ಮಣಿಪಾಲ್ ಮ್ಯಾರಥಾನ್ ನಲ್ಲಿ ಸಾವಿರಾರು ಜನ ಭಾಗಿ

ಮಣಿಪಾಲ: ಮಣಿಪಾಲದ ಮಾಹೆ ವಿಶ್ವವಿದ್ಯಾಲಯ ನಡೆಸಿಕೊಂಡು ಬರುತ್ತಿರುವ ದೇಶದ ಪ್ರತಿಷ್ಠಿತ ಮಣಿಪಾಲ್ ಮ್ಯಾರಥಾನ್ ಏಳನೇ ಆವೃತ್ತಿ ಭಾನುವಾರ ನಡೆಯಿತು. ಭಾರತ ಸೇರಿದಂತೆ ಅನೇಕ ದೇಶಗಳ ಕ್ರೀಡಾಪಟುಗಳು ಈ ಮ್ಯಾರಥಾನ್ ನಲ್ಲಿ ಭಾಗಿಯಾದರು. 42kmಗಳ ಫುಲ್ ಮ್ಯಾರಥಾನ್ ಸಹಿತ ವಿವಿಧ ಹಂತಗಳಲ್ಲಿ ಸ್ಪರ್ಧಾಕೂಟ ನಡೆಯಿತು.ದೇಶದಲ್ಲೇ ಪ್ರತಿಷ್ಠಿತ ಎನಿಸಿರುವ ಮಣಿಪಾಲ್ ಮ್ಯಾರಥಾನ್ ಮುಂಜಾನೆ ಆರಂಭಗೊಂಡಿತು.ಸುಮಾರು 17,000ಕ್ಕೂ ಅಧಿಕ ಮಂದಿ ಓಟಗಾರರು ದೇಶವಿದೇಶಗಳಿಂದ ಈ ಮ್ಯಾರಥಾನ್ ನಲ್ಲಿ ಭಾಗಿಯಾದರು. ಆರೋಗ್ಯ ಮತ್ತು ಸದೃಢತೆಗಾಗಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದು ಎಂಬ ಘೋಷ ವಾಕ್ಯದೊಂದಿಗೆ ಮ್ಯಾರಾಥಾನ್ […]
ಉಡುಪಿ: ಅಕ್ರಮವಾಗಿ ಕೋಣ ಸಾಗಿಸುತ್ತಿದ್ದ ಪಿಕ್ ಅಪ್ ವಾಹನ ಅಪಘಾತ

ಉಡುಪಿ: ಅಕ್ರಮವಾಗಿ ಕೋಣ ಸಾಗಿಸುತ್ತಿದ್ದ ಪಿಕ್ ಅಪ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉಡುಪಿ ನಗರದ ಅಂಬಾಗಿಲಿನಲ್ಲಿ ಸಂಭವಿಸಿದೆ. ಬೆಳಗಾವಿಯಿಂದ ಮಂಜೇಶ್ವರಕ್ಕೆ ಅಕ್ರಮವಾಗಿ ಪಿಕ್ ಅಪ್ ವಾಹನದಲ್ಲಿ ಕೋಣ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಅಪಘಾತಗೊಂಡ ವಾಹನ ಪರಿಶೀಲಿಸಿದಾಗ ಹಿಂಸಾತ್ಮಕವಾಗಿ ಕಟ್ಟಿಹಾಕಿದ್ದ 7 ಕೋಣಗಳು ಪತ್ತೆಯಾಗಿವೆ. ವಾಹನದಲ್ಲಿದ್ದ ಇಬ್ಬರ ಪೈಕಿ ಓರ್ವ ಪರಾರಿಯಾಗಿದ್ದು, ಓರ್ವನನ್ನ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಧನ್ವಂತರಿ ನರ್ಸಿಂಗ್ ಕಾಲೇಜಿನಲ್ಲಿ ಕಾಲೇಜು ವಾರ್ಷಿಕೋತ್ಸವ, ಪದವಿ ಪ್ರದಾನ

ಉಡುಪಿ: ಉಡುಪಿಯ ಸಂತೆಕಟ್ಟೆ ಯಲ್ಲಿರುವ ಧನ್ವಂತರಿ ನರ್ಸಿಂಗ್ ಕಾಲೇಜಿನಲ್ಲಿ ಕಾಲೇಜು ವಾರ್ಷಿಕೋತ್ಸವ ಹಾಗೂ ಪದವಿ ಪ್ರದಾನ ಸಮಾರಂಭ ಜರುಗಿತು. ಮುಖ್ಯ ಅತಿಥಿಗಳಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಮೂಳೆ ರೋಗಗಳ ಘಟಕದ ಮುಖ್ಯಸ್ಥರಾದ ಡಾ. ಮೋನಪ್ಪ ನಾಯ್ಕ್ ಪದವಿ ಪ್ರದಾನ ಮಾಡಿ, ಶಿಕ್ಷಣವು ನಿಂತ ನೀರಾಗದೆ ಜೀವನದುದ್ದಕ್ಕೂ ಬೇರೆ ಬೇರೆ ವಿಷಯಗಳ ಕುರಿತು ಜ್ಞಾನವನ್ನು ಸಂಪಾದಿಸುವಂತೆ ಜೊತೆಗೆ ರೋಗಿಗಳೊಂದಿಗೆ ಉತ್ತಮ ಸಂವಹನ ಕಾಯ್ದುಕೊಂಡು ಹೆತ್ತವರ ಹೆಸರನ್ನು ಉಳಿಸಿ ಕೀರ್ತಿವಂತರಾಗಿ ಬಾಳಿ ಎಂಬುದಾಗಿ ವಿದ್ಯಾರ್ಥಿಗಳಿಗೆ ಶುಭಕೋರಿದರು ಹಾಗೂ ಪ್ರಶಾಂತವಾದ ವಾತಾವರಣದಲ್ಲಿ […]
ಮಂಗಳೂರು: ‘ಭೀಮಾ ಜುವೆಲ್ಲರ್ಸ್’ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಫೆ.11ರಂದು ಸಂದರ್ಶನ

ಉಡುಪಿ: ಪ್ರತಿಷ್ಠಿತ “ಭೀಮಾ ಜುವೆಲ್ಲರ್ಸ್’ ಮಂಗಳೂರಿನ ಮಳಿಗೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಆಹ್ವಾನಿಸಲಾಗಿದೆ. ಇದೇ ಫೆ.11ರಂದು ಬೆಳಿಗ್ಗೆ 10ರಿಂದ ಸಂಜೆ 5ಗಂಟೆಯವರೆಗೆ “ಹೋಟೆಲ್ ದೀಪಾ ಕಂಫರ್ಟ್” ಎಂಜಿ ರಸ್ತೆ, ಕೊಡಿಯಾಲ್ ಬೈಲ್, ಮಂಗಳೂರು ಇಲ್ಲಿ ಸಂದರ್ಶನ ನಡೆಯಲಿದೆ. ಸ್ಟೋರ್ಸ್ ಸೇಲ್ಸ್ ಹುದ್ದೆ (M/F) ಚಿಲ್ಲರೆ ಉದ್ಯಮದಲ್ಲಿ 1 ರಿಂದ 15 ವರ್ಷಕ್ಕಿಂತ ಮೇಲ್ಪಟ್ಟು ಅನುಭವ ಇರುವ ಅಭ್ಯರ್ಥಿಗಳು ಹಾಗೂ ಪ್ರೆಶರ್ಸ್ ಅಭ್ಯರ್ಥಿಗಳು ಕೂಡ ಭಾಗವಹಿಸಬಹುದು. ಬ್ರಾಂಚ್ ಅಕೌಂಟೆಂಟ್ (M)ಚಿಲ್ಲರೆ ಅಂಗಡಿ ಅಕೌಂಟೆಂಟ್ ಆಗಿ ಎರಡು ವರ್ಷಕ್ಕಿಂತ ಹೆಚ್ಚು […]
ಉಡುಪಿ: ಹಿರಿಯ ಕಾಂಗ್ರೆಸ್ ಮುಖಂಡ ಟಿ.ಗೋಪಾಲಕೃಷ್ಣ ಶೆಟ್ಟಿ ನಿಧನ

ಉಡುಪಿ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಟಿ. ಗೋಪಾಲಕೃಷ್ಣ ಶೆಟ್ಟಿ (77) ಅವರು ಇಂದು ನಿಧನ ಹೊಂದಿದರು. ಇವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು, ತಾಲೂಕು ಪಂಚಾಯತ್ ನ ಮಾಜಿ ಸದಸ್ಯರು, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಪ್ರಸುತ್ತ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಗೌರವ ಸಲಹೆಗಾರರು, ಕಿರಣ್ ಮಿಲ್ಕ್ ಸಂಸ್ಥೆಯ ಮಾಲಕರು, ಹಲವಾರು ವರ್ಷಗಳ ಕಾಲ ನಿರಂತರ ಜನಸೇವೆ ಯಲ್ಲಿ ತೊಡಗಿಸಿಕೊಂಡಿದ್ದರು. ಇವರ ನಿಧನಕ್ಕೆ ಪಕ್ಷದ ಮುಂಖಡರು, ಬಂಧುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.