ಕುಂದಾಪುರ: ಯುವಕ ನಾಪತ್ತೆ.

ಕುಂದಾಪುರ: ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದುವೆ ನಿಗದಿಯಾಗಿದ್ದ ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಕೊಟೇಶ್ವರ ಗ್ರಾಮದ ಜಯಲಕ್ಷ್ಮೀ ಎಂಬವರು ಕಾರ್ತಿಕ್(28) ಎಂಬವರನ್ನು ಮದುವೆ ಮಾತುಕತೆ ಮಾಡಿಕೊಂಡು ಡಿ.5ರಂದು ಮದುವೆ ಆಗುವುದಾಗಿ ನಿಶ್ಚಯಿಸಿದ್ದರು. ಅದರಂತೆ ಜು.16ರಂದು ಮದುವೆ ನೊಂದಣಿ ಮಾಡಿಕೊಂಡಿದ್ದರು. ನ.27ರಂದು ಅಪರಾಹ್ನ ವೇಳೆ ಕಾರ್ತಿಕ್, ಜಯಲಕ್ಷ್ಮೀಗೆ ಕರೆ ಮಾಡಿ, ತಾನು ಕೋಟೇಶ್ವರದಲ್ಲಿದ್ದು ತನ್ನ ತಾಯಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಇದೆ ಎಂದು ಹೇಳಿ ಹೋಗಿದ್ದರು. ನಂತರ ಅವರು ವಾಪಾಸ್ಸು ಬಾರದೇ ಮೊಬೈಲ್ ಸ್ವಿಚ್‌ಆಫ್ ಮಾಡಿ […]

ಮಂಗಳೂರು: ಬಾಲಕಿ ನಾಪತ್ತೆ.

ಮಂಗಳೂರು: ಮೂಡುಶೆಡ್ಡೆ ಪಂಜುರ್ಲಿ ಕಟ್ಟೆ ಹತ್ತಿರದ ಜಾರದ ಬೆಟ್ಟು ಮನೆ ನಿವಾಸಿ ಕ್ರಿಸ್ಟಲ್ ಕ್ಲೆಮೆಟೀನಾ ಡಿಸೋಜ (14) ಎಂಬಾಕೆ ನ.17ರಿಂದ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. 4.5 ಅಡಿ ಎತ್ತರದ, ಎಣ್ಣೆ ಕಪ್ಪು ಮೈಬಣ್ಣದ, ಬಿಳಿ ಬಣ್ಣದ, ಗುಲಾಬಿ ಹೂಗಳಿರುವ ಟಾಪ್ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುವ ಈಕೆ ಕನ್ನಡ, ತುಳು ಮಾತನಾಡುತ್ತಾಳೆ. ಈ ಬಾಲಕಿಯ ಗುರುತು ಪತ್ತೆಯಾದಲ್ಲಿ ಕಾವೂರು ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ಠಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಉಡುಪಿ: ಹಿರಿಯ ಭಾಗವತ ಬಾಳೆಹದ್ದ ಕೃಷ್ಣ ತಿಮ್ಮಯ್ಯ ಹೆಗಡೆ ನಿಧನ.

ಉಡುಪಿ: ರಾಗ ತಪಸ್ವಿ, ಗಾನ ಯೋಗಿ ಎಂದೆ ಪ್ರಸಿದ್ಧರಾಗಿದ್ದ ಹಿರಿಯ ಭಾಗವತ ಬಾಳೆಹದ್ದ ಕೃಷ್ಣ ತಿಮ್ಮಯ್ಯ ಹೆಗಡೆ (94) ಡಿ.1ರಂದು ನಿಧನರಾದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕತರಾದ ಇವರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಶಿರಸಿ ಸಮೀಪದ ಬಾಳೆಹದ್ದದಲ್ಲಿ ಜನಿಸಿದ ಕೃಷ್ಣ ಭಾಗವತರು ಏಳು ದಶಕಗಳಿಗೂ ಅಧಿಕ ಕಾಲ ಯಕ್ಷಗಾನ ಪದ್ಯ ಹಾಡುತ್ತಾ ಹೊಸ ಹೊಸ ರಾಗಗಳನ್ನು ಅನ್ವೇಷಿಸುತ್ತಾ ಸಂಗೀತಕ್ಕಾಗಿಯೇ ತಮ್ಮನ್ನು ಸಮರ್ಪಿಸಿ ಕೊಂಡಿದ್ದರು. ಹೊಸ್ತೋಟ ಮಂಜುನಾಥ ಭಾಗವತರೂ ಸೇರಿದಂತೆ ಆ ಕಾಲದ ಹಿರಿಯ ಕಲಾವಿದರೊಂದಿಗೆ […]

ಉಡುಪಿ: ಯಕ್ಷಗಾನ ಮೇಳದ ಚೌಕಿ ಮನೆಗೂ ನುಗ್ಗಿದ ಮಳೆ ನೀರು; ಯಕ್ಷಗಾನ ರದ್ದು

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ಯಕ್ಷಗಾನ ಮೇಳಗಳಿಗೂ ಸಮಸ್ಯೆ ಎದುರಾಗಿದೆ. ಉಡುಪಿಯಲ್ಲಿ ಮಂದಾರ್ತಿ ಮೇಳದ ಚೌಕಿ ಮನೆಗೆ ಮಳೆ ನೀರು ನುಗ್ಗಿದೆ. ವೇಷಧಾರಿಗಳು ಬಣ್ಣ ಹಾಕುವ ಚೌಕಿ ಮನೆಯ ತುಂಬೆಲ್ಲ ನೀರು ತುಂಬಿದೆ. ಇದರಿಂದ ಸೋಮವಾರ ರಾತ್ರಿಯ ಬಹುತೇಕ ಯಕ್ಷಗಾನಗಳು ರದ್ದಾಗಿವೆ. ಚೌಕಿ ಮನೆಯ ಒಳಗೆ ಧಾರಾಕಾರ ಮಳೆ ನೀರು ಹರಿದು ಹೋಗುತ್ತಿದೆ. ಮಳೆಗಾಲ ಮುಗಿದ ನಂತರವೇ ಯಕ್ಷಗಾನ ಆರಂಭವಾಗುವುದು ಪ್ರತೀತಿ. ಆದರೆ, ಈ ಬಾರಿ ಡಿಸೆಂಬರ್ ತಿಂಗಳಲ್ಲೂ ಮಳೆ ಸುರಿಯುತ್ತಿದೆ. ಇದರಿಂದ ಪ್ರದರ್ಶನಗಳು […]

ಉಡುಪಿ: ಲಯನ್ಸ್ ಕ್ಲಬ್ ಪರ್ಕಳ ವತಿಯಿಂದ ಸಹಾಯಧನ ವಿತರಣೆ.

ಉಡುಪಿ: ಲಯನ್ಸ್ ಕ್ಲಬ್ ಪರ್ಕಳ ವತಿಯಿಂದ ಡಿ.3ರಂದು ಅತ್ರಾಡಿ ಮದಗ ಇಲ್ಲಿ ಕಳೆದ ಜುಲೈ ತಿಂಗಳಲ್ಲಿ ಬೀಕರ ಮಳೆಗೆ ಪೂರ್ಣ ಕುಸಿದಗೊಂಡ ಮನೆಯನ್ನು ಪುನರ್ನಿರ್ಮಾಣ ಮಾಡಲು ಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್’ನ ಒಂದು ಪ್ರಮುಖ ಕಾರ್ಯಕ್ರಮವಾದ “ಹೋಮ್ ಫಾರ್ ಹೋಂ ಲೆಸ್ ” ಕಾರ್ಯಕ್ರಮದಡಿಯಲ್ಲಿ ಸಹಾಯದನವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಲಯನ್ಸ್ ಜಿಲ್ಲೆ 317c ಯ ಪ್ರಥಮ ಜಿಲ್ಲಾ ಉಪಗವರ್ನರ್ ಪಿಎಂಜೆಎಪ್ ಲಯನ್ ಸ್ವಪ್ನ ಸುರೇಶ್, ಪರ್ಕಳ ಕ್ಲಬ್ ನ ಮಾಜಿ ಅಧ್ಯಕ್ಷರಾದ ಎಂಜೆಎಪ್ ಲಯನ್ ರಾಧಾಕೃಷ್ಣ ಮೆಂಡನ್, […]