ಹಿರಿಯ ಸಾಹಿತಿ ಶಿಕ್ಷಕ ಕೀರ್ತಿಶೇಷ ಅಂಬಾತನಯ ಮುದ್ರಾಡಿ ಸ್ಮರಣಾರ್ಥ, ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ.

ಹೆಬ್ರಿ: ಯಾವುದೇ ಪ್ರಶಸ್ತಿಯ ಹಿಂದೆ ಹೋಗಬಾರದು. ನಮ್ಮಷ್ಟಕ್ಕೆ ನಾವೇ ಪ್ರಾಮಾಣಿಕವಾಗಿ ಉತ್ತಮ ಕೆಲಸಗಳನ್ನು ಮಾಡಿದಾಗ ಸಮಾಜ ನಮ್ಮನ್ನು ಗುರುತಿಸುತ್ತದೆ. ಈ ನಿಟ್ಟಿನಲ್ಲಿ ಹೆಬ್ರಿಯ ಪ್ರತಿಷ್ಠಿತ ಚಾಣಕ್ಯ ಸಂಸ್ಥೆ ತೆರೆಮರೆಯ ಸಾಧಕರನ್ನು ನಾಡಿಗೆ ಪರಿಚಯಿಸುವ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ. ಅಂಕ ಗಳಿಕೆಯ ತರಬೇತಿಯೊಂದೇ ಶಿಕ್ಷಣವಾಗದೆ ಬದುಕು ಶಿಕ್ಷಣ ನೀಡುವ ಮತ್ತು ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ ಬೆಳಕಿಗೆ ತರುವ ಪ್ರಯತ್ನವನ್ನು ಶಿಕ್ಷಣದ ಜೊತೆ ಮಾಡಿದಾಗ ನಮ್ಮ ಬದುಕು ಸುಂದರವಾಗುತ್ತದೆ ಎಂದು ಹೆಬ್ರಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ […]

ಉಡುಪಿ: ಪೊಲೀಸ್ ಇಲಾಖೆ ಕಾಂಗ್ರೆಸ್ಸಿನ ಕೈಗೊಂಬೆಯಾಗಿದೆ, ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಯಂತಾಗಿವೆ: ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ

ಉಡುಪಿ: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ನೀಡಿದ ಅನುಮತಿಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಿಂದ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ‘ಬಾಂಗ್ಲಾ ಮಾದರಿಯಲ್ಲಿ ರಾಜ್ಯಪಾಲರ ಕಛೇರಿಗೆ ನುಗ್ಗುತ್ತೇವೆ’ ಎಂಬ ಪ್ರಚೋದನಕಾರಿ, ದೇಶ ವಿರೋಧಿ ಹೇಳಿಕೆ ನೀಡಿದ್ದು, ಅವರ ವಿರುದ್ಧ ಹಲವಾರು ಪೊಲೀಸ್ ಠಾಣೆಗಳಲ್ಲಿ ಬಿಜೆಪಿ ಕಾರ್ಯಕರ್ತರು ದೂರು ಸಲ್ಲಿಸಿದ್ದರೂ ಪೊಲೀಸ್ ಇಲಾಖೆ ಐವನ್ ಡಿಸೋಜ ವಿರುದ್ಧ ಯಾವುದೇ ಪ್ರಕರಣವನ್ನು ದಾಖಲಿಸದೇ ಇರುವುದು ಓಲೈಕೆ ರಾಜಕಾರಣದ ಪರಮಾವಧಿಯಾಗಿದೆ. […]

ಗಮನ ಸೆಳೆದ ಮಕ್ಕಳು ತಯಾರಿಸಿದ ಗಣೇಶನ ಮೂರ್ತಿಯ ವಿಸರ್ಜನ ಮೆರವಣಿಗೆ

ಕರಾವಳಿ ಜಿಲ್ಲೆ ಉಡುಪಿಯಲ್ಲಿ ಈ ಬಾರಿ ಸಂಭ್ರಮದಿಂದ ಗಣೇಶ ಚತುರ್ಥಿಯನ್ನು ಆಚರಣೆ ಮಾಡಲಾಯಿತು. ನಗರ, ಗ್ರಾಮೀಣ ಭಾಗದಲ್ಲಿ ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಿ ಊರವರೆಲ್ಲ ಸಂಭ್ರಮದಿಂದ ಪಾಲ್ಗೊಂಡರು. ಇನ್ನು ಕೆಲವೊಂದು ಕಡೆಗಳಲ್ಲಿ ಅದ್ಧೂರಿ ಶೋಭಯಾತ್ರೆಯ ಮೂಲಕ ಗಣಪತಿ ಮೂರ್ತಿಯ ವಿಸರ್ಜನೆ ಮೆರವಣಿಗೆ ನಡೆಯಿತು. ಆದರೆ ಉಡುಪಿಯ ಪಟ್ಲದಲ್ಲಿ ಮಕ್ಕಳೇ ತಯಾರಿ ಮಾಡಿದ ಗಣೇಶನ ಮೂರ್ತಿಯ ವಿಸರ್ಜನ ಮೆರವಣಿಗೆ ಎಲ್ಲರ ಗಮನ ಸೆಳೆದಿದೆ. ಹೌದು, ಉಡುಪಿಯ ಪಟ್ಲದ ಗಣಪತಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ತಯಾರಿಸಿದ ಗಣಪತಿ ಮೂರ್ತಿಗಳ ವಿಸರ್ಜನೆ […]

ಶಿರ್ವ: ಮಾನಸ ಪುನರ್ವಸತಿ ವಿಶೇಷ ಶಾಲೆಗೆ ದಿನಸಿ ವಸ್ತುಗಳ ಹಸ್ತಾಂತರ

ಉಡುಪಿ: ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಎರಡನೇ ವರ್ಷಕ್ಕೆ ಪಾದಾರ್ಪಣೆಗೊಂಡ ಹಿನ್ನೆಲೆಯಲ್ಲಿ ಶಿರ್ವ ಪಾಂಬೂರಿನ ಮಾನಸ ವಿಶೇಷ ಮಕ್ಕಳ ಶಾಲೆಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಜೀವನ್ ಡಿಸೋಜರವರು ಮಾನಸ ಶಾಲೆಯ ಅಧ್ಯಕ್ಷರಿಗೆ ದಿನಸಿ ವಸ್ತುಗಳನ್ನು ಹಸ್ತಾಂತರಿಸಿ, ಇಂತಹ ಸಾಮಾಜಿಕ ಕಾರ್ಯಕ್ರಮ ಹಮ್ಮಿಕೊಳ್ಳಲು ಮೂಲ ಪ್ರೇರಣೆ ಮತ್ತು ಮುಖ್ಯ ಉದ್ದೇಶ ದಿ. ಫಾ. ವಲೇರಿಯನ್ ಮೆಂಡೋನ್ಸಾ. ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಸಮಾಜಮುಖಿ […]

ಕಟಪಾಡಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ; ಮನಸೂರೆಗೊಂಡ ಪುಟಾಣಿಗಳ ಹುಲಿವೇಷ ಕುಣಿತ

ಉಡುಪಿ: ವರ್ಷದಿಂದ ವರ್ಷಕ್ಕೆ ಉಡುಪಿ ಜಿಲ್ಲೆಯಲ್ಲಿ ಹುಲಿ ವೇಷಗಳ ಅಬ್ಬರ ಹೆಚ್ಚುತ್ತಿದೆ. ಅಷ್ಟಮಿಯ ನಂತರ ಇದೀಗ ಗಣೇಶ ಚತುರ್ಥಿಯ ಸಂದರ್ಭದಲ್ಲಿ ವಿಸರ್ಜನಾ ಮೆರವಣಿಗೆ ವೇಳೆ ಹುಲಿವೇಷಗಳ ಭರಾಟೆ ಜೋರಾಗಿದೆ. ಅದರಲ್ಲೂ ಮರಿ ಹುಲಿಗಳ ಕಾರುಬಾರು ಜಬರ್ದಸ್ತ್ ಆಗಿದೆ. ಹೌದು, ಕರಾವಳಿಯ ಜನರಿಗೆ ಹುಲಿವೇಷವೆಂದರೆ ಅದೇನೋ ಸೆಳೆತ. ಬಾಲ್ಯದಲ್ಲೇ ಹುಲಿ ವೇಷಗಳ ಬೆನ್ನು ಹತ್ತಿ ಹೋಗಿ ಕುಣಿಯುವ ಮಕ್ಕಳು ಇಲ್ಲಿ ಸಾಮಾನ್ಯವಾಗಿ ಕಾಣಸಿಗುತ್ತಾರೆ. ಇತ್ತೀಚಿನ ವರ್ಷಗಳಲ್ಲಿ ಪುಟಾಣಿ ಮಕ್ಕಳು ವೇಷ ಧರಿಸಿ ಕುಣಿಯುವ ಪರಿಪಾಠ ಹೆಚ್ಚುತ್ತಿದೆ. ಹಿರಿಯ ವೇಷಧಾರಿಗಳನ್ನು […]