ಎನ್ ಸಿಬಿಯಿಂದ ಕಾರ್ಯಾಚರಣೆ: ಮಣಿಪಾಲದಲ್ಲಿ ಡ್ರಗ್ ವ್ಯವಹಾರಕ್ಕಾಗಿ ಕಾಲ್ ಸೆಂಟರ್ ನಡೆಸುತ್ತಿದ್ದ ವ್ಯಕ್ತಿಯ ಬಂಧನ

ಉಡುಪಿ: ಮಾದಕ ವಸ್ತು ನಿಯಂತ್ರಣ ಸಂಸ್ಥೆ (ಎನ್ಸಿಬಿ) ‘ಆಪರೇಷನ್ ಮೆಡ್ ಮ್ಯಾಕ್ಸ್’ ಹೆಸರಿನಲ್ಲಿ ಈಚೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಡ್ರಗ್ಸ್ ವ್ಯವಹಾರಕ್ಕಾಗಿ ಮಣಿಪಾಲದಲ್ಲಿ ಕಾಲ್ ಸೆಂಟರ್ ನಡೆಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.ಮಣಿಪಾಲದ ಹಯಗ್ರೀವ ನಗರದಲ್ಲಿ ಕಾಲ್ಸೆಂಟರ್ ನಡೆಸುತ್ತಿದ್ದ ಸುರೇಶ್ ಕುಮಾರ್ ಬಂಧಿತ ಆರೋಪಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ‘ಈ ಕಾಲ್ ಸೆಂಟರ್ನಲ್ಲಿ ಹತ್ತು ಮಂದಿ ಕೆಲಸ ಮಾಡುತ್ತಿದ್ದು, ಅವರಿಗೆ ಈ ವ್ಯವಹಾರದ ಬಗ್ಗೆ ಮಾಹಿತಿ ಇರಲಿಲ್ಲ. ಇದು ದೆಹಲಿ ಕೇಂದ್ರಿತ ಡ್ರಗ್ಸ್ ಜಾಲವಾಗಿದ್ದು, ಇದರ ಗ್ರಾಹಕರು ವಿದೇಶಿಯರಾಗಿದ್ದರು. ಉಡುಪಿ […]
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಘಾನಾದ ‘ಅತ್ಯುನ್ನತ ನಾಗರಿಕ ಪ್ರಶಸ್ತಿ’

ಅಕ್ರಾ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಘಾನಾದ ‘ಅತ್ಯುನ್ನತ ನಾಗರಿಕ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ. ಐದು ದೇಶಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಮೊದಲಿಗೆ ಘಾನಾಕ್ಕೆ ಬಂದಿಳಿದರು. ಘಾನಾ ಅಧ್ಯಕ್ಷ ಜಾನ್ ಡ್ರಾಮಾನಿ ಅವರೇ ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಬರಮಾಡಿಕೊಂಡು, ಸ್ವಾಗತಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಘಾನಾದ ‘ಅತ್ಯುನ್ನತ ನಾಗರಿಕ ಪ್ರಶಸ್ತಿ’ ನೀಡಿ ಗೌರವಿಸಲಾಗಿದ್ದು, ‘ವಿಶಿಷ್ಟ ರಾಜನೀತಿ ಹಾಗೂ ಜಾಗತಿಕ ಪ್ರಭಾವಿ ನಾಯಕತ್ವ’ವನ್ನು ಗುರುತಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ‘ದಿ ಆಫೀಸರ್ […]
ಉಡುಪಿ: ಸೌಹಾರ್ದತೆಗೆ ಧಕ್ಕೆ ತರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ; ರಮೇಶ್ ಕಾಂಚನ್ ಆಗ್ರಹ

ಉಡುಪಿ: ಬ್ರಹ್ಮಾವರದ ಕುಂಜಾಲಿನಲ್ಲಿ ಗೋ ಹತ್ಯೆ ಮಾಡಿ ಅದರ ರುಂಡ ಮತ್ತು ಕಾಲುಗಳನ್ನು ರಸ್ತೆಗೆ ಎಸೆದ ಕೃತ್ಯದ ಹಿಂದೆ ಜಿಹಾದಿ ವ್ಯಕ್ತಿಗಳ ಕೈವಾಡ ಇದೆ ಎಂದು ಹೇಳಿರುವ ವಿಶ್ವ ಹಿಂದೂ ಪರಿಷದ್ ನಾಯಕ ಶರಣ್ ಪಂಪ್ ವೆಲ್ ಅವರನ್ನು ಕೂಡಲೇ ಬಂಧಿಸಿ ಅವರ ಹೇಳಿಕೆ ಕುರಿತು ಇರುವ ಮಾಹಿತಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪಡೆಯಬೇಕು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ. ಶರಣ್ ಪಂಪ್ ವೆಲ್ ಅವರು ಈಗಾಗಲೇ ತಮ್ಮ ಕೋಮು ಪ್ರಚೋದನಾತ್ಮಕ […]
ಮೂಡುಬಿದಿರೆ: ವಿದ್ಯಾರ್ಥಿಗಳು ಸಾಂಪ್ರದಾಯಿಕ ವೃತ್ತಿ ಮಾರ್ಗಗಳನ್ನು ಮೀರಿ ಲಾಜಿಸ್ಟಿಕ್ಸ್ ನಂತಹ ಉದಯೋನ್ಮುಖ ವಲಯಗಳನ್ನು ಅನ್ವೇಷಿಸಿ: ಕಾರ್ತಿಕ್ ಶೆಟ್ಟಿ

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ (ಸ್ವಾಯತ್ತ) ನಿರ್ವಹಣಾಶಾಸ್ತ್ರ ವಿಭಾಗದ ಆಶ್ರಯದಲ್ಲಿ ಬುಧವಾರ ವಿದ್ಯಾಗಿರಿ ಆವರಣದಲ್ಲಿ ‘ಸ್ಪೆಕ್ಟಾಕಲ್’ ವೇದಿಕೆಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರಿನ ಗಣೇಶ್ ಶಿಪ್ಪಿಂಗ್ ಏಜೆನ್ಸಿಯ ಸಿಇಒ ಕಾರ್ತಿಕ್ ಶೆಟ್ಟಿ, “ಲಾಜಿಸ್ಟಿಕ್ಸ್ ಮತ್ತು ಶಿಪ್ಪಿಂಗ್ ವಲಯವು ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಆಕರವಾಗಿ ಕರ್ಯನಿರ್ವಹಿಸುತ್ತಿದ್ದು, ಆದರೆ ಈ ಕ್ಷೇತದಲ್ಲಿರುವ ಅವಕಾಶಗಳನ್ನು ಅನ್ವೇಷಿಸಲು ನಾವು ಸೋತಿದ್ದೇವೆ ಎಂದರು. ನವಮಂಗಳೂರು ಬಂದರಿನ ಜೆಎಸ್ಡಬ್ಲ್ಯೂ ಕಂಟೇನರ್ ಟರ್ಮಿನಲ್ನೊಂದಿಗೆ ಅವರ ಅನುಭವವನ್ನು ಹಂಚಿಕೊ೦ಡ ಅವರು “ಸ್ಥಳೀಯ ಕೌಶಲ್ಯವಂತ ಪ್ರತಿಭೆಗಳ […]
ಉಡುಪಿ ಸಿವಿಲ್ ಇಂಜಿನಿಯರ್ ಅಸೋಸಿಯೇಷನ್ ವತಿಯಿಂದ ಸುರೇಶ್ ನಾಯ್ಕ್ ಅವರಿಗೆ ಗೌರವ ಅಭಿನಂದನೆ

ಉಡುಪಿ: ಉಡುಪಿ ಸಿವಿಲ್ ಇಂಜಿನಿಯರ್ ಅಸೋಸಿಯೇಷನ್ (ರಿ.) ಕಿದಿಯೂರು ಹೋಟೆಲಿನ ಅನಂತಶಯನ ಸಭಾಂಗಣದಲ್ಲಿ ಶನಿವಾರ ಎಂಜಿನಿಯರ್ ಮೀಟ್ ಜರಗಿತು. ವೇದಿಕೆಯಲ್ಲಿ ಅತಿಥಿಗಳಾಗಿ ಸಿಂಟ ಆಸ್ಟ್ರೀಸ್ (SIMTA-ASTRIX) UPVC ವಿಂಡೋಸ್ ಕಂಪನಿಯ ರೀಜನಲ್ ಮ್ಯಾನೇಜರ್ ಮೋಹನ್, ಉಡುಪಿ ಅಲ್ಯೂಮಿನಿಯಂ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಸುರೇಶ್ ನಾಯ್ಕ್, ಸಿಂಟ ಆಸ್ಟ್ರೀಸ್ (SIMTA-ASTRIX) UPVC ವಿಂಡೋಸ್ ಕಂಪನಿಯ ಪ್ರಾಜೆಕ್ಟ್ ಹೆಡ್ ಸುನಿಲ್ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥರಿದ್ದರು. ಸಿಂಟ ಆಸ್ಟ್ರೀಸ್ (SIMTA-ASTRIX) UPVC ವಿಂಡೋಸ್, ಡೋರ್ಸ್ ಸಿಸ್ಟಮ್ಸ್ ಬಗ್ಗೆ ಆಧುನಿಕ ತಂತ್ರಜ್ಞಾನ […]