ಉಡುಪಿ ಮಹಿಳಾ ಪ್ರಥಮ ದರ್ಜೆ ಕಾಲೇಜು: ವಿದ್ಯಾರ್ಥಿ ವೇದಿಕೆ ಮತ್ತು ಪ್ರತಿಭಾ ದಿನಾಚರಣೆಯ ಉದ್ಘಾಟನಾ ಕಾರ್ಯಕ್ರಮ

ಉಡುಪಿ:ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು, ಉಡುಪಿ ಇಲ್ಲಿನ 2022-23ನೇ ಸಾಲಿನ ವಿದ್ಯಾರ್ಥಿ ವೇದಿಕೆ ಮತ್ತು ಪ್ರತಿಭಾ ದಿನಾಚರಣೆಯ ಉದ್ಘಾಟನಾ ಕಾರ್ಯಕ್ರಮವನ್ನು ಮಂಗಳವಾರ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳಲಾಯಿತು. ನಾಡೋಜ ಡಾ. ಜಿ.ಶಂಕರ್ ಕಾಲೇಜಿನ ಮಹಾ ಪೋಷಕರು ಕಾರ್ಯಕ್ರಮವನ್ನು ಉದ್ಘಾಟಿಸಿ “ಉಡುಪಿ ಜಿಲ್ಲೆಯ ಲೀಡ್ ಕಾಲೇಜು ಆಗಿರುವ ನಮ್ಮ ಕಾಲೇಜಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಮತ್ತು ಮದ್ಯಮ ವರ್ಗದ ವಿದ್ಯಾರ್ಥಿನಿಯರು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕಾಲೇಜು […]

ಸ್ವರಕ್ಷಣೆ ಮತ್ತು ಜಾಗರೂಕತೆ ಮಹಿಳೆಯರಿಗೆ ಭೂಷಣ: ಎಸ್.ಐ ವೆಲೆಟ್ ಫೆಮಿನಾ

ಉಡುಪಿ: ತಂತ್ರಜ್ಞಾನ ಬೆಳೆದಂತೆ ಮೋಸದ ಬಲೆಯಲ್ಲಿ ಬೀಳಿಸಲು ಪ್ರಯತ್ನಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಅವಿದ್ಯಾವಂತರಿಗಿಂತ ವಿದ್ಯಾವಂತರೆ ಹೆಚ್ಚು ಹೆಚ್ಚು ಮೋಸದ ಬಲೆಗೆ ಬೀಳುತ್ತಿದ್ದಾರೆ. ಪ್ರಸ್ತುತ ಸನ್ನಿವೇಶದಲ್ಲಿ ಹೆಣ್ಣು ಮಕ್ಕಳು ಮತ್ತು ಮಹಿಳೆಯರು ತಮ್ಮ ಬಗ್ಗೆ ಜಾಗರೂಕರಾಗಿರುವ ಅವಶ್ಯಕತೆ ಹೆಚ್ಚಿದೆ. ಸ್ವರಕ್ಷಣೆ ಮತ್ತು ಜಾಗರೂಕತೆ ಎಲ್ಲ ಕಾಲ ಮತ್ತು ಸನ್ನಿವೇಶಗಳಲ್ಲೂ ಮಹಿಳೆಯರಿಗೆ ಭೂಷಣ ಎಂದು ಉಡುಪಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶ್ರೀಮತಿ ವೆಲೆಟಾ ಫೆಮಿನಾ ಅಭಿಪ್ರಾಯಪಟ್ಟರು. ಅವರು ಇತ್ತೀಚಿಗೆ ಉಡುಪಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ […]

ಪೆರ್ಡೂರು: ರಾಜ್ಯಮಟ್ಟದ ಕ್ರಿಕೆಟ್ ಆಟಗಾರ ರಕ್ಷಿತ್ ಶೆಟ್ಟಿ ನಿಧನ

ಪೆರ್ಡೂರು: ಉಡುಪಿ- ರಾಜ್ಯ, ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾಟಗಳಲ್ಲಿ ಮಿಂಚಿದ್ದ ವೇಗಿ, ಉದಯೋನ್ಮುಖ ಕ್ರಿಕೆಟಿಗ ರಕ್ಷಿತ್ ಶೆಟ್ಟಿ ಪೆರ್ಡೂರು(29 ವರ್ಷ) ಬ್ರೈನ್ ಟ್ಯೂಮರ್ ನಿಂದ ಇಂದು ನಿಧನರಾದರು. ಪೆರ್ಡೂರು ಬುಕ್ಕಿಗುಡ್ಡೆ ನಿವಾಸಿಯಾಗಿರುವ ರಕ್ಷಿತ್ ಶೆಟ್ಟಿ ಇವರು ಗೆಳೆಯರ ಬಳಗ ಪೆರ್ಡೂರು ತಂಡದ ಮೂಲಕ ಕ್ರಿಕೆಟ್ ಜೀವನವನ್ನು ಪ್ರಾರಂಭಿಸಿದರು. ನಂತರ ಯಂಗ್ ಸ್ಟಾರ್ ಪೆರ್ಡೂರು, ದುರ್ಗಾ ಆತ್ರಾಡಿ ತಂಡಗಳ ಪರವಾಗಿ ಜಿಲ್ಲಾಮಟ್ಟದ ಪಂದ್ಯಗಳನ್ನಾಡಿದ್ದರು‌. ಉದ್ಯೋಗ ನಿಮಿತ್ತ ಬೆಂಗಳೂರಿನಲ್ಲಿ ನೆಲೆಸಿದ ರಕ್ಷಿತ್ ಶೆಟ್ಟಿ ಎಸ್.ಝಡ್‌‌.ಸಿ.ಸಿ ಮತ್ತು ಎಮ್‌.ಬಿ.ಸಿ.ಸಿ ತಂಡಗಳ ಪರವಾಗಿ […]

ಜ.05: ಜಿಲ್ಲೆಯಲ್ಲಿ ರಾಜ್ಯಪಾಲರ ಪ್ರವಾಸ ಕಾರ್ಯಕ್ರಮ

ಉಡುಪಿ: ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಜನವರಿ 5 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಅಂದು ಬೆಳಗ್ಗೆ 10.30 ಕ್ಕೆ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಪುರುಷರ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ವಾಲಿಬಾಲ್ ಚಾಂಪಿಯನ್‌ಶಿಪ್ ಪಂದ್ಯದ ಉದ್ಘಾಟನೆ ನೆರವೇರಿಸಿ, ನಂತರ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ.

ಕಾಪು: ತಾಯಿ, ಮಗು ನಾಪತ್ತೆ

ಉಡುಪಿ: ಕಾಪು ತಾಲೂಕು ಮಲ್ಲಾರು ಗ್ರಾಮದ ಕೊಂಬುಗುಡ್ಡೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಮುತ್ತವ್ವ (26) ಎಂಬ ಮಹಿಳೆಯು ತನ್ನ 2 ವರ್ಷ 6 ತಿಂಗಳ ಮಗುವಾದ ಗಂಗಾನೊಂದಿಗೆ ಡಿಸೆಂಬರ್ 25 ರಿಂದ ನಾಪತ್ತೆಯಾಗಿರುತ್ತಾರೆ. 4 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಮೊ.ನಂ: 9480805449, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: […]