ಸಂಗೀತ ವಿದುಷಿ ವಸಂತಿ ರಾಮ‌ಭಟ್ ನಿಧನ

ಉಡುಪಿ: ಖ್ಯಾತ ಸಂಗೀತ ವಿದುಷಿ ವಸಂತಿ ರಾಮ‌ಭಟ್ (82) ಅವರು ಭಾನುವಾರ ನಿಧನರಾದರು. ವಸಂತಿ ಎಂ.ಜಿ.ಎಂ.ಕಾಲೇಜಿನ ಪ್ರಾಂಶುಪಾಲರಾಗಿದ್ದ ಪ್ರೊ.ರಾಮ ಭಟ್ ಅವರ ಧರ್ಮಪತ್ನಿ. ರಾಗಧನ ಸಂಸ್ಥೆಯ ಸಕ್ರಿಯ ಕಾರ್ಯಕಾರಿ ಸಮಿತಿ ಸದಸ್ಯೆ. ಹಲವಾರು ಸಂಗೀತಗಾರರಿಗೆ ಸಾಥ್ ನೀಡಿದ ಉಡುಪಿಯ ಹೆಮ್ಮೆಯ ಕಲಾವಿದೆ. ನೂರಾರು ಶಿಷ್ಯರಿಗೆ ವಯಲಿನ್ ತರಬೇತಿ ನೀಡಿರುತ್ತಾರೆ. ಮಗ ಡಾ.ಸತೀಶ್, ನೇತ್ರ ತಜ್ಞ, ಮಗಳು ವಿನಯ ಕಂಪ್ಯೂಟರ್ ಇಂಜಿನಿಯರ್. ಪುತ್ರ ದೇವೇಶ್ ಭಟ್ ಮೃದಂಗ ವಿದ್ವಾನ್. ತಾಯಿಯ ತಂದೆ ಪಿಡ್ಲು ಕೃಷ್ಣರಾಯರು, ಉಡುಪಿ ಲಕ್ಷ್ಮೀ ಬಾಯಿ […]

ಹೊಕ್ಕಾಡಿ ಗೋಳಿ ಕಂಬಳದಲ್ಲಿ ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗದ ಹೆಸರಿನಲ್ಲಿ ಪಾಲ್ಗೊಂಡವು ಓಟದ ಕೋಣಗಳು

ಬಂಟ್ವಾಳ:ತಾಲೂಕಿನ ಎಲಿಯನಡುಗೋಡು ಮತ್ತು ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮದ ಗಡಿ ಭಾಗದಲ್ಲಿ  ಮಹಿಷಮರ್ಧಿನಿ ಕಂಬಳ ಸಮಿತಿ ವತಿಯಿಂದ  ನಡೆಯುವ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ವೀರ-ವಿಕ್ರಮ  ಜೋಡುಕರೆ ಬಯಲು ಕಂಬಳ ಮತ್ತು ಈ ವರ್ಷದ ಪ್ರಥಮ ಕಂಬಳದಲ್ಲಿ ಬೆಂಗಳೂರು ದೊಡ್ಮನೆ ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗ ಹೆಸರಿನಲ್ಲಿ ಪಾಲ್ಗೊಂಡ ಓಟದ ಕೋಣಗಳು ಗಮನ ಸೆಳೆಯಿತು. ಕಿರಣ್ ಕುಮಾರ್ ಮಂಜಿಲ ಮತ್ತು ಯಶೋಧರ ಮಹಾಬಲ ಪೂಜಾರಿ ಸಹೋದರರು ನೇತೃತ್ವ ವಹಿಸಿದ್ದರು. ಛಾಯಾ ವರದಿ-ಪುನೀತ್ ಸಿದ್ದಕಟ್ಟೆ

ಹೊಕ್ಕಾಡಿಗೋಳಿ ವೀರ-ವಿಕ್ರಮ  ಜೋಡುಕರೆ ಬಯಲು ಕಂಬಳ- ಈ ವರ್ಷದ ಪ್ರಥಮ ಕಂಬಳಕ್ಕೆ ವೈಭವದ ಚಾಲನೆ

ಬಂಟ್ವಾಳ: ತಾಲೂಕಿನ ಎಲಿಯನಡುಗೋಡು ಮತ್ತು ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮದ ಗಡಿ ಭಾಗದಲ್ಲಿ  ಮಹಿಷಮರ್ಧಿನಿ ಕಂಬಳ ಸಮಿತಿ ವತಿಯಿಂದ  ನಡೆಯುವ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ವೀರ-ವಿಕ್ರಮ  ಜೋಡುಕರೆ ಬಯಲು ಕಂಬಳ ಮತ್ತು ಈ ವರ್ಷದ ಪ್ರಥಮ ಕಂಬಳಕ್ಕೆ ಭಾನುವಾರ ಬೆಳಿಗ್ಗೆ ಅದ್ದೂರಿ ಚಾಲನೆ ನೀಡಲಾಯಿತು. ಪೂಂಜ ಕ್ಷೇತ್ರದ ಆಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಅವರು ಕಂಬಳ  ಉದ್ಘಾಟಿಸಿದರು. ಪೂಂಜ ಶ್ರೀ ಪಂಚದುರ್ಗಾ ಪರಮೇಶ್ವರಿ ದೇವಸ್ಥಾನ ಮತ್ತು ಇಲ್ಲಿನ ಮುಜಿಲ್ನಾಯಿ ದೈವಸ್ಥಾನ ಜೊತೆಗೆ ವಿಶೇಷ ಧಾರ್ಮಿಕ ನಂಟು ಹೊಂದಿರುವ   […]

ಬ್ರಹ್ಮಾವರ: ಭೀಕರ ಅಪಘಾತ; ಓರ್ವ ಮೃತ್ಯು- ಇಬ್ಬರು ಗಂಭೀರ

ಬ್ರಹ್ಮಾವರ: ಇಲ್ಲಿನ ಸಾಹೇಬ್ರಕಟ್ಟೆ ಹೈಸ್ಕೂಲ್ ಸಮೀಪದ ಮಲಸವಾರಿ ದೇವಸ್ಥಾನದ ತಿರುವಿನಲ್ಲಿ ಇಂದು ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರು, ಮೀನು ಸಾಗಾಟದ ವಾಹನ ಹಾಗೂ ಬೈಕ್ ಮಧ್ಯೆ ಅಪಘಾತ ನಡೆದಿದೆ. ಘಟನೆಯಲ್ಲಿ ಮೀನು ಸಾಗಾಟದ ಮಿನಿ ಪಿಕಪ್ ಚಾಲಕ, ಮಧುವನ ಅಚ್ಲಾಡಿ ನಿವಾಸಿ ಸುರೇಶ್ ಮರಕಾಲ(40) ಮೃತಪಟ್ಟಿದ್ದಾರೆ. ಸಹ ಸವಾರ ರಾಜು ಮರಕಾಲ(60) ಹಾಗೂ ಬೈಕ್ ಸವಾರ ಶಿರಿಯಾರ ನಿವಾಸಿ ಸುಬ್ರಹ್ಮಣ್ಯ ಕುಲಾಲ್(42) ಎಂಬವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಮಣಿಪಾಲದ […]

ಮಣಿಪಾಲ: ವ್ಯಕ್ತಿಗೆ ಹಲ್ಲೆ ನಡೆಸಿ ಬಂಗಾರದ ಚೈನ್, ಮೊಬೈಲ್, ಸ್ಕೂಟರ್ ನೊಂದಿಗೆ ಎಸ್ಕೇಪ್

ಮಣಿಪಾಲ: ವ್ಯಕ್ತಿಯೊಬ್ಬರಿಗೆ ಪರಿಚಿತನೇ ದೋಖಾ ಮಾಡಿದ ಘಟನೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಉಡುಪಿ ಹೆರ್ಗಾ ನಿವಾಸಿ ರಮೇಶ್ ಆಚಾರ್ಯ ಎಂಬವರಿಗೆ ಪರಿಚಿತನಾದ ಪ್ರಶಾಂತ್ ಎಂಬಾತನಿಂದಲೇ ಸಖತ್ ದೋಖಾ ಆಗಿದೆ.‌ ರಮೇಶ್ ಅವರು ನಿನ್ನೆ ರಾತ್ರಿ 9ಗಂಟೆ ಸುಮಾರಿಗೆ ಆರೋಪಿ ಪ್ರಶಾಂತ್ ನನ್ನು ಭೇಟಿಯಾಗಿದ್ದರು. ಬಳಿಕ ಪ್ರಶಾಂತ್, ಡ್ರಿಂಕ್ಸ್ ಕುಡಿಯುವ ಎಂದು ಹೇಳಿದಂತೆ ಉಡುಪಿಯಲ್ಲಿ ಬಿಯರ್‌‌ ಖರೀದಿಸಿ ಇಬ್ಬರೂ ಕರಂಬಳ್ಳಿ ಗುಜರಿ ಅಂಗಡಿಯ ಬಳಿ ಹೋಗಿ ಬಿಯರ್‌‌ ಸೇವನೆ ಮಾಡಿದ್ದಾರೆ. ಬಳಿಕ ರಾತ್ರಿ […]