ಎಂಕುಲ್ ಫ್ರೆಂಡ್ಸ್ ಕಲಾವಿದರು ಹಿರಿಯಡಕ ನೇತೃತ್ವದಲ್ಲಿ ಮುದ್ದು ಕೃಷ್ಣ ಹಾಗೂ ಮುದ್ದು ರಾಧಾ ಕೃಷ್ಣ ಸ್ಪರ್ಧೆ: 100 ಕ್ಕೂ ಹೆಚ್ಚು ಮಕ್ಕಳು ಸ್ಪರ್ಧೆಯಲ್ಲಿ ಭಾಗಿ.

ಹಿರಿಯಡಕ: ಎಂಕುಲ್ ಫ್ರೆಂಡ್ಸ್ ಕಲಾವಿದರು (ರಿ.) ಹಿರಿಯಡಕ ಇವರ ನೇತೃತ್ವದಲ್ಲಿ ಹಾಗೂ ದೇವಾಡಿಗರ ಸಂಘ ಹಿರಿಯಡ್ಕ ಇವರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಮುದ್ದು ಕೃಷ್ಣ ಹಾಗೂ ಮುದ್ದು ರಾಧಾ ಕೃಷ್ಣ ಸ್ಪರ್ಧೆಯು ಪ್ರಪ್ರಥಮ ಬಾರಿಗೆ ಹಿರಿಯಡ್ಕ ಶ್ರೀ ವೀರಭದ್ರ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ ಅದ್ದೂರಿಯಾಗಿ ಜರುಗಿತು. 100 ಕ್ಕೂ ಹೆಚ್ಚು ಮಕ್ಕಳು ಸ್ಪರ್ಧೆಗೆ ನೋಂದಾವಣೆ ಮಾಡಿದ್ದು, ಕಾರ್ಯಕ್ರಮದ ಯಶಸ್ವಿಗೆ ಪ್ರಮುಖ ಕಾರಣವಾಗಿತ್ತು. ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಪ್ರಮಾಣ ಪತ್ರ, ಸ್ಮರಣಿಕೆ ಹಾಗೂ ಪದಕ ನೀಡಿ […]

ಅವತಾರ್ 2′ ವೇಷದಲ್ಲಿ ಮಿಂಚಲಿರುವ ರವಿ ಕಟಪಾಡಿ

ಉಡುಪಿ: ಪ್ರತೀವರ್ಷ ಅಷ್ಠಮಿಯ ದಿನದಂದು ವಿಶಿಷ್ಟ ವೇಷ ತೊಟ್ಟು ಅನಾರೋಗ್ಯಪೀಡಿತ ಮಕ್ಕಳಿಗೆ ಹಣ ಸಂಗ್ರಹಿಸುವ ರವಿ ಕಟಪಾಡಿ ಈ ಬಾರಿ ಅವತಾರ್ 2 ವೇಷಧಾರಿಯಾಗಿ ನಗರ ಸಂಚಾರ ಮಾಡುತ್ತಿದ್ದಾರೆ.ಹಕ್ಕಿಯ ಮೇಲೆ ಬಾನೆತ್ತರಲ್ಲಿ ಹಾರಿಕೊಂಡು ಬರುವ ‘ಅವತಾ‌ರ್ 2’ ವೇಷಧಾರಿ ರವಿ ಕಟಪಾಡಿ ಅವರು ಕಟಪಾಡಿ, ಶಂಕರಪುರ, ಉದ್ಯಾವರ ಮತ್ತಿತರೆಡೆ ಸಂಚರಿಸಿ ಮನೋರಂಜನೆ ನೀಡುತ್ತಿದ್ದಾರೆ. ಉಡುಪಿಯಾದ್ಯಂತ ಸಂಚರಿಸಿ ಹಣ ಸಂಗ್ರಹಿಸುತ್ತಿದ್ದಾರೆ. ಈ ಬಾರಿ ಮೂರು ಅಶಕ್ತ ಮಕ್ಕಳ ವೈದ್ಯಕೀಯ ಚಿಕಿತ್ಸೆಗೆ ಧನ ಸಹಾಯ ಮಾಡಲಿದ್ದು, ಕಳೆದ 9 ವರ್ಷಗಳಲ್ಲಿ […]

ದರ್ಶನ್​ಗೆ​​ ರಾಜಾತಿಥ್ಯ ನೀಡುವ ಪೋಟೋ ವೈರಲ್: ಜೈಲರ್‌ಗಳು ಸೇರಿದಂತೆ ಒಟ್ಟು 7 ಸಿಬ್ಬಂದಿಗಳು ಅಮಾನತು.

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಆರೋಪಿ ದರ್ಶನ್​ಗೆ​​ ರಾಜಾತಿಥ್ಯ ನೀಡುತ್ತಿರುವ ವಿಚಾರ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದ್ದು, ಜೈಲಿನ ಅವ್ಯವಸ್ಥೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಂಡಾಮಂಡಲಗೊಂಡಿದ್ದಾರೆ. ಬೇರೆಡೆ ಜೈಲುಗಳಿಗೆ ಸ್ಥಳಾಂತರಿಸುವಂತೆ ಸೂಚನೆ:ಪ್ರಸ್ತುತ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದಕ್ಕೆ ಕಾರಣರಾದ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಹಾಗೂ ದರ್ಶನ್ ಮತ್ತು ಅವರ ಸಹಚರರನ್ನು ರಾಜ್ಯದ ವಿವಿಧ ಜೈಲುಗಳಿಗೆ ಸ್ಥಳಾಂತರಿಸುವಂತೆ ಸೂಚನೆ ನೀಡಿದ್ದಾರೆ. ಅಲ್ಲದೆ, ಕಾರಾಗೃಹಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ […]

ಉಡುಪಿ: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ಉಡುಪಿ: ಕೆರೆಗೆ ಈಜಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಉಡುಪಿಯ ಕರಂಬಳಿಯಲ್ಲಿ ನಡೆದಿದೆ. ಮೃತನನ್ನು ಇಂದ್ರಾಳಿ ನಿವಾಸಿ ಸಿದ್ದಾರ್ಥ್ ಶೆಟ್ಟಿ (17) ಎಂದು ಗುರುತಿಸಲಾಗಿದೆ. ಈತ ಮಣಿಪಾಲದ ಕಾಲೇಜೊಂದರ ವಿದ್ಯಾರ್ಥಿ. ಸಿದ್ದಾರ್ಥ್ ನಿನ್ನೆ ಇಬ್ಬರು ಸ್ನೇಹಿತರೊಂದಿಗೆ ಉಡುಪಿಯ ಕರಂಬಳಿ ಕೆರೆಗೆ ಈಜಲು ತೆರಳಿದ್ದನು. ಈ ವೇಳೆ ಈಜಲು ನೀರಿಗಿಳಿದಿದ್ದು, ಈಜಲು ಆಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಇನ್ನಿಬ್ಬರು ಸ್ನೇಹಿತರು ನೀರಿಗೆ ಇಳಿದಿರಲಿಲ್ಲ ಎನ್ನಲಾಗಿದೆ.