ಉಡುಪಿ:ಗ್ರಾ.ಪಂ. ಅಧ್ಯಕ್ಷರ ಆಯ್ಕೆ: ಚುನಾವಣಾಧಿಕಾರಿಗಳ ನೇಮಕ

ಉಡುಪಿ: ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮ ಪಂಚಾಯತ್‌ನಮುಂದಿನ ಅವಧಿಗೆ ಅಧ್ಯಕ್ಷ ಸ್ಥಾನವನ್ನು (ಮೀಸಲಾತಿ – ಸಾಮಾನ್ಯ) ಆಯ್ಕೆ ಮಾಡುವ ಸಲುವಾಗಿ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯಕ್ ಅವರನ್ನು ಗೊತ್ತು ಪಡಿಸಿದ ಅಧಿಕಾರಿಯನ್ನಾಗಿ ನೇಮಿಸಲಾಗಿದ್ದು, ಸದ್ರಿರವರು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 45 ಹಾಗೂ (ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆ) ನಿಯಮಗಳು 1995 ರ ನಿಯಮ 4 ರಿಂದ 11ರವರೆಗಿನ ನಿಯಮದಂತೆ ಚುನಾವಣೆ ನಡೆಸಿ, ಅಧ್ಯಕ್ಷ ಸ್ಥಾನವನ್ನು […]

ಉಡುಪಿ:ಜಿಟಿಟಿಸಿಯಲ್ಲಿ ಡಿಪ್ಲೋಮಾ ಕೋರ್ಸ್ಗಳ ಪ್ರವೇಶಾತಿ : ಅರ್ಜಿ ಆಹ್ವಾನ

ಉಡುಪಿ: ಉಡುಪಿ ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ತಾಂತ್ರಿಕ ಡಿಪ್ಲೋಮಾ ಕೋರ್ಸ್ಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಿ.ಟಿ.ಟಿ.ಸಿ ಕೇಂದ್ರದಲ್ಲಿ 3+1 ವರ್ಷದ ಡಿಪ್ಲೋಮಾ ಇನ್ ಟೂಲ್ ಡೈ ಮೇಕಿಂಗ್, ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ ಮತ್ತುಡಿಪ್ಲೋಮಾ ಇನ್ ಪ್ರಿಸಿಶನ್ ಮ್ಯಾನುಪ್ಯಾಕ್ಚರಿಂಗ್ ಕೋರ್ಸ್ಗಳು ಲಭ್ಯವಿದ್ದು, ಐ.ಟಿ.ಐ ಮತ್ತು ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿಉತ್ತೀರ್ಣರಾದ ವಿದ್ಯಾರ್ಥಿಗಳು ನೇರವಾಗಿ ಎರಡನೇ ವರ್ಷದ ಡಿಪ್ಲೋಮಾ ಕೋರ್ಸ್ಗೆ ಪ್ರವೇಶ ಪಡೆಯಬಹುದಾಗಿದೆ. […]

ಬಾರ್ಕೂರು ನೇಶನಲ್ ಕೈಗಾರಿಕಾ ತರಬೇತಿ ಸಂಸ್ಥೆ: ಮೇ23 & ಮೇ24 ರಂದು ‘ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್`ನಿಂದ ಕ್ಯಾಂಪಸ್ ಇಂಟರ್ವ್ಯೂ

ಬ್ರಹ್ಮಾವರ: ದಿ ಬಾರ್ಕೂರು ಎಜುಕೇಶನಲ್ ಸೊಸೈಟಿಯ ಆಡಳಿತಕ್ಕೊಳಪಟ್ಟ “ನೇಶನಲ್ ಕೈಗಾರಿಕಾ ತರಬೇತಿ ಸಂಸ್ಥೆ”ಯಲ್ಲಿ ಪ್ರತೀ ವರ್ಷ ಬೆಂಗಳೂರಿನ ಪ್ರಸಿದ್ಧ ಕಂಪನಿಯಾದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ಕ್ಯಾಂಪಸ್ ಇಂಟರ್ವ್ಯೂ ಮಾಡುತ್ತ ಬಂದಿದ್ದು, ಈ ವರುಷ ಕೂಡ ಇದೇ ಬರುವ 23/05/2025 ಮತ್ತು 24/05/2025ನೇ ಶುಕ್ರವಾರ ಹಾಗೂ ಶನಿವಾರದಂದು ಕ್ಯಾಂಪಸ್ ಇಂಟರ್ವ್ಯೂ ನಡೆಸಲಿದೆ. ಉಡುಪಿ ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಐಟಿಐಗಳು ಭಾಗವಹಿಸಿ ಇದರ ಪ್ರಯೋಜನವನ್ನು ಪಡೆದುಕೊಳ್ಳಲಿದ್ದಾರೆ ಎಂದು ಪ್ರಾಂಶುಪಾಲರು ಪ್ರಕಟಣೆ ತಿಳಿಸಿದ್ದಾರೆ.

ಹೊಸದಿಲ್ಲಿ:’ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಬೆನ್ನಲ್ಲೇ ಕೇಂದ್ರ ಸಚಿವ ಸಂಪುಟ ಸಭೆ ನಡೆಸಿದ ಪ್ರಧಾನಿ ಮೋದಿ,ಇಂದು ಸರ್ವಪಕ್ಷ ಸಭೆಗೆ ಕರೆ

ಹೊಸದಿಲ್ಲಿ: “ಆಪರೇಷನ್‌ ಸಿಂದೂರ’ ನಡೆಸಿ ಪಾಕಿಸ್ಥಾನದ ಮೇಲೆ “ಉಗ್ರ ಪ್ರತೀಕಾರ’ ತೀರಿಸಿ­ಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಸರಕಾರ, ಇನ್ನಷ್ಟು ದಾಳಿ ನಡೆಸಲಿದೆಯೇ?ಇಂತಹದೊಂದು ಕುತೂಹಲಕ್ಕೆ ಕಾರಣವಾಗಿರುವುದು ಸ್ವತಃ ಮೋದಿ ನಡೆಸುತ್ತಿರುವ ಸರಣಿ ಸಭೆಗಳು ಹಾಗೂ ಮೋದಿ ಪ್ರಭಾ ವಲಯ ದಲ್ಲಿರುವ ಜನಪ್ರತಿನಿಧಿ ಹಾಗೂ ಮಾಜಿ ಸೇನಾ ಮುಖ್ಯಸ್ಥರ ಹೇಳಿಕೆಗಳು. ಮಂಗಳವಾರ ತಡರಾತ್ರಿಯ ದಾಳಿ ಬೆನ್ನಲ್ಲೇ ಬುಧವಾರ ತಮ್ಮ ಸಂಪುಟ ಸಭೆ ನಡೆಸಿರುವ ಮೋದಿ, ಗುರುವಾರ ಸರ್ವಪಕ್ಷ ಸಭೆ ಕರೆದಿದ್ದಾರೆ. ದಾಳಿ ಕುರಿತ ವಿವರ ನೀಡಲು ಈ […]

ಮಣಿಪಾಲ: ಕೆಎಂಸಿ ಡೀನ್ ಆಗಿ ಡಾ.ಅನಿಲ್ ಕೆ.ಭಟ್ ನೇಮಕ.

ಉಡುಪಿ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ನೂತನ ಡೀನ್ ಆಗಿ ಡಾ. ಅನಿಲ್ ಕೆ ಭಟ್ ಅವರನ್ನು ಇಂದು ನೇಮಕ ಮಾಡಲಾಗಿದೆ. ಅತುತ್ತಮ ವೈದ್ಯರು, ಶಿಕ್ಷಣ ತಜ್ಞರು ಮತ್ತು ಆಡಳಿತಾಧಿಕಾರಿಯಾಗಿರುವ ಡಾ.ಭಟ್ ಅವರು ಮೂಳೆ ಚಿಕಿತ್ಸೆ, ಕೈ ಶಸ್ತ್ರಚಿಕಿತ್ಸೆ, ಸಂಶೋಧನೆ ಮತ್ತು ವೈದ್ಯಕೀಯ ಶಿಕ್ಷಣದಲ್ಲಿ ಸುಮಾರು ಎರಡು ದಶಕಗಳಿಗೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಡಾ.ಭಟ್ ಅವರು ಬೆಂಗಳೂರು ವೈದ್ಯಕೀಯ ಕಾಲೇಜಿನಿಂದ ಎಂಬಿಬಿಎಸ್ ಪದವಿ ಮತ್ತು ಕೆಎಂಸಿ ಮಣಿಪಾಲದಿಂದ ಮೂಳೆಚಿಕಿತ್ಸೆಯಲ್ಲಿ ಎಂಎಸ್ ಪದವಿಯೊಂದಿಗೆ ಡಿಎನ್ಬಿ ಪದವಿ ಪಡೆದಿದ್ದಾರೆ. […]