ಪವರ್ ಪರ್ಬ 2025 ಸಮಾರೋಪ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳಾ ಸಾಧಕರಿಗೆ’ಪವರ್ ಸ್ಟಾರ್’ ಬಿರುದು

ಉಡುಪಿ: ಮಹಿಳಾ ಉದ್ಯಮಿಗಳ ಪವರ್ ಸಂಸ್ಥೆ ಫ್ಲ್ಯಾಟ್ ಫಾರಂ ಆಫ್ ವುಮೆನ್ ಎಂಟರ್ಪ್ರೆನ್ಯೂರ್) ಆಶ್ರಯದಲ್ಲಿ ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ನಡೆಯುತ್ತಿರುವ ‘ಪವರ್ ಪರ್ಬ 2025’ರ ಸಮಾರೋಪವು ರವಿವಾರ ನಡೆಯಿತು. ವಿವಿಧ ಕ್ಷೇತ್ರಗಳ ಮಹಿಳಾ ಸಾಧಕರಾದ ಮಿನುಷಾ ಗೋಪಾಲ್, ಕಾಂಚನ್, ಚೈತ್ರಾ ಬಿ.ಶೆಟ್ಟಿ ವಿದುಷಿ ಮಾನಸಿ ಸುಧೀರ್, ಸುಲತಾ ಕಾಮತ್, ಎ.ಲಕ್ಷ್ಮೀಬಾಯಿ, ಡಾ| ಗೌರಿ ಎಚ್. ಜೆ., ಡಾ| ಶ್ರುತಿ ಬಲ್ಲಾಳ್ ಅವರನ್ನು ‘ಪವರ್ ಸ್ಟಾರ್’ ಬಿರುದಿನೊಂದಿಗೆಸಮ್ಮಾನಿಸಲಾಯಿತು. ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಸದಸ್ಯರಾದ ಬಾಲಕೃಷ್ಣ ಶೆಟ್ಟಿ ಹರೀಶ್ […]
ಹಿರಿಯಡಕ: ನಾಳೆ (ಫೆ.11) ಶ್ರೀ ದುರ್ಗಾಪರಮೇಶ್ವರೀ ಯಜ್ಞಶಾಲಾ (ರಿ.) ಪಂಚನಬೆಟ್ಟಿನಲ್ಲಿ ನಾಡಿನ ಸುಭಿಕ್ಷೆಗಾಗಿ ಅಯುತ ಸಂಖ್ಯಾ “ಆರ್ಯಾರ್ಚನಮ್” ಧಾರ್ಮಿಕ ಸಭೆ – ಸಾಂಸ್ಕೃತಿಕ ವೈಭವ.

ಉಡುಪಿ: ಶ್ರೀ ದುರ್ಗಾಪರಮೇಶ್ವರೀ ಯಜ್ಞಶಾಲಾ (ರಿ.) ಪಂಚನಬೆಟ್ಟು, ಹಿರಿಯಡಕ ಉಡುಪಿ ಇಲ್ಲಿ ನಾಡಿನ ಸುಭಿಕ್ಷೆಗಾಗಿ ಪ್ರಪ್ರಥಮ ಬಾರಿಗೆ ದೀಪ-ದೀವಟಿಗೆಗಳಿಂದ ಅಲಂಕೃತವಾದ ದಿವ್ಯ ಮಂಟಪದಲ್ಲಿ ಸುವಾಸಿನಿಯರಿಂದ ದುರ್ಗಾಪ್ರೀತ್ಯರ್ಥ ಅಯುತ ಸಂಖ್ಯಾ “ಆರ್ಯಾರ್ಚನಮ್” ಧಾರ್ಮಿಕ ಸಭೆ – ಸಾಂಸ್ಕೃತಿಕ ವೈಭವ, ಅಷ್ಟಾವಧಾನ ಸೇವಾಪೂರ್ವಕ ಪೂಜಾಕಾರ್ಯಕ್ರಮಗಳು, ಪೂಜ್ಯ ಡಾ. ಶ್ರೀ ಜಿ. ಭೀಮೇಶ್ವರ ಜೋಷಿ, ಧರ್ಮಕರ್ತರು ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರೀ ದೇವಸ್ಥಾನ, ಶ್ರೀಕ್ಷೇತ್ರ ಹೊರನಾಡು ಇವರ ದಿವ್ಯ ಉಪಸ್ಥಿತಿಯಲ್ಲಿ ಫೆ.11 ಮಂಗಳವಾರ ಸಮಯ ಸಂಜೆ 4:00 ರಿಂದ ಸ್ಥಳ: ಶ್ರೀ ದುರ್ಗಾಪರಮೇಶ್ವರೀ […]
ಮಲ್ಪೆ: ಮೀನುಗಾರಿಕೆ ಮಾಡುತ್ತಿರುವಾಗ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು.

ಮಲ್ಪೆ: ಮೀನುಗಾರಿಕೆ ಮಾಡುತ್ತಿರುವಾಗ ಮೀನುಗಾರರೊಬ್ಬರು ಸಮುದ್ರಕ್ಕೆ ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಕೇರಳದ ರಾಜನ್(54) ಎಂದು ಗುರುತಿಸಲಾಗಿದೆ. ಮಲ್ಪೆ ಬಾಲಕರ ಶ್ರೀರಾಮ ಭಜನಾಮಂದಿರದ ಎದುರು ಸಮುದ್ರದಲ್ಲಿ ಫೆ.7ರಂದು ಮೀನುಗಾರಿಕೆ ಮಾಡುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು. ಹುಡುಕಾಡಿದಾಗ ಅವರ ಮೃತದೇಹವು ಫೆ.8ರಂದು ಬೆಳಗಿನ ಜಾವ ಮಲ್ಪೆಪಡುಕೆರೆ ಸಮುದ್ರ ತೀರದಲ್ಲಿ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿದ್ದಾಪುರದಲ್ಲಿ 8ನೇ ವರ್ಷದ ಮಕ್ಕಳ ಯಕ್ಷಗಾನ ಪ್ರದರ್ಶನ, ಗುರುವಂದನೆ

ಉಡುಪಿ: ಯಕ್ಷಗಾನವನ್ನು ಮಕ್ಕಳು ಕಲಿತರೆ ಅವರ ಶೈಕ್ಷಣಿಕ ಪ್ರಗತಿಗೆ ತೊಡಕಾಗುತ್ತದೆ ಎಂಬ ಆತಂಕವನ್ನು ಹೆತ್ತವರು ಬಿಡಬೇಕು. ಯಕ್ಷಗಾನವನ್ನು ಕಲಿತ ಮಕ್ಕಳು ಕಲಿಕೆಯಲ್ಲೂ ಅತೀ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗುತ್ತಿದ್ದಾರೆ ಎಂಬುದನ್ನು ಮನಗಾಣಬೇಕು. ಯಕ್ಷಗಾನ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಶನಿವಾರ ಸಿದ್ಧಾಪುರದ ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ಯಕ್ಷ ನುಡಿಸಿರಿ ಬಳಗ ಸಿದ್ಧಾಪುರ ಇವರ ಆಶ್ರಯದಲ್ಲಿ ಕರ್ನಾಟಕ ಯಕ್ಸಗಾನ ಅಕಾಡೆಮಿ ಬೆಂಗಳೂರು ಇವರ ಸಹಯೋಗದೊಂದಿಗೆ ಹಮ್ಮಿಕೊಂಡ […]
ಉಡುಪಿ:ಉಡುಪಿ ಜಿಲ್ಲಾ ಮೂಲ ಗೇಣಿದಾರರ ಸಮಾವೇಶ

ಉಡುಪಿ:ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೂಲಗೇಣಿ ಒಕ್ಕಲುಗಳ ಸಮಸ್ಯೆ ಅತ್ಯಂತ ಐತಿಹಾಸಿಕವಾಗಿದ್ದು ಸ್ವಾತಂತ್ರ್ಯ ದೊರಕಿ ಏಳುವರೆ ದಶಕಗಳ ಅನಂತರವೂ ಜೀವಂತವಾಗಿ ಮುಂದುವರಿದಿರುವುದು ಅತ್ಯಂತ ಕಳವಳಕಾರಿ ಬೆಳವಣಿಗೆ. ಈ ರೀತಿಯ ಶೇೂಷಣೆ ನಿವಾರಿಸುವರೆ ರಾಜ್ಯ ಸರ್ಕಾರ 2011ರಲ್ಲಿ ಮೂಲಗೇಣಿದಾರರಿಗೆ ಭೂಮಿಯ ಸಂಪೂರ್ಣ ಒಡೆತನ ಖಾತ್ರಿ ಪಡಿಸುವ ಕಾಯಿದೆ ನಿರ್ಣಯಿಸಿ ರಾಷ್ಟ್ರಪತಿಗಳ ಅಂಕಿತವನ್ನು ಪಡೆದು ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ಕೆಲವೊಂದು ಹಿತಾಸಕ್ತಿ ಮೂಲಿದಾರರು ಹೈಕೋರ್ಟ್ ಮೆಟ್ಟಿಲು ಹತ್ತಿದರು.ಇದರ ಪರಿಣಾಮವಾಗಿ ರಾಜ್ಯ ಉಚ್ಚ ನ್ಯಾಯಾಲಯದ ಏಕ ಸದಸ್ಯ ಪೀಠ ಮೂಲಗೇಣಿದಾರರ ಬೇಡಿಕೆ ನ್ಯಾಯಯುತವಾಗಿದೆ […]