ದಕ್ಷಿಣ ಕನ್ನಡ ಜಿಲ್ಲಾ ಪದ್ಮಶಾಲಿ ಮಹಾಸಭಾದ ‘ಪದ್ಮಶಾಲಿ ಕ್ರೀಡೋತ್ಸವ’ ಉದ್ಘಾಟನೆ

ಉಡುಪಿ: ನಿಷ್ಠೆ ಪ್ರಾಮಾಣಿಕತೆ, ಬದ್ಧತೆ ಮತ್ತು ಅಪಾರ ಇಚ್ಚಾಶಕ್ತಿಗಳಿಂದ ಮಾತ್ರ ಸಮುದಾಯ ಸಂಘಟನೆಗಳು ಸಾಧ್ಯ ಹಾಗು ಕ್ರೀಡೆ ಸಾಂಸ್ಕ್ರತಿಕ ಚಟುವಟಿಕೆಗಳನ್ನು ನಿರಂತರವಾಗಿ ಆಯೋಜಿಸುವುದರಿಂದ ಸಾಮಾಜಿಕ ಸಂಬಂಧಗಳು ಬೆಳೆದು ಸಂಘಟನೆಗಳು ಸದ್ರಢವಾಗುತ್ತದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ್ ಹೆಗ್ಡೆಯವರು ಅಭಿಮತ ವ್ಯಕ್ತ ಪಡಿಸಿದರು. ಅವರು ಭಾನುವಾರ ಉಡುಪಿ ಅಜ್ಜರಕಾಡಿನ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪದ್ಮಶಾಲಿ ಮಹಾಸಭಾ ಮಂಗಳೂರು ಇದರ ಆಶ್ರಯದಲ್ಲಿ ಮತ್ತು ಪದ್ಮಶಾಲಿ ನೇಕಾರ ಪ್ರತಿಷ್ಠಾನ ಉಡುಪಿ ಇವರ […]
ಅಕ್ಕಸಾಲಿಗ ವೃತ್ತಿ ಮಾಡುತ್ತಿರುವವರಿಗೆ ಇ- ಶ್ರಮ್ ಕಾರ್ಡ್ ಹಾಗೂ ಪಿಂಚಣಿ ನೋಂದಣಿ ಕಾರ್ಯಕ್ರಮ

ಉಡುಪಿ: ಅಸಂಘಟಿತ ಕಾರ್ಮಿಕ ವಲಯದಲ್ಲಿರುವ ಅಕ್ಕಸಾಲಿಗ ವೃತ್ತಿ ಮಾಡುತ್ತಿರುವ ಸದಸ್ಯರಿಗೆ ಇ- ಶ್ರಮ್ ಕಾರ್ಡ್ ಹಾಗೂ ಪಿಂಚಣಿ ನೋಂದಣಿ ಮತ್ತು ಕಾರ್ಡ್ ವಿತರಣೆ ಕಾರ್ಯಕ್ರಮವು ನಗರದ ವಳಕಾಡು ದೈವಜ್ಞ ಸಭಾಭವನದಲ್ಲಿ ನಡೆಯಿತು. ಕಾರ್ಮಿಕ ಅಧಿಕಾರಿ ಕುಮಾರ್, ಇ- ಶ್ರಮ್ ಯೋಜನೆ, ಪಿ.ಎಂ.ಎಸ್.ವೈ.ಎಮ್ ಮತ್ತು ಎನ್.ಪಿ.ಎಸ್ ಟ್ರೇರ್ಸ್ ಯೋಜನೆಯ ಕುರಿತು ಮಾಹಿತಿ ನೀಡಿ, ಯೋಜನೆಯಲ್ಲಿ ಹೆಚ್ಚಿನ ಸಂಖ್ಯೆಯ ಅಸಂಘಟಿತ ಕಾರ್ಮಿಕರು ನೊಂದಾಯಿಸಿಕೊಂಡು ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ನೊಂದಾಯಿತ ಅಸಂಘಟಿತ ಕಾರ್ಮಿಕರಿಗೆ ಕಾರ್ಡುಗಳನ್ನು ವಿತರಿಸಲಾಯಿತು.
ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯಬೇಕಾದರೆ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಿರಿ: ಸಿದ್ದರಾಮಯ್ಯ

ಉಡುಪಿ: ದೇಶ, ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯಬೇಕಾದರೆ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಆಶ್ರಯದಲ್ಲಿ ಹಿರಿಯಡಕ ಗಾಂಧಿ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಭೂ ಸುಧಾರಣಾ ಕಾಯ್ದೆಯ’ ಸುವರ್ಣ ಮಾಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಭೂ ಸುಧಾರಣಾ ಕಾಯ್ದೆಯ 79 ಎ, ಬಿ ಹಾಗೂ ಸಿ ಸೆಕ್ಷನ್ ರದ್ದು ಮಾಡುವ ಮೂಲಕ ಬಿಜೆಪಿ ಸರ್ಕಾರ ಉಳ್ಳವನನ್ನು ಭೂಮಿಯ ಒಡೆಯನ್ನನಾಗಿಸಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಹೋಟೆಲ್ ಗಳಲ್ಲಿ ಬೆಲೆ ನಿಗದಿ […]
ಉಡುಪಿ: ‘ಭೂ ಸುಧಾರಣಾ ಕಾಯ್ದೆಯ’ ಸುವರ್ಣ ಮಾಹೋತ್ಸವ ಉದ್ಘಾಟನೆ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಆಶ್ರಯದಲ್ಲಿ ‘ಭೂ ಸುಧಾರಣಾ ಕಾಯ್ದೆಯ’ ಸುವರ್ಣ ಮಾಹೋತ್ಸವ ಹಿರಿಯಡಕ ಗಾಂಧಿ ಮೈದಾನದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಭಾರತದಲ್ಲಿ ಸಂವಿಧಾನ ಜಾರಿಯಾಗಿ 72 ವರ್ಷ ಕಳೆದರೂ, ಆರ್ಥಿಕ, ಸಾಮಾಜಿಕ ಸಮಾನತೆ ಸಾಧಿಸಲು ಆಗಿಲ್ಲ. ಸಮಸಮಾಜ ನಿರ್ಮಾಣ ಇನ್ನೂ ಆಗಿಲ್ಲ. ಅವಕಾಶಗಳಿಂದ ವಂಚಿತರಾದ ಜನರಿಗೆ ಅವಕಾಶ ಕಲ್ಪಿಸಿಕೊಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು ಎಂದರು. ಅಂದಿನ ಇಂದಿರಾ ಗಾಂಧಿ ಸರ್ಕಾರವು ಜಾರಿಗೊಳಿಸಿದ ಉಳುವವನೇ ಭೂಮಿಯ ಒಡೆಯ […]
ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಗ್ರಾಹಕರ ಸಮಾವೇಶ ಉದ್ಘಾಟನೆ

ಉಡುಪಿ: ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುವುದರ ಜತೆಗೆ ಸಂಸ್ಥೆಯ ಉನ್ನತಿಗೆ ಸಿಬ್ಬಂದಿ ಮುತುವರ್ಜಿಯಿಂದ ಶ್ರಮವಹಿಸಿದರೆ ಸಂಸ್ಥೆ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಿದೆ ಎಂದು ಅಂಬಲಪಾಡಿ ಡಾ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ. ಜಿ ಶಂಕರ್ ಹೇಳಿದರು. ಅವರು ಶನಿವಾರ ನಗರದ ಶೇಷಶಯನ ಸಭಾಂಗಣದಲ್ಲಿ ನಡೆದ ಉಡುಪಿ ಮಹಾಲಕ್ಷ್ಮೀ ಕೋ ಆಪರೇಟಿವ ಬ್ಯಾಂಕ್ ನ ಗ್ರಾಹಕರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಯಶ್ ಪಾಲ್ ಸುವರ್ಣ ಅವರ ನೇತೃತ್ವದಲ್ಲಿ ಅವರ ಹಾಗೂ ನಿರ್ದೇಶಕರುಗಳ ಶ್ರಮದ ಫಲವಾಗಿ […]