ವೈದ್ಯರ ದಿನದ ಶುಭಾಶಯಗಳು…
ಮಹಾರಾಷ್ಟ್ರ ಬಿಕ್ಕಟ್ಟು: ಉದ್ಧವ್ ಠಾಕ್ರೆ ರಾಜೀನಾಮೆ, ಎಲ್ಲರ ಚಿತ್ತ ಬಿಜೆಪಿಯತ್ತ
ಮುಂಬಯಿ: ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಗುರುವಾರ, ಜೂನ್ 30 ರಂದು ನಡೆಯಬೇಕಿದ್ದ ಮಹತ್ತರ ಪರೀಕ್ಷೆಗೂ ಮುನ್ನ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಠಾಕ್ರೆ ಅಧಿಕಾರದಿಂದ ಕೆಳಗಿಳಿಯುವುದರೊಂದಿಗೆ ಮಹಾರಾಷ್ಟ್ರದ ರಾಜಕೀಯ ಚಿತ್ರಣವೇ ಬದಲಾಗಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬುಧವಾರ ರಾತ್ರಿ ರಾಜಭವನದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯಪಾಲರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಮತ್ತು ಪರ್ಯಾಯ ವ್ಯವಸ್ಥೆ ಮಾಡುವವರೆಗೆ ಉದ್ಧವ್ ಠಾಕ್ರೆ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವಯಲು ತಿಳಿಸಿದ್ದಾರೆ. ಶಿವಸೇನೆಯ ಮುಖ್ಯ ಸಚೇತಕ ಸುನೀಲ್ […]
ಆರ್.ಎಸ್.ಬಿ ಸಭಾಭವನದ ಮುಂಭಾಗದಲ್ಲಿ ಆರ್.ಎಸ್.ಬಿ ವೃತ್ತ ನಾಮಕರಣ: ಆಕ್ಷೇಪಣೆ ಆಹ್ವಾನ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಮಣಿಪಾಲ ಆರ್.ಎಸ್.ಬಿ ಸಭಾಭವನದ ಮುಂಭಾಗದಲ್ಲಿ ವೃತ್ತ ನಿರ್ಮಿಸಿ, ಆರ್.ಎಸ್.ಬಿ ವೃತ್ತ ಎಂದು ನಾಮಕರಣ ಮಾಡಲು ಮಣಿಪಾಲದ ರಾಜಾಪುರ ಸಾರಸ್ವತ ಬ್ರಾಹ್ಮಣ ಸಂಘದ ಅಧ್ಯಕ್ಷರು ಮನವಿ ಸಲ್ಲಿಸಿದ್ದು, ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು 30 ದಿನಗಳ ಒಳಗೆ ನಗರಸಭಾ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಟಿ20 ಪವರ್ಪ್ಲೇ ಐರ್ಲೆಂಡ್ ವರ್ಸಸ್ ಭಾರತ: ಅತ್ಯಾಧಿಕ ವಿಕೆಟ್ ಕಬಳಿಸಿ ಭುವನೇಶ್ವರ್ ಕುಮಾರ್ ವಿಶ್ವ ದಾಖಲೆ
ಡಬ್ಲಿನ್ನಲ್ಲಿ ನಡೆದ ಭಾರತ ಮತ್ತು ಐರ್ಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಭಾರತದ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಇತಿಹಾಸ ನಿರ್ಮಿಸಿ ದೊಡ್ಡ ವಿಶ್ವ ದಾಖಲೆ ಬರೆದಿದ್ದಾರೆ. ಭುವಿ, ತಮ್ಮ 3 ಓವರ್ಗಳ ಕೋಟಾದಲ್ಲಿ 16 ರನ್ಗಳನ್ನು ನೀಡಿ ವಿಕೆಟ್ ಪಡೆದರು, ಈ ಸಮಯದಲ್ಲಿ ಅವರು ಒಂದು ಮೇಡನ್ ಓವರ್ ನೀಡಿದ್ದಾರೆ. ಭುವನೇಶ್ವರ್ ಪವರ್ಪ್ಲೇನಲ್ಲಿ ಐರ್ಲೆಂಡ್ ವಿರುದ್ಧ ಏಕೈಕ ವಿಕೆಟ್ ಪಡೆದಿದ್ದಾರೆ. ಈಗ ಟಿ20 ಕ್ರಿಕೆಟ್ನ […]
ರಾಷ್ಟ್ರದ ಅಭಿವೃದ್ದಿ ಪ್ರತಿಯೊಬ್ಬ ವಿದ್ಯಾರ್ಥಿಯ ಜವಾಬ್ದಾರಿ: ಪ್ರೊ. ನರೇಂದ್ರ.ಎಲ್.ನಾಯಕ್
ಮಂಗಳೂರು: ವಿದ್ಯಾರ್ಥಿಗಳು ಜೀವನದಲ್ಲಿ ನಿಖರವಾದ ಗುರಿಯನ್ನುಹೊಂದಿರಬೇಕು ಹಾಗೂ ಆ ಗುರಿ ಸಾಧಿಸುವಲ್ಲಿ ನಿರಂತರ ಪ್ರಯತ್ನ ಮಾಡಬೇಕು. ಸರಿಯಾದ ಯೋಜನೆ, ಕಠಿಣ ಪರಿಶ್ರಮ, ಸಮರ್ಪಣಾ ಮನೋಭಾವ ಹಾಗೂ ಛಲದೊಂದಿಗೆ ಮುನ್ನಡೆದರೆ ಸಾಧನೆಯ ಶಿಖರವನ್ನು ತಲುಪಲು ಸಾಧ್ಯ. ವಿದ್ಯಾರ್ಥಿಗಳು ಸ್ವಯಂ ಶಿಸ್ತುಬದ್ಧರಾಗಿದರೆ ಮಾತ್ರ ಈ ರಾಷ್ಟ್ರ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುತ್ತದೆ. ಆದ್ದರಿಂದ ರಾಷ್ಟ್ರದ ಅಭಿವೃದ್ಧಿ ಪ್ರತಿಯೊಬ್ಬ ವಿದ್ಯಾರ್ಥಿಯ ಕೈಯಲ್ಲಿದೆ. ಆ ಜವಾಬ್ದಾರಿಯನ್ನರಿತು ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಗಂಭೀರವಾಗಿ ಅಧ್ಯಯನ ಮಾಡಬೇಕು. ಕಾಲೇಜಿನಲ್ಲಿ ಕೆಲವೊಂದು ನಿಯಮ ನಿಬಂಧನೆಗಳು ಇದ್ದುಅದನ್ನುಯಾವುದೇ ಕಾರಣಕ್ಕೂ […]