ಎಂ ಐ ಟಿ ಕುಂದಾಪುರದಲ್ಲಿ 17ನೇ ಗ್ರಾಜುಯೇಷನ್ ಡೇ

ಕುಂದಾಪುರ: ಎಂ ಐ ಟಿ ಕುಂದಾಪುರದಲ್ಲಿ ವ 17ನೇ ಬ್ಯಾಚ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇದೇ ಸೆಪ್ಟೆಂಬರ್ 9 ರಂದು ಪದವಿ ಪ್ರದಾನ ಸಮಾರಂಭವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಲಾಯಿತು. ಮಿರಾಪ್ರ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ನ ಹಾರ್ಡ್ವೇರ್ ಇಂಜಿನಿಯರಿಂಗ್ ಉಪಾಧ್ಯಕ್ಷರಾದ ಶ್ರೀ ವಿನೋದ್ ಜಾನ್ ಮುಖ್ಯ ಅತಿಥಿಯಾಗಿದ್ದರು. ಶ್ರೀ ವಿನೋದ್ ಜಾನ್ ಅವರು ತಮ್ಮ ಪದವಿ ಪ್ರಧಾನ ಭಾಷಣದಲ್ಲಿ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಗುರಿಗಳನ್ನು ಹೊಂದಲು ಸಲಹೆ ನೀಡಿದರು ಮತ್ತು ಪ್ರಾಮಾಣಿಕತೆ, ವಿನಮ್ರತೆ ಮತ್ತು ಕಠಿಣ ಪರಿಶ್ರಮವು […]
ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ: 70 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ‘ಉಚಿತ ಆರೋಗ್ಯ ವಿಮೆ’

ನವದೆಹಲಿ: 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರನ್ನು ಈಗ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಆರೋಗ್ಯ ವಿಮಾ ಯೋಜನೆಯಲ್ಲಿ ಸೇರಿಸಲಾಗುವುದು ಎಂದು ಕೇಂದ್ರ ಸರ್ಕಾರ ಬುಧವಾರ ಪ್ರಮುಖ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕ್ರಮವು ಆರು ಕೋಟಿ ಹಿರಿಯ ನಾಗರಿಕರನ್ನು ಹೊಂದಿರುವ ಸುಮಾರು 4.5 ಕೋಟಿ ಕುಟುಂಬಗಳಿಗೆ ಕುಟುಂಬ ಆಧಾರದ ಮೇಲೆ 5 ಲಕ್ಷ ರೂ.ಗಳ ಉಚಿತ ಆರೋಗ್ಯ ವಿಮಾ ರಕ್ಷಣೆಯೊಂದಿಗೆ ಪ್ರಯೋಜನವನ್ನು ನೀಡುವ ಗುರಿಯನ್ನು ಹೊಂದಿದೆ. 70 ವರ್ಷ […]
ಕಟಪಾಡಿಯ ತ್ರಿಶಾ ಸಂಸ್ಥೆಯಲ್ಲಿ ಶ್ರೀ ವಿದ್ಯಾ ವಿನಾಯಕ ಸಂಭ್ರಮೋತ್ಸವ

ಕಟಪಾಡಿ: ತ್ರಿಶಾ ಸಂಸ್ಥೆಯು ಕನ್ನಡ ಮಾಧ್ಯಮ ಶಾಲೆಗೆ ಪ್ರೊಜೆಕ್ಟರ್ ಮತ್ತು ಸ್ಕ್ರೀನ್ ಅನ್ನು ಕೊಡುಗೆಯಾಗಿ ನೀಡಲು ದೇಣಿಗೆ ಸಂಗ್ರಹಕ್ಕಾಗಿ ಶ್ರೀ ವಿದ್ಯಾ ವಿನಾಯಕನ ಮಹೋತ್ಸವವನ್ನು ಆರಂಭಿಸಿದ್ದು ಈ ಬಾರಿ 4ನೇ ವರ್ಷದ ಮಹೋತ್ಸವವನ್ನು ಅದ್ದೂರಿಯಿಂದ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಸಪ್ಟೆಂಬರ್ 7 ರಿಂದ ಸೆಪ್ಟೆಂಬರ್ 9 ವರೆಗೆ ಆಚರಿಸಲಾಯಿತು. ಸೆ. 7ರಂದು ಬೆಳಿಗ್ಗೆ ಗಣಪತಿ ಮೂರ್ತಿಯ ಪ್ರತಿಷ್ಠಾಪನೆಯೊಂದಿಗೆ ಗಣಹೋಮ, ಭಜನಾ ಕಾರ್ಯಕ್ರಮಗಳ ಮೂಲಕ ಆರಂಭಿಸಲಾಯಿತು. ಸೆ. 8 ರಂದು ಯುವ ವಾಗ್ಮಿ, ಲೇಖಕರಾದ ದೀಕ್ಷಿತ್ ನಾಯರ್ […]
ಮಣಿಪಾಲ: ಹಾಸ್ಟೆಲ್ಗೆ ನುಗ್ಗಿ ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿಯ ಬಂಧನ

ಉಡುಪಿ: ಅನಂತನಗರದ ಬಿಸಿಎಂ ಬಾಲಕಿಯರ ವಸತಿ ನಿಲಯಕ್ಕೆ ಅಕ್ರಮ ಪ್ರವೇಶಿಸಿ ಕಿಟಕಿ ಮೂಲಕ ಕೈ ಹಾಕಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸ್ಥಳೀಯ ನಿವಾಸಿ ನವೀನ್ ನಾಯ್ಕ್ (25) ಎಂದು ಗುರುತಿಸಲಾಗಿದೆ. ಈತ ಸೆ.1ರಂದು ನಸುಕಿನ ವೇಳೆ ವಸತಿ ನಿಲಯದ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಬಳಿಕ ಕಿಟಕಿ ಮೂಲಕ ಕೈ ಹಾಕಿ ವಿದ್ಯಾರ್ಥಿನಿಯೊಬ್ಬಳ ಕೈ ಎಳೆದು ಕಿರುಕುಳ ನೀಡಿ ಪರಾರಿಯಾಗಿದ್ದನು. ಈ ಬಗ್ಗೆ ವಸತಿ ನಿಲಯದ ವಾರ್ಡನ್ ನೀಡಿದ ದೂರಿನಂತೆ ಮಣಿಪಾಲ […]
ಉಡುಪಿ:ವಿಕಲಚೇತನರ ರಾಜ್ಯ ಪ್ರಶಸ್ತಿ : ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ “ವಿಶ್ವವಿಕಲಚೇತನರ ದಿನಾಚರಣೆ” ಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ, ಸರ್ಕಾರದ ವತಿಯಿಂದ ವಿಕಲಚೇತನರ ಕ್ಷೇತ್ರದಲ್ಲಿಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಿಕ್ಷಕರಿಗೂ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಉದ್ದೇಶಿಸಿದೆ. ರಾಜ್ಯ ಪ್ರಶಸ್ತಿಗಾಗಿ ವೈಯಕ್ತಿಕ ವಿಭಾಗ, ವಿಶೇಷ ಶಿಕ್ಷಕರ ವಿಭಾಗ ಮತ್ತು ಸಂಸ್ಥೆಗಳ ವಿಭಾಗದಲ್ಲಿ ನಿಗದಿತ ನಮೂನೆಯಲ್ಲಿ ಪ್ರಸ್ತಾವನೆಗಳನ್ನು ದ್ವಿಪ್ರತಿಗಳಲ್ಲಿ ಹಾರ್ಡ್ ಕಾಪಿ ಹಾಗೂ ಸಾಫ್ಟ್ ಕಾಪಿ (ಎಂ.ಎಸ್ […]