ಉಡುಪಿ: ಸಚಿವ ಸುನಿಲ್ ಕುಮಾರ್ ಅವರಿಂದ ಅಮೃತ ಯೋಜನೆ, ಕೋವಿಡ್ ನಿರ್ವಹಣೆ ಬಗ್ಗೆ ಪ್ರಗತಿ ಪರಿಶೀಲನೆ

ಉಡುಪಿ: ಇಂಧನ, ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆ ಸಚಿವ ಸುನಿಲ್ ಕುಮಾರ್ ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಅಮೃತ ಯೋಜನೆ ಹಾಗೂ ಕೋವಿಡ್ ನಿರ್ವಹಣೆ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು. ಕೋವಿಡ್ ಸೋಂಕಿತರು, ಲಸಿಕೆ ವಿತರಣೆ, ಆಕ್ಸಿಜನ್ ಪ್ಲಾಂಟ್ ನಿರ್ಮಾಣದ ಪ್ರಗತಿ ಮತ್ತಿತರ ವಿಷಯಗಳ ಬಗ್ಗೆ ವಿವರವಾದ ಚರ್ಚೆ ನಡೆಸಲಾಯಿತು. ಆಕ್ಸಿಜನ್ ಪ್ಲಾಂಟ್ ಹಾಗೂ ಐಸಿಯು ನಿರ್ಮಾಣ ವಿಳಂಬವಾಗಿರುವುದಕ್ಕೆ ಅಸಮಾಧಾನ ಸೂಚಿಸಿದ ಸಚಿವರು ತ್ವರಿತವಾಗಿ ಕೆಲಸ ಪೂರ್ಣಗೊಳಿಸಲು ಸೂಚಿಸಿದರು. ಸಂಪೂರ್ಣ ಲಸಿಕೀಕರಣ […]

ಅಲೆವೂರು: ಸೆ. 10ರಿಂದ 37ನೇ ವರ್ಷದ ಗಣೇಶೋತ್ಸವ

ಅಲೆವೂರು: ಅಲೆವೂರು ಶ್ರೀಗಣೇಶ ಗುಡಿಯ ಗಣಪತಿ ದೇವರಿಗೆ ಸಾರ್ವಜನಿಕ ಗಣೇಶೋತ್ಸವ ಸಮಿತಿ ಗುಡ್ಡೆಅಂಗಡಿ, ಅಲೆವೂರು ಇದರ ವತಿಯಿಂದ ₹ 10 ಲಕ್ಷ ಮೌಲ್ಯದ ಸ್ವರ್ಣಕವಚ ಸಮರ್ಪಣೆ ಕಾರ್ಯಕ್ರಮ ನಾಳೆ (ಸೆ.10) ಬೆಳಿಗ್ಗೆ 10.30ಕ್ಕೆ ನೆರವೇರಲಿದೆ. 37ನೇ ವರ್ಷದ ಗಣೇಶೋತ್ಸವವು ಸೆ. 10ರಿಂದ 13ರ ವರೆಗೆ ಅಲೆವೂರು ಶ್ರೀಗಣೇಶ ಗುಡಿಯಲ್ಲಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಪ್ರಥಮ ದಿನದ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ವಿಗ್ರಹ ಪ್ರತಿಷ್ಠಾಪನೆ, ಅಂದಾಜು ₹ 10 ಲಕ್ಷ ರೂ.ಮೌಲ್ಯದ ನಿತ್ಯಪೂಜಿತ ಗಣಪನಿಗೆ ಸ್ವರ್ಣಕವಚ ಸಮರ್ಪಣೆ ಜರುಗಲಿದೆ. […]

ಭಾರತೀಯ ವಾಯುಪಡೆ: ಗ್ರೂಪ್‌ ಸಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಗ್ರೂಪ್‌ ಸಿ ವೃಂದದ ಹುದ್ದೆಗಳ ನೇಮಕಾತಿಗೆ ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಗ್ರೂಪ್‌ ಸಿ ವೃಂದದ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಸಂಖ್ಯೆ: 125 ಹುದ್ದೆಗಳ ವಿವರ 1) ಕಾರ್ಪೆಂಟರ್‌–03 2) ಮಲ್ಟಿ ಟಾಸ್ಕಿಂಗ್‌–103 3) ಕ್ಲರ್ಕ್–10 4) ಸ್ಟೋರ್‌ ಕೀಪರ್‌ –06 5) ಸೂಪರ್‌ ವೈಸರ್–03 6) ಪೇಂಟರ್‌–02 7) ಮೇಸ್‌ ಸ್ಟಾಪ್‌ –01 ವಿದ್ಯಾರ್ಹತೆ: ಅಭ್ಯರ್ಥಿಗಳು ಹುದ್ದೆಗಳಿಗೆ ಅನುಸಾರವಾಗಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿ ವಿದ್ಯಾರ್ಹತೆಯನ್ನು […]

ಸೆ.10ರಂದು ಮಣಿಪಾಲ ಕೆಎಂಸಿ ಆಸ್ಪತ್ರೆಯ ಹೊರರೋಗಿ ವಿಭಾಗಕ್ಕೆ ರಜೆ

ಮಣಿಪಾಲ: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಸೆ 10ರ ಶುಕ್ರವಾರದಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಹೊರರೋಗಿ ವಿಭಾಗಕ್ಕೆ ರಜೆ ಇರಲಿದೆ. ಆದಾಗ್ಯೂ ಅಪಘಾತ ಮತ್ತು ತುರ್ತು ಚಿಕಿತ್ಸಾ ವಿಭಾಗವು ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂಡಾರು ದೇವಿಪ್ರಸಾದ್ ಶೆಟ್ಟಿಗೆ ಕೇಂದ್ರ ಸಚಿವರಿಂದ ಗೌರವ

ಉಡುಪಿ: ಬೆಂಗಳೂರು ಬಾಗಲಗುಂಟೆಯ ಶ್ರೀ ಸಾಯಿ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ರಾಜ್ಯ ಫಲಾನುಭವಿಗಳ ಪ್ರಕೋಷ್ಠದ ಸಭೆಯಲ್ಲಿ ಕರ್ನಾಟಕ ರಾಜ್ಯ ಬಿಜೆಪಿ ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಂಚಾಲಕರು ಆಗಿರುವ ನೂತನ ಕೇಂದ್ರ ರಾಸಾಯನಿಕ, ರಸಗೊಬ್ಬರ ಖಾತೆ ಸಚಿವ ಭಗವಂತ ಖೂಬಾ ಅವರನ್ನು ಕರ್ನಾಟಕ ರಾಜ್ಯ ಬಿಜೆಪಿ ಫಲಾನುಭವಿಗಳ ಪ್ರಕೋಷ್ಠದ ವತಿಯಿಂದ ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಬಿಜೆಪಿ ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಹಾಗೂ ಮಂಗಳೂರು ವಿಭಾಗ ಪ್ರಭಾರಿ ಅಂಡಾರು ದೇವಿಪ್ರಸಾದ್ ಶೆಟ್ಟಿ ಅವರನ್ನು […]