ಮಾಜಿ ಶಾಸಕ ಯು.ಆರ್. ಸಭಾಪತಿ‌ ನಿಧನ

ಉಡುಪಿ: ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಯು.ಆರ್. ಸಭಾಪತಿ (71) ಅಲ್ಪಕಾಲದ ಅಸೌಖ್ಯದಿಂದ ರವಿವಾರ ಬೆಳಗ್ಗೆ ನಿಧನರಾದರು. 1987ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪರಿಷತ್ ನ ಉದ್ಯಾವರ ಕ್ಷೇತ್ರದ ಸದಸ್ಯರಾಗಿದ್ದ ಇವರು, ಪರಿಷತ್ ನ ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಅದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉತ್ತರ ವಿಭಾಗದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 1989ರಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಉಡುಪಿ ಕ್ಷೇತ್ರದಿಂದ ಟಿಕೆಟ್ ಸಿಗದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಮನೋರಮಾ ಮಧ್ವರಾಜ್ […]

ಕರ್ನಾಟಕದ ನೂತನ ಅಡ್ವೊಕೇಟ್ ಜನರಲ್ ಆಗಿ ಕೆ ಶಶಿಕಿರಣ್ ಶೆಟ್ಟಿ ನೇಮಕ

ಬೆಂಗಳೂರು: ಕರ್ನಾಟಕದ ನೂತನ ಅಡ್ವೊಕೇಟ್ ಜನರಲ್ ಆಗಿ ಹಿರಿಯ ವಕೀಲ ಕೆ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಹಳೆಯ ವಿದ್ಯಾರ್ಥಿಯಾಗಿರುವ ಶಶಿಕಿರಣ್ ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರ ಪುತ್ರರಾಗಿದ್ದಾರೆ. ಇವರು 23 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಇವರು ಸಾಂವಿಧಾನಿಕ ಕಾನೂನು, ಆಡಳಿತಾತ್ಮಕ ಕಾನೂನು, ಮಧ್ಯಸ್ಥಿಕೆ ಕಾನೂನು, ಆಸ್ತಿ ಹಕ್ಕುಗಳು, ಕುಟುಂಬ ಕಾನೂನು, ಸಾಲ ವಸೂಲಾತಿ, ಪರಿಸರ ಕಾನೂನುಗಳು ಮತ್ತು ಬ್ಯಾಂಕಿಂಗ್ ಕಾನೂನುಗಳಲ್ಲಿ ಪರಿಣತಿ ಹೊಂದಿದ್ದಾರೆ. […]

ಉದ್ಯಾವರ ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನ: ಇಂದು ಬ್ರಹ್ಮಕುಂಭಾಭಿಷೇಕ

ಉಡುಪಿ: ಇತಿಹಾಸ ಪ್ರಸಿದ್ಧ ಉದ್ಯಾವರ ಶ್ರೀ ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನವೀಕೃತ ತಾಮ್ರ ಸುತ್ತುಪೌಳಿ ಸಮರ್ಪಣೆ, ಬ್ರಹ್ಮಕುಂಭಾಭಿಷೇಕ ಹಾಗೂ ರಾಶಿ ಪೂಜಾ ಮಹೋತ್ಸವವು ಮೇ.24ರ ತನಕ ನಡೆಯಲಿದೆ. ಇಂದು ಬ್ರಹ್ಮಕುಂಭಾಭಿಷೇಕ: ಮೇ 21ರ ಬೆಳಿಗ್ಗೆ 9.15ಕ್ಕೆ ಶ್ರೀ ಸಿದ್ಧಿ ವಿನಾಯಕ ದೇವರಿಗೆ ಬ್ರಹ್ಮಕುಂಭಾಭಿಷೇಕ, ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ. ಧಾರ್ಮಿಕ ಸಭಾ ಕಾರ್ಯಕ್ರಮಗಳು: ಮೇ 21ರಂದು ಸಂಜೆ 5.30ಕ್ಕೆ ಧಾರ್ಮಿಕ ಸಭೆಯಲ್ಲಿ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹಾಗೂ ಭೀಮನಕಟ್ಟೆ ಮಠದ ಶ್ರೀ […]

ಮೇ.20 ರಿಂದ 25: ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಹಿರಿಯಡಕ: ಕಾರ್ಕಳ ತಾಲೂಕಿನ ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ, ಶ್ರೀ ಭದ್ರಕಾಳಿ ದೇವರಿಗೆ ಬ್ರಹ್ಮಕಲಶೋತ್ಸವವು ಮೇ.20 ರಿಂದ 25 ರವರೆಗೆ ವೇದಮೂರ್ತಿ ಷಡಂಗ ಶ್ರೀ ಬಿ. ಗುರುರಾಜ ತಂತ್ರಿ ಅವರ ನೇತೃತ್ವದಲ್ಲಿ ಜರಗಲಿದೆ. ಧಾರ್ಮಿಕ ಕಾರ್ಯಕ್ರಮಗಳು: ಮೇ.20 ರ ಬೆಳಿಗ್ಗೆ 12 ಕಾಯಿ ಗಣಪತಿ ಹೋಮ, ನವಗ್ರಹ ಹೋಮ, ಸಂಜೆ 5ರಿಂದ ಧಾರ್ಮಿಕ ಸಭೆ, ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ, ಭೋಜನ ಶಾಲೆ, ಪಾಕಶಾಲೆ, ವಸಂತ ಮಂಟಪ ಉದ್ಘಾಟನೆ ನಡೆಯಲಿದೆ. ಶ್ರೀ ಪೇಜಾವರ […]

ಕುಂದಾಪುರ: ವಿವಾಹಿತೆ ನಾಪತ್ತೆ

ಉಡುಪಿ: ಕುಂದಾಪುರ ತಾಲೂಕು ಕಾಳಾವರ ಗ್ರಾಮದ ಗರಗದ್ದೆ ನಿವಾಸಿ ಅಕ್ಷತಾ (28) ಎಂಬ ಮಹಿಳೆಯು ಮಾರ್ಚ್ 21 ರಂದು ಕೂಲಿ ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಮೊ.ನಂ: 9480805468, ಕುಂದಾಪುರ ಪೊಲೀಸ್ ವೃತ್ತ ನಿರೀಕ್ಷಕರು ಮೊ.ನಂ: 9480805433 ಅಥವಾ ಉಡುಪಿ […]