ಉಡುಪಿ: ಪೆರ್ಡೂರು ನಿವಾಸಿ ನಾಪತ್ತೆ

ಉಡುಪಿ: ಇಲ್ಲಿನ ಪಕ್ಕಾಲು ಪೆರ್ಡೂರು ಗ್ರಾಮದ ಜಯಲಕ್ಷ್ಮೀ ಮನೆ ನಿವಾಸಿ ನಾಗರಾಜ ಆಚಾರ್ಯ (30) ಎಂಬವರು ಆಗಸ್ಟ್ 11 ರಂದು ಬೆಳಿಗ್ಗೆ 8.30ಕ್ಕೆ ಮನೆಯಿಂದ ತೆರಳಿದವರು ಮತ್ತೆ ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿದ್ದಾರೆ. 5.6 ಅಡಿ ಎತ್ತರ, ಗೋದಿ ಮೈ ಬಣ್ಣ, ಸಾಧಾರಣ ಮೈ ಕಟ್ಟು ಹೊಂದಿರುವ ಇವರು, ಕನ್ನಡ, ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪೊಲೀಸ್ ಉಪನಿರೀಕ್ಷಕರು, ಹಿರಿಯಡ್ಕ ಪೊಲೀಸ್ ಠಾಣೆ ಇವರಿಗೆ ಮಾಹಿತಿ ನೀಡುವಂತೆ ಹಿರಿಯಡ್ಕ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು: 1,500 ಕೆ.ಜಿ.ಗೂ ಅಧಿಕ ಸ್ಫೋಟಕ ಸಾಮಗ್ರಿ ವಶ; ಓರ್ವನ ಬಂಧನ

ಮಂಗಳೂರು: ನಗರದ ಬಂದರ್ ನ ಗಾಂಧಿ ಸನ್ಸ್ ಕಟ್ಟಡದ ಕೊಠಡಿಯೊಂದರಲ್ಲಿ ಅಕ್ರಮವಾಗಿ 1,500 ಕೆ.ಜಿ.ಗೂ ಅಧಿಕ ಅಪಾಯಕಾರಿ ಸ್ಫೋಟಕ ಸಾಮಗ್ರಿಗಳನ್ನು ದಾಸ್ತಾನು ಇಟ್ಟಿದ್ದ ಘಟನೆ ಇಂದು ಬೆಳಕಿಗೆ ಬಂದಿದೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಟ್ವಾಳ ತಾಲ್ಲೂಕು ಮುಡಿಪು ಕೈರಂಗಳ ನಿವಾಸಿ ಆನಂದ ಗಟ್ಟಿ (50) ಬಂಧಿತ ಆರೋಪಿ. ಆರೋಪಿಯಿಂದ 400 ಕೆ.ಜಿ. ಸಲ್ಫರ್ ಪೌಡರ್, 350 ಕೆ.ಜಿ. ಪೊಟ್ಯಾಷಿಯಂ ನೈಟ್ರೇಟ್, 50 ಕೆ.ಜಿ. ಬೇರಿಯಂ ನೈಟ್ರೇಟ್, […]

ಕಾಪು: ತಾಯಿ ಮಗು ನಾಪತ್ತೆ

ಉಡುಪಿ: ಮೂಳೂರು ಗ್ರಾಮದ ಮಹಿಳೆ ಶಮೀನಾ (24) ಮತ್ತು ಆಕೆಯ ನಾಲ್ಕುವರೆ ವರ್ಷದ ಮೊಹಮ್ಮದ್ ಶಾನ್ (4.5) ಆಗಸ್ಟ್ 31ರಂದು ಗಂಡನ ಮನೆಗೆ ಹೋಗುವುದಾಗಿ ಹೇಳಿ ಹೋದವರು ನಾಪತ್ತೆಯಾಗಿದ್ದಾರೆ. ಶಮೀನಾ 5 ಅಡಿ ಎತ್ತರ, ಬಿಳಿ ಮೈ ಬಣ್ಣ, ದುಂಡು ಮುಖ, ಹಳದಿ ಹಾಗೂ ಬಿಳಿ ಬಣ್ಣದ ಚೂಡಿದಾರ ಮತ್ತು ಕಪ್ಪು ಬಣ್ಣದ ಬುರ್ಖಾ ಧರಿಸಿದ್ದು, ಕನ್ನಡ, ಹಿಂದಿ, ಇಂಗ್ಲೀಷ್ ಹಾಗೂ ಬ್ಯಾರಿ ಭಾಷೆ ಮಾತನಾಡುತ್ತಾರೆ. ಮೊಹಮ್ಮದ್ ಶಾನ್ ಗೋದಿ ಮೈಬಣ್ಣ, ದುಂಡು ಮುಖ, ಕಪ್ಪು ನೀಲಿ […]

ಉಡುಪಿ: ಆ. 19ಕ್ಕೆ ಜನಾಶೀರ್ವಾದ ಯಾತ್ರೆಯ ಸಮಾವೇಶ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಅಭಿನಂದನೆ; ಕುಯಿಲಾಡಿ

ಉಡುಪಿ: ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಶಯದಂತೆ ದೇಶಾದ್ಯಂತ ಕೇಂದ್ರ ಸಚಿವರ ನೇತೃತ್ವದಲ್ಲಿ ನೂತನ ಕೇಂದ್ರ ಸಚಿವರನ್ನು ಪರಿಚಯಿಸುವ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಪ್ರಚಲಿತಗೊಳಿಸುವ ನಿಟ್ಟಿನಲ್ಲಿ “ಜನಾಶೀರ್ವಾದ ಯಾತ್ರೆ”ಯು ಇಂದಿನಿಂದ ಆರಂಭಗೊಂಡಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಉಡುಪಿ ಜಿಲ್ಲಾ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕರ್ನಾಟಕ ರಾಜ್ಯದಾದ್ಯಂತ ನಾಲ್ಕು ಕೇಂದ್ರ ಸಚಿವರ ನೇತೃತ್ವದಲ್ಲಿ ನಡೆಯುತ್ತಿರುವ ಜನಾಶೀರ್ವಾದ ಯಾತ್ರೆಯು ಉಡುಪಿ ಜಿಲ್ಲೆಗೆ ನೂತನ […]

ಸಹಕಾರ ಭಾರತಿ ಕಾರ್ಯಕರ್ತರು ಪ್ರತಿ ಗ್ರಾಮಕ್ಕೂ ತಲುಪಬೇಕು: ಕಿಶೋರ್ ಕುಮಾರ್ ಕೊಡ್ಗಿ

ಉಡುಪಿ: ಸಹಕಾರ ಭಾರತಿ ಕಾರ್ಯಕರ್ತರು ಪ್ರತಿ ಗ್ರಾಮದಲ್ಲಿ ಸಹಕಾರ ವ್ಯವಸ್ಥೆ ಬಲಪಡಿಸಿ ಹೊಸ ಸಹಕಾರಿ ಆಯಾಮವನ್ನು ಸೃಷ್ಟಿಸಬೇಕು ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು. ಕಿನ್ನಿಮೂಲ್ಕಿಯ ಉಡುಪಿ ತಾಲೂಕು ಇಂಡಸ್ಟ್ರಿಯಲ್ ಕ್ರೆಡಿಟ್ ಕೋಪರೇಟಿವ್ ಸೊಸೈಟಿಯ ಸಭಾಭವನದಲ್ಲಿ ನಡೆದ ಸಹಕಾರ ಭಾರತಿ ಜಿಲ್ಲಾ ಅಭ್ಯಾಸ ವರ್ಗ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಹಕಾರ ಭಾರತಿ ಜಿಲ್ಲಾಧ್ಯಕ್ಷ ಬೋಳ ಸದಾಶಿವ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಹಕಾರ ಭಾರತೀಯ ಪರಿಚಯ ಪ್ರಥಮ ಅವಧಿಗೆ ಕುಂಬ್ಳೆಕರ್ ಮೋಹನ್ ಕುಮಾರ್, ಎರಡನೇ ಅವಧಿಗೆ […]