ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಒಂದು ವಾರದ ಒಳಗಾಗಿ ಅರ್ಜಿ ಹಾಗೂ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಶಾಲಾ ಮುಖ್ಯೋಪಾಧ್ಯಾಯರಿಂದ ದೃಢೀಕರಿಸಿ, ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, […]

ಹಿರಿಯ ನಾಗರಿಕರ ದಿನಾಚರಣೆಗೆ ಅಗತ್ಯ ಪೂರ್ವಸಿದ್ಧತೆ ಮಾಡಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್

ಉಡುಪಿ: ಜಿಲ್ಲಾ ಮಟ್ಟದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಆಚರಿಸಲು ಎಲ್ಲಾ ರೀತಿಯ ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳುವುದರ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ ಎಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ನಗರದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಹಿರಿಯ ನಾಗರೀಕ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವು ಅಕ್ಟೋಬರ್ 1 ರಂದು ನಗರದ ಎಂ.ಜಿ.ಎಂ ನ […]

ಚಾರ ನವೋದಯದಲ್ಲಿ ಕನ್ನಡ ಗೀತಾ ಗಾನಯಾನ: ವರ್ಷವಿಡಿ ಕನ್ನಡ ಗೀತಾ ಗಾಯನ ಮಾಡಿದ ಏಕೈಕ ಸಂಸ್ಥೆ ಚಾಣಕ್ಯ- ಪ್ರಸಾದ್ ಎಸ್. ಎ.

ಹೆಬ್ರಿ: ಕನ್ನಡ ರಾಜ್ಯೋತ್ಸವ ಆಚರಣೆ ಕೇವಲ ನವೆಂಬರ್ ಒಂದಕ್ಕೆ ಸೀಮಿತವಾಗಿರಬಾರದು ಎಂಬ ಉದ್ದೇಶವನ್ನಿಟ್ಟುಕೊಂಡು ಕನ್ನಡ ರಾಜ್ಯೋತ್ಸವದ ಸುವರ್ಣ ಕರ್ನಾಟಕದ ಅಂಗವಾಗಿ ವರ್ಷವಿಡಿ ಶಾಲಾ ಕಾಲೇಜುಗಳಲ್ಲಿ ಕನ್ನಡ ಗೀತ ಗಾಯನ ಕಾರ್ಯಕ್ರಮ ಮಾಡುವುದರ ಮೂಲಕ ಕನ್ನಡದ ಕಂಪನ್ನು ನಾಡಿನೆಲ್ಲೆಡೆ ಪಸರಿಸುತ್ತಿರುವ ಏಕೈಕ ಸಂಸ್ಥೆ ಹೆಬ್ರಿಯ ಚಾಣಕ್ಯ ಸಂಗೀತ ತರಬೇತಿ ಕೇಂದ್ರ ಎಂದು ಹೆಬ್ರಿ ತಹಸೀಲ್ದಾರ್ ಪ್ರಸಾದ್ ಎಸ್.ಎ. ಹೇಳಿದರು. ಅವರು ಆ. 27ರಂದು ಚಾರ ಜವಾಹರ ನವೋದಯ ವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಸುವರ್ಣ ಕರ್ನಾಟಕದ ಅಂಗವಾಗಿ ಹೆಬ್ರಿಯ ಚಾಣಕ್ಯ […]

ಮೂಡುಬಿದಿರೆ: ಆಳ್ವಾಸ್ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ‘ಸಿಎ’ ಕೌನ್ಸೆಲಿಂಗ್ ಪ್ರೋಗ್ರಾಮ್

ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ಸಂಘ ಹಾಗೂ ಐ.ಸಿ.ಎ.ಐ ಮಂಗಳೂರು ಚಾಪ್ಟರ್ ವತಿಯಿಂದ ಆಳ್ವಾಸ್ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸಿಎ ವೃತ್ತಿಯ ಕುರಿತು ಮಾಹಿತಿ ಕಾರ್ಯಕ್ರಮ ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ- ಇತ್ತೀಚಿನ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ವೈದ್ಯಕೀಯ ಇಲ್ಲವೇ ತಾಂತ್ರಿಕ ಪದವಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ, ಆದರೆ ವಾಣಿಜ್ಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ನೂರಾರು ದಾರಿಗಳಿವೆ. ಅದನ್ನು ಅವರು ಅರಿತುಕೊಳ್ಳಬೇಕು […]

ಸೌಜನ್ಯ ಪ್ರಕರಣ: ಮರು ತನಿಖೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರರಣಕ್ಕೆ ಸಂಬಂಧಿಸಿದಂತೆ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಮೂರು ಅರ್ಜಿಗಳನ್ನು ವಜಾಗೊಳಿಸಿ ಹೈಕೋರ್ಟ್ ನ ವಿಭಾಗೀಯ ಪೀಠ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಶ್ರೀನಜವಾಸ್ ಹರೀಶ್ ಕುಮಾರ್ ಹಾಗೂ ಜೆ.ಎಂ ಖಾಜಿ ಅವರಿದ್ದ ನ್ಯಾಯಪೀಠ ಶುಕ್ರವಾರ ತನ್ನ ತೀರ್ಪನ್ನು ಪ್ರಕಟಿಸಿದೆ. ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ರದ್ದುಪಡಿಸುವಂತೆ ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದ್ದು ಸಂತೋಷ್ ರಾವ್ ನನ್ನು ಖುಲಾಸೆ ಗೊಳಿಸಿದ ಕೆಳ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ‌. ಪ್ರಕರಣದ […]