ಕಾರ್ಕಳ: ನೇಣು ಬಿಗಿದು ಯುವತಿ ಆತ್ಮಹತ್ಯೆ

ಕಾರ್ಕಳ: ಖಿನ್ನತೆಯಿಂದ ಬಳಲುತಿದ್ದು, ಉಡುಪಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಕುಕ್ಕುಂದೂರು ಗ್ರಾಮದ ಹಾಲಮ್ಮ (32) ಎಂಬವರು ಮಂಗಳವಾರ ಅಪರಾಹ್ನ 12ಗಂಟೆ ಸುಮಾರಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ:ಹಳೆಯ ಸೀರೆಗಳನ್ನು ಕೊಟ್ಟು ಬದಲಾಗಿ ಹೊಸ ನೋಟುಗಳನ್ನು ಪಡೆಯಿರಿ.

ಉಡುಪಿ: ನಿಮ್ಮ ಮನೆಯಲ್ಲಿರುವ ಹಳೆಯ ಸೀರೆಗಳನ್ನು ಕೊಟ್ಟು ಇಂದೇ ಹೊಸ ನೋಟುಗಳನ್ನಾಗಿಸಿ. ಸೀರೆಗಳು : ನಿಮ್ಮ ಮನೆ ಬಾಗಿಲಿಗೆ ಬಂದು ಸೀರೆಯನ್ನು ಪಡೆದುಕೊಳ್ಳುತ್ತಾರೆ. WhatsApp ಮೂಲಕ ನಿಮ್ಮ ಸೀರೆಗೆ ಸಿಗುವ ಮೊತ್ತದ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಿರಿ.9535470058, 9686625210 ವಿಳಾಸ :ಕುಡ್ಸೆಂಪು ಬಿಲ್ಡಿಂಗ್, ಹಳೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಶಾಂತಿ ಸಾಗರ್ ಹೋಟೆಲ್ ಎದುರು, ಉಡುಪಿ.
ತೋಟಗಾರಿಕೆ ಇಲಾಖೆಯಿಂದ ಜೇನುತುಪ್ಪಕ್ಕೆ ಬ್ರ್ಯಾಂಡ್ ಹೆಸರು ಅಭಿವೃದ್ಧಿ.

ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ ಹೆಚ್ಚಿಸಲು ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಜೇನುತುಪ್ಪಕ್ಕೆ ತೋಟಗಾರಿಕೆ ಇಲಾಖೆಯು ಬ್ರ್ಯಾಂಡ್ ಹೆಸರು ಅಭಿವೃದ್ಧಿಪಡಿಸಿ, TRADE MARK REGISTRY ಯಿಂದ ಅಧಿಕೃತವಾಗಿ ಅನುಮೋದನೆ ಪಡೆಯಲಾಗಿದ್ದು, ಅದರಂತೆ ಕನ್ನಡದಲ್ಲಿ ಝೇಂಕಾರ ಮತ್ತು ಆಂಗ್ಲ ಭಾಷೆಯಲ್ಲಿ jhenkara ಎಂಬ ನಾಮಾಂಕಿತದೊಂದಿಗೆ ಜೇನುತುಪ್ಪ ಉತ್ಪಾದಕರು ಮತ್ತು ಸಂಗ್ರಾಹಕರು ಷರತ್ತು ಮತ್ತು ನಿಬಂಧನೆಗಳೊಂದಿಗೆ ಸದರಿ ಬ್ರ್ಯಾಂಡ್ ಹೆಸರು ಮತ್ತು ಲೋಗೋವನ್ನು ಬಳಸಿಕೊಂಡು ಜೇನುತುಪ್ಪ […]
ಕಾರ್ಕಳ ಎಂ. ಪಿ. ಎಂ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಉಡುಪಿ ವಲಯದ ಪುರುಷರ ಕಬಡ್ಡಿ ಪಂದ್ಯಾವಳಿ

ಕಾರ್ಕಳ: ಕಾರ್ಕಳ ಎಂ. ಪಿ. ಎಂ ಸ್ಮಾರಕ ಸರಕಾರಿ ಪ್ರ.ದರ್ಜೆ ಕಾಲೇಜು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಧರ್ಮಸ್ಥಳ ರತ್ನವರ್ಮ ಹೆಗಡೆ ಮೆಮೆರಿಯಲ್ ಟ್ರೋಪಿ 2024-25 ನೇ ಸಾಲಿನ ಉಡುಪಿ ವಲಯದ ಪುರುಷರ ಕಬಡ್ಡಿ ಪಂದ್ಯಾವಳಿ ಡಿ. 04 ರಂದು ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾರ್ಕಳ ಎಂಪಿಎಂ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಶ್ರೀವರ್ಮ ಅಜ್ರಿ ಅವರು ಮಾತನಾಡಿ, ಸರಕಾರಿ ಕಾಲೇಜುಗಳು ಖಾಸಗಿ ಕಾಲೇಜುಗಳಂತೆ ಸಶಕ್ತವಾಗಿ ಕ್ರೀಡಾಕೂಟ ನಡೆಸುವಲ್ಲಿ ಯಶಸ್ವಿಯಾಗಿದೆ. […]
ಉಡುಪಿ:ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಸಹಕಾರ ಕುಕ್ಕಟ ಮಹಾಮಂಡಳ ನಿಯಮಿತ ಬೆಂಗಳೂರು ಇವರ ವತಿಯಿಂದ, ಜಿಲ್ಲೆಯಲ್ಲಿರುವ ಪ.ಜಾತಿ, ಪ.ಪಂಗಡ ಹಾಗೂ ಸಾಮಾನ್ಯ ವರ್ಗದ ಅರ್ಹ ರೈತ ಮಹಿಳೆಯರಿಗೆ 5 ವಾರದ 20 ಹಿತ್ತಲ ಕೋಳಿಮರಿಗಳನ್ನು ವಿತರಿಸಿ, ಅವರ ಆದಾಯ ಹೆಚ್ಚಿಸುವ ಕಾರ್ಯಕ್ರಮ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿರುತ್ತದೆ. ಆಸಕ್ತ ಅರ್ಹ ರೈತ ಮಹಿಳೆಯರು ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ಪಶುವೈದ್ಯ ಸಂಸ್ಥೆ ಅಥವಾ ತಾಲೂಕು ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಯವರನ್ನು ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ […]