ಉಡುಪಿ:ಕ್ಯಾನ್ಸರ್ ಕಾಯಿಲೆಯ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ವಿಶ್ವ ಕ್ಯಾನ್ಸರ್ ದಿನ ಆಚರಣೆ : ಪ್ರಭಾರ ಡಿ.ಹೆಚ್.ಓ ಡಾ. ನಾಗರತ್ನ

ಉಡುಪಿ: ಕ್ಯಾನ್ಸರ್ ಕಾಯಿಲೆಯ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ಹಾಗೂ ಅದರ ತಡೆಗಟ್ಟುವಿಕೆ, ಪತ್ತೆಹಚ್ಚುವಿಕೆ ಮತ್ತು ಚಿಕಿತ್ಸೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿಶ್ವ ಕ್ಯಾನ್ಸರ್ ದಿನವನ್ನು ಆಚರಿಸಲಾಗುತ್ತಿದ್ದು, ಕ್ಯಾನ್ಸರ್ನಿಂದ ಉಂಟಾಗುವ ಅನಾರೋಗ್ಯ ಮತ್ತು ಸಾವುಗಳನ್ನುಗಮನಾರ್ಹವಾಗಿ ಕಡಿಮೆ ಮಾಡುವುದು ಈ ದಿನದ ಪ್ರಾಥಮಿಕ ಗುರಿಯಾಗಿದೆ ಎಂದು ಪ್ರಭಾರ ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗರತ್ನ ಹೇಳಿದರು. ಅವರು ಸೋಮವಾರ ನಗರದ ಅಜ್ಜರಕಾಡು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, […]
ದುಬೈನ ವಿದ್ವಾರ್ಸ್ ಬಾಯ್ಸ್ ತಂಡಕ್ಕೆ ಚಾಂಪಿಯನ್ ಟ್ರೋಫಿ.

ದುಬೈಯ ಅಜ್ಮಾನ್ ರಾಯಲ್ ಮೈದಾನದಲ್ಲಿ ಜರಗಿದ ಯು.ಎ.ಇ ಯ ಪ್ರತಿಷ್ಠಿತ ಕ್ರಿಕೆಟ್ ಪಂದ್ಯಾಕೂಟದಲ್ಲಿ ದುಬೈನ ವಿದ್ವಾರ್ಸ್ ಕ್ರಿಕೆಟ್ ತಂಡವು ಚಾಂಪಿಯನ್ ತಂಡವಾಗಿ ಎ-7 ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು. ದುಬೈನ ಕನ್ನಡಿಗರ ಬಳಗದ ಶ್ರೀಸಾಹಿಲ್ ನೆಲೆಯಾಡಿ ಹಾಗೂ ಸ್ನೇಹಿತರು ಆಯೋಜಿಸಿದ ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕನ್ನಡಿಗರಿಗೆ ಪ್ರಥಮ ಪ್ರಾಶಸ್ತ್ಯ ನೀಡಲಾಗಿತ್ತು.ಪ್ರತಿತಂಡವು ಗರಿಷ್ಠ ಇಬ್ಬರು ಕರ್ನಾಟಕೇತರ ಆಟಗಾರರನ್ನು ಮಾತ್ರ ಹೊಂದಿರಬಹುದು. ದುಬೈನಲ್ಲಿ ನೆಲೆಸಿರುವ ಕನ್ನಡಿಗರ ಬಲಿಷ್ಠ ಹತ್ತುತಂಡಗಳು ಈ ಕ್ರಿಕೆಟ್ ಕೂಟದಲ್ಲಿ ಪಾಲ್ಗೊಂಡಿದ್ದು ಲೀಗ್ ಮಾದರಿಯಲ್ಲಿ ಈ ಪಂದ್ಯಾವಳಿಯು ಜರಗಿತ್ತು. ಬಹುತೇಕ […]
ಮಣಿಪಾಲ: ವೃದ್ಧೆ ನಾಪತ್ತೆ

ಉಡುಪಿ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಮಂಚಿಕೋಡಿ ನಿವಾಸಿ ಜಯಲಕ್ಷ್ಮಿ (65) ಎಂಬ ವೃದ್ಧೆಯು 2024 ರ ಆಗಸ್ಟ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಮಾನ್ಯ ಶರೀರ ಹೊಂದಿದ್ದು, ಕನ್ನಡ, ಕೊಂಕಣಿ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ ನಿರೀಕ್ಷಕರು ಮೊ.ನಂ: 9480805448, ಪಿ.ಎಸ್.ಐ ಮಣಿಪಾಲ ಮೊ.ನಂ: 9480805475 […]
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಉಡುಪಿ ತಾಲೂಕು ವತಿಯಿಂದ ಮಣಿಪಾಲ ರಾಜೀವನಗರ ಸರಕಾರಿ ಶಾಲೆಗೆ ಬೆಂಚ್ ಡೆಸ್ಕ್ ಗಳ ಕೊಡುಗೆ.

ಉಡುಪಿ: ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ಇದರ ಉಡುಪಿ ತಾಲೂಕು ವತಿಯಿಂದ ಜ್ಞಾನ ದೀಪ ಕಾರ್ಯಕ್ರಮದಡಿಯಲ್ಲಿ ಇಂದು ರಾಜೀವನಗರ ಸರಕಾರಿ ಶಾಲೆಗೆ ಸುಮಾರು ರೂಪಾಯಿ 70,000 ಮೌಲ್ಯದ ಡೆಸ್ಕ್ ಮತ್ತು ಬೆಂಚುಗಳನ್ನು ಹಸ್ತಾಂತರ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು 80 ಬಡಗುಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರು ಕೇಶವ ಕೋಟ್ಯಾನ್ ರವರು ವಹಿಸಿದ್ದರು. ಕಾರ್ಯಕ್ರಮದ ದೀಪ ಬೆಳಗಿಸಿ ಉದ್ಘಾಟನೆ ಮಾಡಿದ ತಾಲೂಕು ಜನಜಾಗೃತಿ ಸದಸ್ಯ ಆತ್ರಾಡಿ ಸತ್ಯಾನಂದ ನಾಯಕ್ ಇವರು ಯೋಜನೆ ಹುಟ್ಟುಬಂಧ ದಾರಿ ಮತ್ತು […]
ಎಲ್ಲಾದ್ರೂ ಈ ಹಣ್ಣು ಸಿಕ್ಕಿದ್ರೆ ಮಿಸ್ ಮಾಡದೇ ತಿನ್ನಿ:ದೇಹಕ್ಕೆ ಈ ಹಣ್ಣು ಪವರ್ ಫುಲ್

ಮಾರುಕಟ್ಟೆಯಲ್ಲಿ ನೂರಾರು ವಿದೇಶಿ ಹಣ್ಣು ಈಗೀಗ ಲಗ್ಗೆ ಇಡುತ್ತಿದೆ. ಆದರೆ ನಾವು ನಮ್ಮ ಊರಿನಲ್ಲಿ ಬೆಳೆಯುವ, ಹತ್ತಾರು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿರುವ ಕೆಲವು ಹಣ್ಣುಗಳನ್ನೇ ಮರೆತುಬಿಡುತ್ತಿದ್ದೇವೆ. ಅವುಗಳಲ್ಲಿ ಸ್ಟಾರ್ ಫ್ರೂಟ್ (ಧಾರೆಹುಳಿ) ಹಣ್ಣು ಕೂಡ ಒಂದು. ಈ ಹಣ್ಣು ನಮ್ಮಲ್ಲಿ ಹೊಸ ಶಕ್ತಿ ಚೈತನ್ಯವನ್ನು ತುಂಬಿಸುವಷ್ಟು ಪವರ್ ಫುಲ್. ಇದು ಹುಳಿಮಿಶ್ರಿತ ಸಿಹಿ ಹಣ್ಣಾಗಿದ್ದು, ಅನೇಕ ಪೋಷಕಾಂಶಗಳ ಆಗರ ಈ ಹಣ್ಣು. ಬಾಲಿವುಡ್ನ ಅತ್ಯಂತ ಫಿಟೆಸ್ಟ್ ದಿವಾ ಶಿಲ್ಪಾ ಶೆಟ್ಟಿ ಕೂಡ ಇದರ ಪೌಷ್ಟಿಕಾಂಶದ ಶಕ್ತಿಯನ್ನು ಶ್ಲಾಘಿಸುತ್ತಾರೆ. […]