ಲಂಡನ್ ನಲ್ಲಿ 10 ನಿಮಿಷದಲ್ಲಿ 1200 ರೂ ಗಳಿಸಿದ ಭಾರತದ ಯುವಕ: ವೈರಲ್ ವೀಡಿಯೋ ಇಲ್ಲಿದೆ

ಲಂಡನ್: ರಸ್ತೆಬದಿಯಲ್ಲಿ ಪ್ರವಾಸಿಗರ ಫೋಟೋಗಳನ್ನು ಕ್ಲಿಕ್ಕಿಸಿ ಮಾರಾಟ ಮಾಡುವ ಮೂಲಕ ಹಣ ಗಳಿಸಲು ಮಲಯಾಳಿ ಯುವಕನೊಬ್ಬ ನಡೆಸಿದ ವಿಶಿಷ್ಟ ಪ್ರಯತ್ನ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಷ್ಣು ವಿಜಯಾಧರನ್ ಎಂಬ ಯುವಕ ಸೆಂಟ್ರಲ್ ಲಂಡನ್‌ನಲ್ಲಿ ಪ್ರವಾಸಿಗರ ಹಾಗೂ ಸ್ಥಳೀಯರ ಫೋಟೋಗಳನ್ನು ತೆಗೆದು ಪ್ರತಿ ಫೋಟೋಗೆ 5 ಪೌಂಡ್ (ಸುಮಾರು ₹540) ದರ ನಿಗದಿಪಡಿಸಿ ಮಾರಾಟ ಮಾಡಲು ಮುಂದಾಗಿದ್ದರು. ಈ ಪ್ರಯೋಗದ ವಿಡಿಯೋವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಅಲ್ಪ ಸಮಯದಲ್ಲಿ ಎಷ್ಟು ಹಣ ಗಳಿಸಬಹುದು ಎಂಬ ಸವಾಲನ್ನೂ ಮುಂದಿಟ್ಟಿದ್ದರು. ಈ […]

ಏ.3: ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ.

ಉಡುಪಿ: ಏ.3ರಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಬೆಳಿಗ್ಗೆ ಗಂಟೆ 10ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ. ಮಾಜಿ ಕೇಂದ್ರ ಸಚಿವ, ಹಿಂದೂ ಫೈರ್ ಬ್ರಾoಡ್ ಬಸವನಗೌಡ ಪಾಟೀಲ್ ಯತ್ನಾಳ್ ರವರು ದಿಕ್ಸೂಚಿ ಭಾಷಣ ಮಾಡಲಿರುವರು. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. […]

ಆಚಾರ್ಯಾಸ್ ಏಸ್ : ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ

9-10 ನೇ ತರಗತಿ, ಪಿಯುಸಿ, ಸಿಇಟಿ, ಜೆಇಇ, ನೀಟ್, ಕಾಮರ್ಸ್ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ ಉತ್ಕೃಷ್ಟ ಗುಣಮಟ್ಟದ ತರಬೇತಿ ನೀಡುತ್ತಿರುವ ಉಡುಪಿಯ ಏಸ್ ವತಿಯಿಂದ ಮೇ ಮೊದಲ ವಾರದಿಂದ ಬ್ಯಾಂಕಿಂಗ್ ಪರೀಕ್ಷೆಗಳಿಗೆ ತರಬೇತಿ ಆಯೋಜಿಸಲಾಗಿದೆ. ಮೇ 6ನೇ ತಾರೀಖಿನಿಂದ ಪ್ರತೀ ಶನಿವಾರ ಅಪರಾಹ್ನ 4 ರಿಂದ 6 ರ ವರೆಗೆ ಮತ್ತು ಭಾನುವಾರದಂದು ಬೆಳಿಗ್ಗೆ 9 ರಿಂದ ಸಂಜೆ 4 ರ ವರೆಗೆ ತರಬೇತಿ ನೀಡಲಾಗುತ್ತದೆ. ಕಳೆದ 7 ವರ್ಷಗಳಿಂದ ಪರಿಣಾಮಕಾರಿ ತರಬೇತಿ ಮೂಲಕ ಸಾವಿರಕ್ಕೂ ಮಿಕ್ಕಿ […]