ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಎರಡು ದಿನ ಭಾರಿ ಮಳೆ
ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅ.23 ಮತ್ತು 24ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಮುಂಗಾರು ಮಾರುತಗಳ ಪ್ರಭಾವ ತಗ್ಗಲಿದ್ದು, ಅ.26ರಿಂದ ಹಿಂಗಾರು ಪ್ರವೇಶಿಸುವ ಲಕ್ಷಣಗಳು ಕಂಡುಬಂದಿವೆ. ಆದರೆ, ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಇಲಾಖೆ ಮಾಹಿತಿ ನೀಡಿದೆ. ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು […]
ನೇಕಾರರ ಉತ್ಪಾದಕ ಕಂಪೆನಿ ರಚಿಸುವ ಕುರಿತು ಪೂರ್ವಭಾವಿ ಸಭೆ
ಕಿನ್ನಿಗೋಳಿ: ನೇಕಾರರ ಉತ್ಪಾದಕ ಕಂಪನಿಯನ್ನು ( weavers OFPO ) ರಚಿಸುವ ವಿಚಾರದಲ್ಲಿ ರಾಜ್ಯ ಕೈಮಗ್ಗ ಇಲಾಖೆ ನೀಡಿರುವ ನಿರ್ದೇಶನದ ಕುರಿತು ಚರ್ಚಿಸಲು ಸಹಾಯಕ ನಿರ್ದೇಶಕರು, ಕೈ ಮಗ್ಗ ಮತ್ತು ಜವಳಿ ಇಲಾಖೆ ಉಡುಪಿ ಮತ್ತು ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಪೂರ್ವಭಾವಿ ಸಭೆ ಕಿನ್ನಿಗೋಳಿಯ ತಾಳಿಪಾಡಿ ನೇಕಾರ ಸಂಘದಲ್ಲಿ ನಡೆಯಿತು. ಉಡುಪಿ ಜಿಲ್ಲಾ ಕೈಮಗ್ಗ ಸಹಾಯಕ ನಿರ್ದೇಶಕ ಅಶೋಕ್ ಪ್ರಸ್ತಾವನೆ ಮಾಡಿ ನೇಕಾರರ ಉತ್ಪಾದಕ ಕಂಪನಿಯನ್ನು ರಚಿಸಲು ಇಲಾಖೆಯಿಂದ ಬಂದಿರುವ ನಿರ್ದೇಶನದ ಕುರಿತು ತಿಳಿಸಿದರು. ಕದಿಕೆ […]
ಉಡುಪಿ: ಅ.24ಕ್ಕೆ ಪಂಚಮಿ ಸೌಹಾರ್ದ ಸಹಕಾರಿಯ ವಾರ್ಷಿಕ ಮಹಾಸಭೆ
ಉಡುಪಿ: ಉಡುಪಿ ಪಂಚಮಿ ಸೌಹಾರ್ದ ಸಹಕಾರಿಯ ವಾರ್ಷಿಕ ಮಹಾಸಭೆಯ ಇದೇ ಅ. 24ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ ಸರಿಯಾಗಿ ಕುಂಜಿಬೆಟ್ಟು ಸ್ವರ್ಣ ವೆಲ್ಲರಿಯ ಹತ್ತಿರದ ಶ್ರೀಕೃಷ್ಣ ಪ್ರಜ್ಞ ಪ್ರತಿಷ್ಠಾನದಲ್ಲಿ ಸಹಕಾರಿಯ ಅಧ್ಯಕ್ಷ ಸತ್ಯಪ್ರಸಾದ್ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಕಾಲದಲ್ಲಿ ಸೂಚನಾ ಪತ್ರ ತಲುಪದ ಸದಸ್ಯರೆಲ್ಲರೂ ಈ ನೋಟಿಸನ್ನು ಪರಿಗಣಿಸಿ ಸಭೆಯಲ್ಲಿ ಭಾಗವಹಿಸಬೇಕಾಗಿ ಕೋರಲಾಗಿದೆ. ಪಂಚಮಿ ಸೌಹಾರ್ದ ಸಹಕಾರಿ, ಮೊದಲನೆ ಮಹಡಿ, ಆರ್ ಎಸ್ ಬಿ ವಿಂಡರ್ಸ್, ನಾಗಬನದ ಎದುರು, ಮಠದಬೆಟ್ಟು ರಸ್ತೆ, ಸಿಟಿ ಬಸ್ ಸ್ಟ್ಯಾಂಡ್, […]
ಕೇಂದ್ರ ಸರಕಾರದಿಂದ ಅಂಬಲಪಾಡಿ ಮತ್ತು ಸಂತೆಕಟ್ಟೆ ವಾಹನ ಮೇಲ್ಸೇತುವೆ ರಚನೆಗೆ 50 ಕೋಟಿ ಮಂಜೂರು: ಯಶ್ ಪಾಲ್ ಸುವರ್ಣ ಸ್ವಾಗತ
ಉಡುಪಿ: ಉಡುಪಿ ನಗರ ಭಾಗದ ಬಹುದಿನಗಳ ಬೇಡಿಕೆಯಾಗಿದ್ದ ರಾಷ್ಟೀಯ ಹೆದ್ದಾರಿ 66 ರ ಅಂಬಲಪಾಡಿ ಮತ್ತು ಸಂತೆಕಟ್ಟೆಯ ವಾಹನ ಮೇಲ್ಸೇತುವೆ ನಿರ್ಮಾಣಕ್ಕೆ 50 ಕೋಟಿ ಅನುದಾನ ಮಂಜೂರು ಮಾಡಿದ ಕೇಂದ್ರ ಸರಕಾರದ ನಿರ್ಧಾರವನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ಸ್ವಾಗತಿಸಿದ್ದಾರೆ. ಉಡುಪಿ ನಗರದ ಪ್ರಮುಖ ಕೂಡು ರಸ್ತೆಯಲ್ಲಿನ ವಾಹನ ದಟ್ಟಣೆಯಿಂದ ಜನಸಾಮಾನ್ಯರು ಎದುರಿಸುತ್ತಿದ್ದ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಂಬಲಪಾಡಿ ವಾಹನ ಮೇಲ್ಸೇತುವೆ ನಿರ್ಮಾಣಕ್ಕೆ 24.56 […]
ನೀವು ಕಾಫಿ ಪ್ರಿಯರೇ? ಹಾಗಾದ್ರೆ ಕಾಫಿ ಹೀರುವ ಮೊದಲು ಈ ವಿಷ್ಯಗಳು ನಿಮಗೆ ಗೊತ್ತಿರಲಿ
ಕಾಫಿ ಹೀರುತ್ತಾ ಮಧುರ ಕ್ಷಣಗಳನ್ನು ಕಳೆಯುವ ಅಭ್ಯಾಸ ತುಂಬಾ ಮಂದಿಗಿದೆ. ಹಾಗೆಯೇ ಕಾಫಿ ಕುಡಿಯುವ ಚಟ ಕೂಡ ಅಧಿಕ ಮಂದಿಗಿದೆ.ಒಂದು ಕಾಫಿ ಕುಡಿಯೋದು ಎಷ್ಟು ಆರೋಗ್ಯಕರ ಎಂಬುದನ್ನು ಹೇಳ್ತೇವೆ. ಕಾಫಿ ಕುರಿತ ಈ ಸಂಗತಿಗಳು ನಿಮಗೆ ಗೊತ್ತಿರಲಿ. ಖಾಲಿ ಹೊಟ್ಟೆಯಲ್ಲಿ ಕಾಫಿ ಸೇವಿಸುವುದು ಉತ್ತಮವಲ್ಲ. ಮಲಬದ್ಧತೆ, ಹುಣ್ಣು, ಮತ್ತು ಹೊಟ್ಟೆಯ ಸಮಸ್ಯೆಗಳಿಗೆ ಇದು ಕಾರಣವಾಗಬಹುದು. ಖಾಲಿ ಹೊಟ್ಟೆಯಲ್ಲಿ ಕಾಫಿ ಸೇವಿಸುವುದರಿಂದ ಆಮ್ಲದ ಪ್ರಮಾಣ ಹೆಚ್ಚಾದಾಗ, ಎದೆಯಲ್ಲಿ ಉರಿ ಉಂಟು ಮಾಡಬಹುದು. ಸಂಜೆ ಕಾಫಿ ಕುಡಿಯುವ ಅಭ್ಯಾಸವಿರುವವರು ಲೇಟ್ […]