊಂಡಿದ್ದು ಮತದಾರರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಯಿತು. ಒಂದೇ ದಿನ 20 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಉತ್ಸುಕತೆಯಿಂದ ಪಾಲ್ಗೊಂಡು 50 ಸಾವಿರಕ್ಕೂ ಅಧಿಕ ಮನೆಗಳಿಗೆ ಭೇಟಿ […]

ವಿರಾಟ್ ಕೊಹ್ಲಿ, ಗೌತಮ್ ಗಂಭೀರ್ ಮಾತಿನ ಚಕಮಕಿ ಪ್ರಕರಣ: ಪಂದ್ಯದ ಶುಲ್ಕದ 100% ದಂಡ ವಿಧಿಸಿದ ಬಿಸಿಸಿಐ

ಸೋಮವಾರ ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯದ ವೇಳೆ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ ವಿರಾಟ್ ಕೊಹ್ಲಿ, ಗೌತಮ್ ಗಂಭೀರ್ ಮತ್ತು ನವೀನ್-ಉಲ್-ಹಕ್ ವಿರುದ್ಧ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದೆ. ಕೊಹ್ಲಿ, ಗಂಭೀರ್ ಅವರು ಲೆವೆಲ್ 2 ಅಪರಾಧದಲ್ಲಿ ತಪ್ಪಿತಸ್ಥರೆಂದು ಕಂಡುಬಂದ ನಂತರ ಅವರ ಪಂದ್ಯದ ಶುಲ್ಕದ 100% ದಂಡವನ್ನು ವಿಧಿಸಲಾಯಿತು. ನವೀನ್-ಉಲ್-ಹಕ್ ಅವರ ಲೆವೆಲ್ 1 ಅಪರಾಧಕ್ಕಾಗಿ ತಮ್ಮ ಪಂದ್ಯದ ಶುಲ್ಕದ 50% ರಷ್ಟನ್ನು ಕಳೆದುಕೊಂಡರು. […]

ಔರಾ ಕೆಫೆ&ಕೇಕ್ ಶಾಪ್ ಶುಭಾರಂಭ

ಉಡುಪಿ: ನಗರದ ಹೊಸ ಬಸ್ ನಿಲ್ದಾಣದ ಬಳಿಯ ಜಿ.ಬಿ. ಪಂತ್ ರಸ್ತೆಯಲ್ಲಿರುವ ಗ್ರಾಸ್ ಲಾಂಡ್ ಕಾಂಪ್ಲೆಕ್ಸ್ ನಲ್ಲಿ ಔರಾ ಕೆಫೆ ಶಾಪ್ ಭಾನುವಾರಂದು ಶುಭಾರಂಭಗೊಂಡಿತು. ಸೇಂಟ್ ಆಂಟೋನಿ ಆರ್ಥೊಡಾಕ್ಸ್ ಚರ್ಚ್ ಕೊಳಲಗಿರಿ ಇದರ ಧರ್ಮಗುರು ಫಾ.ಡೇವಿಡ್ ಕ್ರಾಸ್ತಾ ಬೇಕರಿಯನ್ನು ಉದ್ಘಾಟಿಸಿದರು. ಬೇಕರಿ ಮಾಲೀಕರಾದ ನಿಶಾನ್ ಡಿಸೋಜಾ ಮತ್ತು ನೆಯಾನ್ ಡಿಸೋಜಾ ಉಪಸ್ಥಿತರಿದ್ದರು. ಔರಾ ಕೆಫೆ ಶಾಪ್ ನಲ್ಲಿ ಮನೆಯಲ್ಲೇ ತಯಾರಿಸಿದ ಐಸ್ ಕ್ರೀಮ್, ಬೇಕರಿ ಉತ್ಪನ್ನಗಳು, ಚಾಕೋಲೇಟ್ ಗಳು ಹಾಗೂ ಪೆಸ್ಟ್ರಿಗಳು ದೊರೆಯುತ್ತವೆ.

ಮತದಾನದ ದಿನದಂದು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲು ಆದೇಶ

ಉಡುಪಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು ಮೇ 10 ರಂದು ಚುನಾವಣೆ ನಿಗದಿಪಡಿಸಿದ್ದು, ಸದರಿ ದಿನದಂದು ಜಿಲ್ಲೆಯಾದ್ಯಂತ ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು, 1951ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ)ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ ಕಾಯ್ದೆ-1963 ಕಲಂ 3(ಎ) ಅನ್ವಯ ಅರ್ಹ ಕಾರ್ಮಿಕ ಮತದಾರರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಘೋಷಿಸಿ, ಮತ ಚಲಾಯಿಸಲು ಅನುವು […]

ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ

 ಕಾಪು: ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಲಾಲಾಜಿ ಆರ್. ಮೆಂಡನ್ ಅವರೊಂದಿಗೆ ಬಂಟಕಲ್ಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.