ಒಂದು ವರ್ಷ ಪೂರೈಸಿದ ರಕ್ಷಿತ್ ಶೆಟ್ಟಿ ಸಿನಿಮಾ: Charlie 777 ‘ಚಾರ್ಲಿ’ಯನ್ನು ಅಪ್ಪಿ ಒಪ್ಪಿಕೊಂಡ ದಿನ
Charlie 777: ಅಂದು ಜೂನ್ 10, ಇಡೀ ಕರ್ನಾಟಕಕ್ಕೆ ‘ಚಾರ್ಲಿ’ ಪರಿಚಯವಾದ ದಿನ. ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಯವರ ನಟನೆಗೆ ಕನ್ನಡಿಗರು ಮತ್ತೊಮ್ಮೆ ಮನಸೋತ ದಿನ.ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ‘ಚಾರ್ಲಿ 777’ ಸಿನಿಮಾ ಒಂದು ವರ್ಷ ಪೂರೈಸಿದೆ. ಕಿರಣ್ ರಾಜ್ರಂತಹ ಅದ್ಭುತ ನಿರ್ದೇಶಕ ಸ್ಯಾಂಡಲ್ವುಡ್ಗೆ ಎಂಟ್ರಿಯಾದ ದಿನ. ಹೌದು, ಕಳೆದ ವರ್ಷ ಇದೇ ದಿನದಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಿ ಧೂಳೆಬ್ಬಿಸಿದ ಚಿತ್ರ ‘ಚಾರ್ಲಿ 777’, ಇಂದು ಒಂದು ವರ್ಷ ಪೂರೈಸಿದ ಸಂಭ್ರಮದಲ್ಲಿದೆ. ಯಾವುದೇ […]
ವಿನಯ್ ರಾಜ್ಕುಮಾರ್ಗೆ ಸ್ಟಾರ್ ತಾರೆಯರು ಸಾಥ್ ‘ಗ್ರಾಮಾಯಣ’ ಚಿತ್ರಕ್ಕೆ ಅದ್ದೂರಿ ಚಾಲನೆ
ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಚಿತ್ರಗಳ ಮೂಲಕ ತನ್ನದೇ ಸ್ಟಾರ್ಗಿರಿ ಗಿಟ್ಟಿಸಿಕೊಂಡಿರುವ ನಟ ವಿನಯ್ ರಾಜ್ಕುಮಾರ್ ಸದ್ಯ ‘ಗ್ರಾಮಾಯಣ’ ಎಂಬ ಸಿನಿಮಾವನ್ನು ಮಾಡುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಆರಂಭ ಫಲಕ ತೋರಿದರು. ಅಶ್ವಿನಿ ಪುನೀತ್ ರಾಜ್ಕುಮಾರ್ ಕ್ಯಾಮರಾ ಚಾಲನೆ ಮಾಡಿದರು. ನಟ ವಿನಯ್ ರಾಜ್ಕುಮಾರ್ ಅಭಿನಯದ ‘ಗ್ರಾಮಾಯಣ’ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ನಟ ರಾಘವೇಂದ್ರ […]
ಇಳಿ ವಯಸ್ಸಿನಲ್ಲೂ ಉತ್ಸಾಹದಿಂದ ಇಂಗ್ಲೀಷ್ ಎಂಎ ಪರೀಕ್ಷೆ ಬರೆದಿರುವ ವಿಜಯಪುರದ ತಾತನ ಸಾಧನೆ
ವಿಜಯಪುರ: ಕಲಿಕೆಗೆ ವಯಸ್ಸಿನ ಮಿತಿ ಇರದು. ದೇಹಕ್ಕೆ ವಯಸ್ಸಾಗಬಹುದೇ ಹೊರತು ಕಲಿಕೆಯ ಆಸಕ್ತಿಗೆ ಅಲ್ಲ ಎಂಬುದನ್ನು 81 ವರ್ಷದ ಹಿರಿಯ ನಾಗರಿಕರೊಬ್ಬರು ತೋರಿಸಿ ಕೊಟ್ಟಿದ್ದಾರೆ.81ನೇ ವಯಸ್ಸಿನಲ್ಲಿ ಇಂಗ್ಲೀಷ್ ಎಂಎ ಪರೀಕ್ಷೆ ಬರೆದ ವಿಜಯಪುರದ ವ್ಯಕ್ತಿ! ಸಾಧನೆಗೆ ಪತ್ನಿಯೇ ಪ್ರೇರಣೆಯಂತೆ ಇಳಿ ವಯಸ್ಸಿನಲ್ಲೂ ಉತ್ಸಾಹದಿಂದ ಪರೀಕ್ಷೆ ಬರೆದಿರುವ ವಿಜಯಪುರದ ತಾತನ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗಿದೆ. ತಮ್ಮ ಈ ಸಾಧನೆಗೆ ತಮ್ಮ ಪತ್ನಿ ಕಾರಣ ಎಂದು ಸಂತಸದಿಂದ ಹೇಳುವ ನಿಂಗಯ್ಯ ಒಡೆಯರ, 81 ರ ಇಳಿ ವಯಸ್ಸಿನಲ್ಲಿಯೂ ಯೋಗಪಟುವಾಗಿದ್ದಾರೆ. ವಿಶಿಷ್ಟವಾದ […]
ಆಸ್ಟ್ರೇಲಿಯಾಕ್ಕೆ 173 ರನ್ಗಳ ಮುನ್ನಡೆ: ಭಾರತಕ್ಕೆ ರಹಾನೆ- ಶಾರ್ದೂಲ್ ಬಲ, 296 ರನ್ಗಳಿಗೆ ಆಲೌಟ್
ಓವೆಲ್ (ಲಂಡನ್): ಅಜಿಂಕ್ಯ ರಹಾನೆ ಹಾಗೂ ಶಾರ್ದೂಲ್ ಠಾಕೂರ್ ಅವರ ಅರ್ಧಶತಕದ ನೆರವಿನಿಂದ ಭಾರತ ಅಲ್ಪಮೊತ್ತಕ್ಕೆ ಕುಸಿಯುವ ಭೀತಿಯಿಂದ ತಪ್ಪಿಸಿಕೊಂಡಿತು.ಅಜಿಂಕ್ಯ ರಹಾನೆ ಮತ್ತು ಶಾರ್ದೂಲ್ ತಾಳ್ಮೆಯ ಜೊತೆಯಾಟದ ನೆರವಿನಿಂದ ಭಾರತ ಮೊದಲ ಇನ್ನಿಂಗ್ಸ್ನಲ್ಲಿ 296 ರನ್ ಗಳಿಸಲಷ್ಟೇ ಶಕ್ತವಾಯಿತು.69.4 ಓವರ್ಗಳಲ್ಲಿ 296 ರನ್ ಗಳಿಸಿ ತಂಡ ಆಲ್ಔಟಾಗಿದೆ. ಆಸ್ಟ್ರೇಲಿಯಾ 173 ರನ್ಗಳ ಮುನ್ನಡೆ ಗಳಿಸಿತು. ಭೋಜನ ವಿರಾಮದಿಂದ ಮರಳಿದ ಕೂಡಲೇ ಅಜಿಂಕ್ಯ ರಹಾನೆ ವಿಕೆಟ್ ಒಪ್ಪಿಸಿದರು. ಇದರಿಂದಾಗಿ ಅವರು 11 ರನ್ಗಳಿಂದ ಶತಕ ವಂಚಿತರಾದರು. […]
ನಾಳೆ ಕರ್ನಾಟಕಕ್ಕೆ ಮುಂಗಾರು ಆಗಮನ ನಿರೀಕ್ಷೆ: ಬಿಪರ್ಜಾಯ್ ಚಂಡಮಾರುತದಿಂದಾಗಿ ಮಂಗಳೂರಿಗೆ ತಂಪೆರೆದ ಮಳೆರಾಯ
ಮಂಗಳೂರು: ನಿನ್ನೆ ಮುಂಗಾರು ಮಳೆ ಕೇರಳ ಪ್ರವೇಶಿಸಿದೆ. ನಾಳೆ ಕರ್ನಾಟಕ ಪ್ರವೇಶಿಸುವ ಸಾಧ್ಯತೆ ಇದೆ. ಬಿಸಿಲಿನ ಧಗೆಗೆ ಕಂಗೆಟ್ಟಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಮುಂಗಾರು ಮಳೆಯ ಆಗಮನವಾಯಿತು. ವಾಡಿಕೆಯಂತೆ ಜೂನ್ 1ಕ್ಕೆ ಬರಬೇಕಿದ್ದ ಮುಂಗಾರು ತೀವ್ರ ವಿಳಂಬವಾಗಿದ್ದು, ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಬೇಸಿಗೆಯಿಂದ ಕಂಗೆಟ್ಟಿದ್ದ ಜನರಿಗೆ ಇಂದು ಬೆಳಗ್ಗೆ ಆರಂಭವಾದ ಮಳೆ ಖುಷಿ ಕೊಟ್ಟಿತು. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಉಂಟಾದ ಬಿಪರ್ಜಾಯ್ ಚಂಡಮಾರುತದ ಪ್ರಭಾವದಿಂದ ಇಂದಿನಿಂದ ಮಳೆ ಆರಂಭವಾಗಿದೆ. ಕೇರಳ ಭಾಗದಿಂದ ಉತ್ತರಕ್ಕೆ […]