ವಿದ್ಯುತ್ ಬಿಲ್ ನಲ್ಲಿ ಅಕ್ರಮ: ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿದ ಸಚಿವ ಸುನಿಲ್ ಕುಮಾರ್

ಬೆಂಗಳೂರು: ನಕಲಿ ವಿದ್ಯುತ್ ಬಿಲ್ ಸೃಷ್ಟಿಸಿ ಬೆಸ್ಕಾಂಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟುಮಾಡಿದ ಆರೋಪದಡಿ ಮೂವರು ಸಿಬ್ಬಂದಿಯನ್ನು ಇಂಧನ ಸಚಿವ ಸುನಿಲ್ ಕುಮಾರ್ ಅವರು ಅಮಾನತುಗೊಳಿಸಿದ್ದಾರೆ. ಅಮಾನತುಗೊಂಡ ಸಿಬ್ಬಂದಿಯನ್ನು ಮುಳಬಾಗಿಲು ಉಪವಿಭಾಗದ ಕಿರಿಯ ಸಹಾಯಕ ಮೆಹಬೂಬ್ ಪಾಷ, ಕಿರಿಯ ಸಹಾಯಕಿ ಗಾಯತ್ರಮ್ಮ ಹಾಗೂ ಕಿರಿಯ ಸಹಾಯಕಿ ಸುಜಾತಮ್ಮ ಎಂದು ಗುರುತಿಸಲಾಗಿದೆ. ಇವರು ಗ್ರಾಹಕರಿಗೆ ವಿದ್ಯುತ್ ಬಿಲ್ ವಿತರಿಸುವ ವೇಳೆಯಲ್ಲಿ ಕೆಲವು ಬಿಲ್ ಗಳನ್ನು ಮಾರ್ಪಾಟುಗೊಳಿಸಿ, ಅದರ ಮೊತ್ತವನ್ನು ಕಡಿಮೆಗೊಳಿಸುತ್ತಿದ್ದರು. ಆ ಮೂಲಕ ಬೆಸ್ಕಾಂಗೆ ಬರಬೇಕಿದ್ದ ಆದಾಯದಲ್ಲಿ ನಷ್ಟ […]

ಬಿಜೆಪಿ ಉಡುಪಿ ಜಿಲ್ಲಾ ಎಸ್‌ಟಿ ಮೋರ್ಚಾ: ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕರಾಗಿ ಗಂಗಾಧರ ಈದು ನೇಮಕ

ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಎಸ್‌ಟಿ ಮೋರ್ಚಾದ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕರನ್ನಾಗಿ ಗಂಗಾಧರ ಗೌಡ ಈದು ಅವರನ್ನು ನೇಮಕ ಮಾಡಲಾಗಿದೆ. ಉಡುಪಿ‌ ಜಿಲ್ಲಾ ಎಸ್‌ಟಿ ಮೋರ್ಚಾದ ಅಧ್ಯಕ್ಷ ನಿತ್ಯಾನಂದ ನಾಯ್ಕ್ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.

ಬೂತ್ ಸಶಕ್ತೀಕರಣದ ಮೂಲಕ ವಿಸ್ತಾರವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಿ: ಸಚಿವ ವಿ. ಸುನೀಲ್ ಕುಮಾರ್

ಉಡುಪಿ: ಮುಂಬರಲಿರುವ ಜಿ.ಪಂ., ತಾ.ಪಂ. ಚುನಾವಣೆಗಳ ಜೊತೆಗೆ ಪಕ್ಷ ಸಂಘಟನೆಯನ್ನು ಕಣ್ಣ ಮುಂದೆ ಇಟ್ಟುಕೊಂಡು ಜಿಲ್ಲೆಯಾದ್ಯಂತ ಬೂತ್ ಸಶಕ್ತೀಕರಣದ ಮೂಲಕ ಹೊಸ ಆಲೋಚನೆಗಳೊಂದಿಗೆ ವಿಸ್ತಾರವಾಗಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ ಎಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಕರೆ ನೀಡಿದರು. ಅವರು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಮಾಸಿಕ ಸಭೆಯಲ್ಲಿ ಪಾಲ್ಗೊಂಡು ಪಕ್ಷದ ಪದಾಧಿಕಾರಿಗಳನ್ನುದ್ದೇಶಿಸಿ […]

ರಾಷ್ಟ್ರೀಯ ಚಾಂಪಿಯನ್‌ಶಿಪ್ ಪ್ರಶಸ್ತಿ ಗೆದ್ದ ಉಡುಪಿ ಬೂಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ತಂಡ

ಉಡುಪಿ: ಕರ್ನಾಟಕ ಸ್ಟೇಟ್ ಕರಾಟೆ ಅಸೋಸಿಯೇಶನ್, ಮೌಲೆ ಶೋಟೋಕಾನ್ ಕರಾಟೆ ದೊ ಅಸೋಸಿಯೇಶನ್ ಇಂಡಿಯಾ, ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಶನ್ ಇವರ ಜಂಟಿ ಆಶ್ರಯದಲ್ಲಿ ಶಿವಮೊಗ್ಗ ಸ್ಕೌಟ್ಸ್ ಭವನದಲ್ಲಿ ನಡೆದ ಮಲ್ನಾಡ್ ಓಪನ್ ನ್ಯಾಷನಲ್ ಲೆವೆಲ್ ಕರಾಟೆ ಚಾಂಪಿಯನ್ ಶಿಪ್ 2021 ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಅಧ್ಯಕ್ಷ ರೆಂಷಿ ವಾಮನ್‌ ಪಾಲನ್ ಇವರಿಂದ ತರಬೇತಿ ಪಡೆದ ಕರಾಟೆ ಪಟುಗಳಾದ ಅರ್ಮಾನ್ ಶೆಟ್ಟಿ, ಯಶ್ ಶೆಟ್ಟಿ, ಪವನ್ ಕುಮಾರ್, ಮೊಹಮ್ಮದ್ ರಾಹಿಲ್, […]

ಕಾಪು ಬಿಜೆಪಿ ಮಹಾಶಕ್ತಿಕೇಂದ್ರಗಳ ಪದಾಧಿಕಾರಿಗಳ ಸಭೆ

ಕಾಪು: ಕಾಪು ಬಿಜೆಪಿ ಕಚೇರಿಯಲ್ಲಿ ಮಹಾಶಕ್ತಿಕೇಂದ್ರ ಪದಾಧಿಕಾರಿಗಳ ಸಭೆ ನಡೆಯಿತು. ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಬಿಜೆಪಿ ಪಕ್ಷದಲ್ಲಿ ಇರುವಷ್ಟು ಸಂಘಟನಾತ್ಮಕ ವ್ಯವಸ್ಥೆ ಇತರ ಯಾವುದೇ ಪಕ್ಷದಲ್ಲಿ ಇಲ್ಲ. ಬೂತ್ ಮಟ್ಟದಿಂದ ಹಿಡಿದು ರಾಷ್ಟ್ರೀಯ ಮಟ್ಟದವರೆಗೆ ಅತ್ಯಂತ ಅಚ್ಚುಕಟ್ಟಾದ ವ್ಯವಸ್ಥೆ ಇದೆ. ಅದರಲ್ಲಿ ಮಹಾಶಕ್ತಿಕೇಂದ್ರದ ಜವಾಬ್ದಾರಿ ಅತ್ಯಂತ ಮಹತ್ತರವಾದುದು. ಮಹಾಶಕ್ತಿಕೇಂದ್ರಗಳು ಕ್ರಿಯಾತ್ಮಕವಾಗಿ ಕೆಲಸ ಮಾಡಿದರೆ ಸಂಘಟನೆ ಬಲಿಷ್ಠಗೊಳ್ಳುವುದು. ಪ್ರಾಮಾಣಿಕವಾಗಿ ಜವಾಬ್ದಾರಿಗೆ ನ್ಯಾಯ ಕೊಟ್ಟು ಪಕ್ಷ ಬೆಳೆಸೋಣ ಅದರೊಂದಿಗೆ ನಾವೂ ಬೆಳೆಯೋಣ ಎಂದರು. ಜಿಲ್ಲಾ […]