ಪೆರ್ಡೂರು ರತ್ನಾಕರ ಕಲ್ಯಾಣಿಯವರಿಗೆ ಗೌರವಾಭಿನಂದನೆ.

ಉಡುಪಿ: ಕಿದಿಯೂರು ಹೋಟೆಲ್ ಉಡುಪಿ ಇದರ ತೃತೀಯ ಅಷ್ಟ ಪವಿತ್ರ ನಾಗಮಂಡಲ ಉತ್ಸವದ ಧಾರ್ಮಿಕ ಸಭೆಯಲ್ಲಿ ಸುಮಾರು 25ವರ್ಷಗಳ ಕಾಲ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಪೆರ್ಡೂರ್ ರತ್ನಾಕರ ಕಲ್ಯಾಣಿ ಅವರನ್ನು ಅವರ ಸೇವಾ ಹಿರಿತನವನ್ನು ಪರಿಗಣಿಸಿ ಹೋಟೆಲ್ ನ ಎಮ್ ಡಿ ಶ್ರೀ ಭುವನೇಂದ್ರ ಕಿದಿಯೂರು, ಗಣ್ಯರ ಸಮ ಕ್ಷಮದಲ್ಲಿ ಗೌರವವಿಸಿ ಅಭಿನಂದಿಸಿದರು. ಇವರು ಇತ್ತೀಚೆಗಷ್ಟೇ ಕಸಾಪ ಪುರಸ್ಕಾರವನ್ನು ಪಡೆದಿದ್ದಾರೆ.

ಉಡುಪಿ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟ್ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್ ಭೇಟಿ

ಭಾರತ ತಂಡದ ಮಾಜಿ ಕ್ರಿಕೇಟ್ ಆಟಗಾರರಾದ ಕೃಷ್ಣಮಾಚಾರಿ ಶ್ರೀ ಕಾಂತ್ ಹಾಗೂ ಪತ್ನಿ ಕೃಷ್ಣಮಠಕ್ಕೆ ಆಗಮಿಸಿದ್ದರು. ಶ್ರೀ ಕೃಷ್ಣ, ಮುಖ್ಯಪ್ರಾಣರ ದರ್ಶನ ಪಡೆದು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

12ನೇ ವರ್ಷದ ವಾಮಂಜೂರು ತಿರುವೈಲುಗುತ್ತು “ಸಂಕುಪೂಂಜ – ದೇವುಪೂಂಜ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಮಂಗಳೂರು: ಫೆ.17 ರಂದು ನಡೆದ 12ನೇ ವರ್ಷದ ವಾಮಂಜೂರು ತಿರುವೈಲುಗುತ್ತು “ಸಂಕುಪೂಂಜ – ದೇವುಪೂಂಜ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿದೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ: ಕನೆಹಲಗೆ: 06 ಜೊತೆ ಅಡ್ಡಹಲಗೆ: 05 ಜೊತೆ ಹಗ್ಗ ಹಿರಿಯ: 14 ಜೊತೆ ನೇಗಿಲು ಹಿರಿಯ: 35 ಜೊತೆ ಹಗ್ಗ ಕಿರಿಯ: 23 ಜೊತೆ ನೇಗಿಲು ಕಿರಿಯ: 83 ಜೊತೆ ಒಟ್ಟು ಕೋಣಗಳ ಸಂಖ್ಯೆ: 166 ಜೊತೆ ಕನೆಹಲಗೆ: ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ ಮುಟ್ಟಿದವರು: […]

ದಿವಂಗತ ಮೇಟಿ ಮುದಿಯಪ್ಪ ನೆನಪಿನ ಯುವ ಕಥಾ ಸ್ಪರ್ಧೆ – 2024

ಉಡುಪಿ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು , ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಉಡುಪಿ ಜಿಲ್ಲೆಯ ಯುವ ಸಾಹಿತಿಗಳಿಗಾಗಿ ಸಾಹಿತಿ, ಕವಿ ದಿವಂಗತ ಮೇಟಿ ಮುದಿಯಪ್ಪ ನೆನಪಿನ ಜಿಲ್ಲಾಮಟ್ಟದ ‘ಯುವ ಕಥಾ ಸ್ಪರ್ಧೆ’-2024 ಆಯೋಜಿಸಲಾಗಿದೆ. 18 ರಿಂದ 35 ವಯೋಮಿತಿಯ ಉಡುಪಿ ಜಿಲ್ಲೆಯ ಯುವಕ ಯುವತಿಯರು ಯಾರೂ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಕಥೆ ಕಳುಹಿಸಲು ಕೊನೆಯ ದಿನಾಂಕ ಮಾರ್ಚ್ 30, 2024. ಸ್ಪರ್ಧೆಯ ಪ್ರಥಮ ಮತ್ತು ದ್ವಿತೀಯ ಸ್ಥಾನಿಗಳಿಗೆ ನಗದು ಬಹುಮಾನ ತಲಾ ರೂ.5000 ಹಾಗೂ […]

ಫೆ. 24ರಂದು ಉಡುಪಿಗೆ ಡಾ. ಸಂದೀಪ್ ಮಹಿಂದ್, ಅಜಿತ್ ಹನುಮಕ್ಕನವರ್

ಉಡುಪಿ: ಉಡುಪಿಯ ಕೂರ್ಮ ಫೌಂಡೇಶನ್ ಆಶ್ರಯದಲ್ಲಿ ಫೆ.24ರಂದು ‘ಆಜಾದ್ ಹಿಂದ್ – ಶಿವಾಜಿಯಿಂದ ನೇತಾಜಿವರೆಗೆ’ ಕಾರ್ಯಕ್ರಮ ನಡೆಯಲಿದ್ದು, ಮಹಾರಾಷ್ಟ್ರದ ಪ್ರಖ್ಯಾತ ವಾಗ್ಮಿ ಸಂದೀಪ್ ಮಹಿಂದ್ ಹಾಗೂ ರಾಷ್ಟ್ರೀಯವಾದಿ ಪತ್ರಕರ್ತರಾದ ಅಜಿತ್ ಹನುಮಕ್ಕನವರ್ ಅವರು ಭಾಗವಹಿಸಲಿದ್ದಾರೆ. ಉಡುಪಿ ಅಜ್ಜರಕಾಡು ಪುರಭವನದಲ್ಲಿ ಅಂದು ಸಂಜೆ 5 ಗಂಟೆಯಿಂದ ಕಾರ್ಯಕ್ರಮ ನಡೆಯಲಿದೆ. ಗಾಯಕ ರಜತ್ ಮಯ್ಯ ಮತ್ತು ತಂಡದಿಂದ ರಾಷ್ಟ್ರಗೀತೆಗಳು ಸ್ವರಭಾರತಿ ಹಾಗೂ ಮಂಜರಿಚಂದ್ರ ಮತ್ತು ಕಲಾವಿದರಿಂದ ನೃತ್ಯರೂಪಕಗಳು ನಮೋ ನಮೋ ಭಾರತಾಂಬೆ ಕಾರ್ಯಕ್ರಮ ನಡೆಯಲಿದೆ. ಛತ್ರಪತಿ ಶಿವಾಜಿ ಕಂಡ ಹಿಂದವಿ […]