ಮಂಗಳೂರು – ಮಣಿಪಾಲದ ಅತಿದೊಡ್ಡ ರಿಫೈನರಿ ಸರ್ವಿಸ್ ಯೂನಿಟ್ ನಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ.
ಬೆಳ್ತಂಗಡಿ: ಬೈಕ್ ಡಿಕ್ಕಿ- ಗಂಭೀರ ಗಾಯಗೊಂಡಿದ್ದ ಪಾದಾಚಾರಿ ಮೃತ್ಯು.

ಬೆಳ್ತಂಗಡಿ: ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಶುಕ್ರವಾರ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿಯೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ. ಕಡಿರುದ್ಯಾವರದ ಅಂತರ ಲೋಕಯ್ಯ ಗೌಡ (65) ಎಂಬುವರಿಗೆ ದಿಡುಪೆ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿಯಾಗಿದ್ದು, ಅವರಿಗೆ ಪತ್ನಿ, ಪುತ್ರಿ, ಪುತ್ರ ಇದ್ದಾರೆ. ಘಟನೆ ಬಗ್ಗೆ ಬೈಕ್ ಸವಾರ ಚರಣ್ ರಾಜ್ ವಿರುದ್ಧ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಡುಪಿ: ಪ್ರಫುಲ್ಲ ಅನಂತ ಭಟ್ ನಿಧನ

ಉಡುಪಿ: ಉಡುಪಿಯ ಐತಾಳ್ ರಸ್ತೆ ನಿವಾಸಿ ಪ್ರಫುಲ್ಲ ಅನಂತ ಭಟ್ (90) ಅವರು ಅಲ್ಪ ಕಾಲದ ಅಸೌಖ್ಯದಿಂದ ಫೆಬ್ರವರಿ 7ರಂದು ಶುಕ್ರವಾರ ದೈವಾಧೀನರಾಗಿರುತ್ತಾರೆ. ಉಡುಪಿ ಅನಂತೇಶ್ವರ ದೇವಸ್ಥಾನದ ಅರ್ಚಕರ ಹಿರಿಯ ಅಕ್ಕ ಆದ ಇವರು ಮಗ, ಮಗಳು, ಮತ್ತು ಅಪಾರ ಬಂಧುಗಳನ್ನು ಅಗಲಿರುತ್ತಾರೆ.
ಕಿನ್ನಿಗೋಳಿ: ಟೆಂಪೋ ರಿಕ್ಷಾ- ಸ್ಕೂಟರ್ ನಡುವೆ ಅಪಘಾತ; ಸ್ಕೂಟರ್ ಸವಾರೆ ಮೃತ್ಯು.

ಮಂಗಳೂರು: ಕಿನ್ನಿಗೋಳಿಯಲ್ಲಿ ಟೆಂಪೋ ರಿಕ್ಷಾ- ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರೆ ಮಮತಾ ಬಂಗೇರ (42) ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಕಿಲ್ಪಾಡಿ ಗ್ರಾಮ ಪಂಚಾಯತ್ ಬಳಿಯ ಕೆ.ಎಸ್. ರಾವ್ ನಗರ ತಿರುವಿನ ರಸ್ತೆಯಲ್ಲಿ ಗುರುವಾರ ಟೆಂಪೋ ರಿಕ್ಷಾವೊಂದು ಹಿಂಬದಿಯಿಂದ ಬಂದು ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಇವರು ಮುಂಬಯಿಯಲ್ಲಿ ವಾಸವಿದ್ದು, ಕಳೆದ ಕೆಲವು ಸಮಯಗಳಿಂದ ಶಿಮಂತೂರು ಬಳಿ ನೂತನವಾಗಿ ಮನೆ ನಿರ್ಮಿಸಿಕೊಂಡು […]
ಸ್ವ-ಉದ್ಯೋಗಕ್ಕೆ ಮಹಿಳೆ ಒಲವು ತೋರಿದರೆ ಅದೇ ಗೆಲುವು: ಉಡುಪಿಯಲ್ಲಿ ಪವರ್ ಪರ್ಬದಲ್ಲಿ ಅಂಡಾರು ದೇವಿಪ್ರಸಾದ್ ಶೆಟ್ಟಿ

ಉಡುಪಿ: ಮಹಿಳೆಯರ ವಿದ್ಯಾಭ್ಯಾಸಕ್ಕೆ ತಕ್ಕಂತಹ ಪ್ರತಿಫಲ ಜಿಲ್ಲೆಯಲ್ಲಿ ಸಿಗುವಂತಾಗಬೇಕು. ಸ್ವ ಉದ್ಯೋಗದ ಬಗ್ಗೆ ಮಹಿಳೆಯರು ಹೆಚ್ಚಿನ ಒಲವು ತೋರಿಸಿ ಮಾದರಿಯಾಗಬೇಕು. ಇದರಿಂದ ಯಶಸ್ಸು ಕಂಡುಕೊಳ್ಳಲು ಸಾಧ್ಯವಿದೆ ಎಂದು ಎಫ್ಕೆಸಿಸಿಐ ನಿರ್ದೇಶಕ ಅಂಡಾರು ದೇವಿ ಪ್ರಸಾದ್ ಶೆಟ್ಟಿ ಹೇಳಿದರು. ಮಹಿಳಾ ಉದ್ಯಮಿಗಳ ಪವರ್ ಸಂಸ್ಥೆ (ಫ್ಲ್ಯಾಟ್ಫಾರಂ ಆಫ್ ವುಮನ್ ಎಂಟರ್ಪ್ರೆನ್ಯೂರ್) ಆಶ್ರಯದಲ್ಲಿ ಮಿಷನ್ ಕಂಪೌಂಡ್ ಬಳಿಯ ಕ್ರಿಶ್ಚಿಯನ್ ಹೈಸ್ಕೂಲ್, ಮೈದಾನದಲ್ಲಿ ನಡೆಯುತ್ತಿರುವ ‘ಪವರ್’ ಪರ್ಬ-2025’ರಲ್ಲಿ ಶನಿವಾರ ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಹಿಳಾ ಉದ್ದಿಮೆದಾರರನ್ನು ಪವರ್ […]