ಕಾರ್ಕಳ: ನಿಟ್ಟೆ ಗ್ರಾಮದ ಬೊರ್ಗಲ್ ಗುಡ್ಡೆ ನಿವಾಸಿ ನಾಪತ್ತೆ

ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಬೊರ್ಗಲ್ ಗುಡ್ಡೆ ನಿವಾಸಿ ಶ್ಯಾಮ ಕೋಟ್ಯಾನ್ (65) ಸೆ.13ರಿಂದ ಕಾಣೆಯಾಗಿದ್ದಾರೆ. ಈ ವ್ಯಕ್ತಿ ಎಲ್ಲಿಯಾದರೂ ಕಂಡಲ್ಲಿ ಮೊಬೈಲ್ ನಂಬರ್ 97682 19432 ಅಥವಾ ಕಾರ್ಕಳ ಗ್ರಾಮಾಂತರ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಸರಕಾರದ ಸವಲತ್ತುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

ಕಟಪಾಡಿ: ಜಿಲ್ಲಾ ಅಲ್ಪಸಂಖ್ಯಾತ ಮೋರ್ಚ ಉಡುಪಿ ಜಿಲ್ಲೆ ಹಾಗೂ ಕಾಪು ಮಂಡಲದ ಅಲ್ಪಸಂಖ್ಯಾತ ಮೋರ್ಚ ಸಹಯೋಗದಲ್ಲಿ ಕಟಪಾಡಿ ಮಹಿಳಾಮಂಡಲ ಕಟ್ಟಡದಲ್ಲಿ ಅಲ್ಪಸಂಖ್ಯಾತರಿಗೆ ಸರಕಾರಿ ಸವಲತ್ತುಗಳ ಬಗ್ಗೆ ಮಾಹಿತಿ ಶಿಬಿರ ನಡೆಯಿತು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಹಾಗೂ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚ ಅಧ್ಯಕ್ಷರಾದ ದಾವುದ್ ಅಬುಬಕ್ಕರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ದಾವುದ್ ಅಬೂಬಕ್ಕರ್, ಬಿಜೆಪಿ ಯಾವತ್ತಿಗೂ ಅಲ್ಪಸಂಖ್ಯಾತರ ವಿರೋಧಿಯಲ್ಲ. ಇದಕ್ಕೆ ವೇದಿಕೆಯಲ್ಲಿರುವ ನಾವೆಲ್ಲರೂ ಉದಾಹರಣೆಯಾಗಿದ್ದು, ಅತ್ಯಂತ ಗೌರವಯುತವಾಗಿ ಪಕ್ಷ ನಮ್ಮನ್ನು ನಡೆಸಿಕೊಂಡು ಮಹತ್ತರ ಜವಾಬ್ದಾರಿ […]

ಕಾರ್ಕಳ: ಸೆ.19ರಂದು ಬೃಹತ್ ರಕ್ತದಾನ ಶಿಬಿರ

ಕಾರ್ಕಳ: ಸೆ.19ರಂದು ಬೃಹತ್ ರಕ್ತದಾನ ಶಿಬಿರ ಕಾರ್ಕಳ: ಬಿಜೆಪಿ ಯುವ ಮೋರ್ಚ ಕಾರ್ಕಳ ವತಿಯಿಂದ ಇದೇ ಬರುವ ಸೆಪ್ಟೆಂಬರ್ 19ರ ಭಾನುವಾರದಂದು ಇರುವತ್ತೂರಿನ ಗರಡಿಯ ಬಳಿ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸೆಪ್ಟೆಂಬರ್ 17ರಿಂದ ಅಕ್ಟೋಬರ್ ಏಳರವರೆಗೆ ಇಡೀ ದೇಶಾದ್ಯಂತ ಸೇವೆ ಮತ್ತು ಸಮರ್ಪಣೆ ಅಭಿಯಾನದ ಅಂಗವಾಗಿ ವಿವಿಧ ಕಾರ್ಯಕ್ರಮಗಳ ಅಂಗವಾಗಿ ಈಶ್ವರ ನಡೆಯಲಿದೆಯೆಂದು ಯುವಮೋರ್ಚಾ ಕಾರ್ಕಳ ಮಂಡಲ ಅಧ್ಯಕ್ಷ ಮುಟ್ಲುಪಾಡಿ ಸುಹಾಸ್ ಶೆಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿಗಳಾದ […]

ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್?: ತಗ್ಗಲಿದೆಯೇ ತೈಲ ಬೆಲೆ?

ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ತಗ್ಗಿಸಬೇಕು ಎಂದಾದರೆ ಇವುಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದು ಸೂಕ್ತ ಎಂಬ ಅಭಿಪ್ರಾಯ ದೇಶಾದ್ಯಂತ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಇತರ ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ತರುವ ಬಗ್ಗೆ ಜಿಎಸ್‌ಟಿ ಮಂಡಳಿಯು ಶುಕ್ರವಾರದ ಸಭೆಯಲ್ಲಿ ಪರಿಶೀಲನೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಪೆಟ್ರೋಲ್, ಡಿಸೇಲ್ ಜಿಎಸ್ ಟಿ ವ್ಯಾಪ್ತಿಗೆ ಬಂದರೆ ಆರ್ಥಿಕ ತಜ್ಞರ ಪ್ರಕಾರ ಪೆಟ್ರೋಲ್‌ ದರ 75 ರೂ.ಗಳಿಗೆ ಇಳಿಕೆಯಾಗಲಿದೆ […]

ಮಂಗಳೂರು: ನಿಫಾ ಶಂಕೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯ ವರದಿ ನೆಗೆಟಿವ್

ಮಂಗಳೂರು: ನಿಫಾ ಸೋಂಕಿನ ಶಂಕೆಯಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಗೋವಾದಿಂದ ಬಂದಿದ್ದ ವ್ಯಕ್ತಿಯ ಪರೀಕ್ಷಾ ವರದಿ‌ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದ್ದಾರೆ. ಇವರು ಗೋವಾದಲ್ಲಿ ಆರ್​ಟಿ-ಪಿಸಿಆರ್​ ಕಿಟ್ ತಯಾರಿಸುವ ಪ್ರಯೋಗಾಲಯದಲ್ಲಿ ಮೈಕ್ರೊ ಬಯಾಲಜಿಸ್ಟ್​ ಆಗಿ ಕೆಲಸ ಮಾಡುತ್ತಿದ್ದರು. ಇವರಿಗೆ ಜ್ವರ ಕಾಣಿಕೊಂಡಿತ್ತು. ಜ್ವರದ ಲಕ್ಷಣಗಳನ್ನು ಆಧರಿಸಿ, ನಿಫಾ ಎಂದು ಶಂಕಿಸಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಗಂಟಲು ದ್ರವ, ರಕ್ತ ಮತ್ತು ಮೂತ್ರ ಮಾದರಿಯನ್ನು ಸಂಗ್ರಹಿಸಿ, ಪುಣೆಯ ಪ್ರಯೋಗಾಲಯಕ್ಕೆ ತಪಾಸಣೆಗಾಗಿ […]