ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ

ಉಡುಪಿ: ಕಳೆದ ಐದು ವರ್ಷಗಳಲ್ಲಿ ಭಾರತಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸಿರುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಪದಕ ಪಡೆದ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಪಿ.ಯು.ಸಿ ಯಿಂದ ಸ್ನಾತಕೋತ್ತರ ಪದವಿ (ವೃತ್ತಿಪರ ಕೋರ್ಸ್ ಗಳನ್ನೊಳಗೊಂಡಂತೆ) ವ್ಯಾಸಂಗ ಮಾಡುತ್ತಿರುವ ಕೇಂದ್ರ, ರಾಜ್ಯ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ-ಕಾಲೇಜುಗಳ […]
ಕಾರ್ಕಳ: ಯುವತಿಯ ಅಪಹರಣ, ಅತ್ಯಾಚಾರ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಉಡುಪಿ: ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೆ ಅರುಣ್ ತಿಳಿಸಿದ್ದಾರೆ. ಪ್ರಕರಣದ ಆರೋಪಿಗಳಾದ ಅಲ್ತಾಫ್ ಹಾಗೂ ಸುಧೀರ ಎಂಬಾತನನ್ನು ಬಂಧಿಸಲಾಗಿದ್ದು ಇವರು ಕೃತ್ಯಕ್ಕೆ ಬಳಸಿದ ಎರಡು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಸಂತ್ರಸ್ತೆ ಮತ್ತು ಆರೋಪಿ ಅಲ್ತಾಫ್ ಮೂರು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದ ಮೂಲಕ ಪರಸ್ಪರ ಪರಿಚಯವಾಗಿದ್ದು […]
ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟನೆ

ಉಡುಪಿ: ಕರ್ನಾಟಕ ರಾಜ್ಯ ಗ್ರಾಮೀಣಜೀವನೋಪಾಯ ಅಭಿಯಾನ- ಸಂಜೀವಿನಿ, ಜಿಲ್ಲಾ ಪಂಚಾಯತ್ ಉಡುಪಿ,ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ ಇವರ ಆಶಯದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯ ಮಾಸೋತ್ಸವ ಪ್ರಯುಕ್ತ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಗೀತಾಮಂದಿರದಲ್ಲಿಚಾಲನೆ ಹಾಗೂ ರಾಜಾಂಗಣದಲ್ಲಿ ಇದರ ಉದ್ಘಾಟನೆಯನ್ನು ಪರಮಪೂಜ್ಯ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ ಪುತ್ತಿಗೆ ಕಿರಿಯ ಶ್ರೀಪಾದರಾದ ಶ್ರೀ ಶ್ರೀಸುಶ್ರೀಂದ್ರ ತೀರ್ಥ ಶ್ರೀಪಾದರು ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಶಾಸಕಶ್ರೀ […]
ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನಮಿಯ್ಯಾರಿ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜಿನಲ್ಲಿ ಖಾಲಿ ಇರುವ ರಸಾಯನ ಶಾಸ್ತ್ರ ಅತಿಥಿ ಉಪನ್ಯಾಸಕರ ಹುದ್ದೆಯ ನೇಮಕಾತಿಗಾಗಿ ಎಂ.ಎಸ್ಸಿ(ಕೆಮಿಸ್ಟ್ರಿ) ಬಿ.ಎಡ್ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಮೊರಾರ್ಜಿ ದೇಸಾಯಿ ಪದವಿಪೂರ್ವ ವಸತಿ ವಿಜ್ಞಾನ ಕಾಲೇಜು ಮಿಯ್ಯಾರು, ಕಾರ್ಕಳ, ಮೊ.ನಂ:9480652056 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದವರ್ಗಗಳ ಕಲ್ಯಾಣ […]
ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಬಾವಿ ಪರೀಕ್ಷೆ :ನಿಷೇಧಾಜ್ಞೆ ಜಾರಿ

ಉಡುಪಿ: ಕರ್ನಾಟಕ ಲೋಕ ಸೇವಾ ಆಯೋಗದವತಿಯಿಂದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ”ಎ” ಮತ್ತು ”ಬಿ” ವೃಂದದ ಹುದ್ದೆಗಳ ಪೂರ್ವಬಾವಿ ಪರೀಕ್ಷೆಗಳು ಆಗಸ್ಟ್ 27 ರಂದು ಉಡುಪಿಯ ಸರ್ವಿಸ್ ಬಸ್ ಸ್ಟ್ಯಾಂಡ್ ಹತ್ತಿರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಅಜ್ಜರಕಾಡುವಿನ ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯಅವ್ಯವಹಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿಪಡಿಸಿದ ಪರೀಕ್ಷಾ […]