ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಸಿ.ಜಯರಾಂ ನಿಧನ

ಬೆಂಗಳೂರು: ‘ಆಟೋರಾಜ’, ‘ನಾ ನಿನ್ನ ಬಿಡಲಾರೆ’ ಅಂತಹ ಸೂಪರ್ ಹಿಟ್ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ಕೊಟ್ಟ ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಸಿ.ಜಯರಾಂ ಅವರು ಇಂದು ನಸುಕಿನಲ್ಲಿ ನಿಧನರಾದರು. ‘ಪಾವನ‌ ಗಂಗ’, ‘ಗಲಾಟೆ ಸಂಸಾರ’, ‘ಆಟೋರಾಜ’, ‘ನಾ ನಿನ್ನ ಬಿಡಲಾರೆ’ ಮುಂತಾದ ಸೂಪರ್ ಹಿಟ್ ಚಿತ್ರಗಳನ್ನು ಸಿ.ಜಯರಾಂ ಅವರು ನಿರ್ಮಿಸಿದ್ದರು. ಅವರ ಪುತ್ರ ಮಿಲನ ಪ್ರಕಾಶ್ ಅವರು ಕೂಡ ಚಿತ್ರ ನಿರ್ದೇಶಕರಾಗಿದ್ದಾರೆ.

ಟಿ20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ

ಬೆಂಗಳೂರು: ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಟಿ20 ವಿಶ್ವಕಪ್‌ ತಂಡಕ್ಕೆ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜೇಯ್‌ ಶಾ ತಿಳಿಸಿದ್ದಾರೆ. ಅಕ್ಟೋಬರ್ 17ರಿಂದ ಟಿ20 ವಿಶ್ವಕಪ್ ಟೂರ್ನಿಯು ಯುಎಇ ಮತ್ತು ಓಮನ್‌ನಲ್ಲಿ ನಡೆಯಲಿದೆ. ಭಾರತವೇ ಈ ಟೂರ್ನಿಗೆ ಆತಿಥ್ಯ ವಹಿಸಲಿದೆ. ಟೀಮ್‌ ಇಂಡಿಯಾ ಆಟಗಾರರು ವಿರಾಟ್‌ ಕೊಹ್ಲಿ (ನಾಯಕ) ರೋಹಿತ್‌ ಶರ್ಮಾ (ಉಪ ನಾಯಕ) ಕೆ.ಎಲ್.ರಾಹುಲ್‌ ಸೂರ್ಯಕುಮಾರ್‌ ಯಾದವ್‌ ರಿಷಬ್‌ ಪಂತ್‌ (ವಿಕೆಟ್‌ ಕೀಪರ್‌) ಈಶಾನ್‌ […]

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಶಿಯೇಶನ್ ಉಡುಪಿ ವಲಯಾಧ್ಯಕ್ಷರಾಗಿ ಜನಾರ್ದನ್ ಕೊಡವೂರು ಆಯ್ಕೆ

ಉಡುಪಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಶಿಯೇಶನ್ ಉಡುಪಿ ವಲಯಾಧ್ಯಕ್ಷರಾಗಿ ಜನಾರ್ದನ್ ಕೊಡವೂರು ಅವರು ಆಯ್ಕೆಯಾಗಿದ್ದಾರೆ. ಇತರ ಪದಾಧಿಕಾರಿಗಳು: ಗೌರವಾಧ್ಯಕ್ಷ- ಜಯಕರ ಸುವರ್ಣ, ಪ್ರಧಾನ ಕಾರ್ಯದರ್ಶಿ- ಪ್ರವೀಣ್ ಕೊರೆಯ, ಕೋಶಾಧಿಕಾರಿ- ದಿವಾಕರ್ ಹಿರಿಯಡಕ, ಉಪಾಧ್ಯಕ್ಷ- ಸುರಭಿ ಸುಧೀರ್ ಶೆಟ್ಟಿ ಮತ್ತು ಪ್ರವೀಣ್ ಹೂಡೆ, ಜೊತೆ ಕಾರ್ಯದರ್ಶಿ- ಪ್ರಕಾಶ್ ಶೆಟ್ಟಿ, ಕ್ರೀಡಾ ಕಾರ್ಯದರ್ಶಿ- ಅಶೋಕ್ ಆತ್ರಾಡಿ, ಸಂಘಟನಾ ಕಾರ್ಯದರ್ಶಿ- ಮಂಜುನಾಥ್ ಪರ್ಕಳ ಮತ್ತು ದಾಮೋದರ ಸುವರ್ಣ, ಸಾಂಸ್ಕೃತಿಕ ಕಾರ್ಯದರ್ಶಿ- ಸತೀಶ್ ಶೇರಿಗಾರ್, ಹರೀಶ್ ಅಲೆವೂರು ಅವರು ನೇಮಕಗೊಂಡಿದ್ದಾರೆ. ಕಾರ್ಯಕಾರಿ ಸಮಿತಿ […]

ಕಾರ್ಕಳ: ತಾಲೂಕಿನಾದ್ಯಂತ ನಡೆಯುತ್ತಿರುವ ಗೋಕಳ್ಳತನದ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಹಿಂದೂ ಜಾಗರಣ ವೇದಿಕೆ ಆಗ್ರಹ

ಕಾರ್ಕಳ: ಕಾರ್ಕಳ ತಾಲ್ಲೂಕಿನ ಕೆಲವು ಭಾಗಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಗೋವುಗಳ ಕಳ್ಳತನದ ವಿರುದ್ಧ ಹಿಂದೂ ಜಾಗರಣ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ. ಅಜೆಕಾರು, ಶಿರ್ಲಾಲು, ಅಂಡಾರು, ಕೆರ್ವಾಶೆ ಭಾಗದಲ್ಲಿ ಹಟ್ಟಿಯಿಂದಲೇ ದನಗಳ ಕಳ್ಳತನವಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಶಿರ್ಲಾಲು ಒಂದೇ ಗ್ರಾಮದಲ್ಲಿ ಸುಮಾರು 25 ದನ ಕಳ್ಳತನವಾಗಿದೆ. ತಾಲೂಕಿನಾದ್ಯಂತ ಎಗ್ಗಿಲ್ಲದೆ ನಡೆಯುತ್ತಿರುವ ಗೋ ಕಳ್ಳತನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಗೋ ಕಳ್ಳರನ್ನು ಶೀಘ್ರವೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ದನಗಳನ್ನು ಕಳೆದುಕೊಂಡ ಕುಟುಂಬಗಳಿಗೆ ಪರಿಹಾರ ನೀಡಬೇಕು. […]

ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ಮೊಂತಿ ಫೆಸ್ತ್

ಉಡುಪಿ: ಕೊರೊನಾ ಭೀತಿಯ ನಡುವೆ ಕನ್ಯಾಮರಿಯಮ್ಮನವರ ಜನ್ಮದಿನವಾದ ಮೊಂತಿ ಫೆಸ್ತ್ (ತೆನೆ ಹಬ್ಬ) ಅನ್ನು ಜಿಲ್ಲೆಯಾದ್ಯಂತ ಕ್ರೆಸ್ತ ಸಮುದಾಯದ ಜನರು ಭಕ್ತಿ ಭಾವದಿಂದ ಸರಳ ರೀತಿಯಲ್ಲಿ ಬುಧವಾರ ಆಚರಿಸಿದರು. ಕೊರೊನಾ ಹಿನ್ನಲೆಯಲ್ಲಿ ಸರಕಾರದ ಮಾರ್ಗಸೂಚಿಯಂತೆ ಸಾರ್ವಜನಿಕವಾಗಿ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿ ಮೆರವಣಿಗೆಯಲ್ಲಿ ತರುವುದನ್ನು ನೀಷೇಧಿಸಿದ್ದು ಧರ್ಮಗುರುಗಳು ಚರ್ಚಿನಲ್ಲಿಯೇ ಆಯಾ ಊರಿನ ಗುರಿಕಾರರು ತಮ್ಮ ಹೊಲಗಳಿಂದ ಆರಿಸಿ ತಂದ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿದರು. ಪುಟ್ಟ ಮಕ್ಕಳು ಕನ್ಯಾ ಮರಿಯಮ್ಮನವರ ಮೂರ್ತಿಗೆ ಹೂಗಳನ್ನು ಸಮರ್ಪಿಸಿದ ಬಳಿಕ ಜಿಲ್ಲೆಯ […]