ವಡಭಾಂಡ ಬಲರಾಮನಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಪನ್ನ

ಮಲ್ಪೆ: ನೂರಾರು ವರ್ಷ ಇತಿಹಾಸ ಹೊಂದಿರುವ ವಡಭಾಂಡೇಶ್ವರ ಬಲರರಾಮ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಿತು. ದೇಗುಲದ ಪ್ರಧಾನ ತಂತ್ರಿ ಬ್ರಹ್ಮಶ್ರೀ ಸುಬ್ರಹ್ಮಣ್ಯ ತಂತ್ರಿ ನೇತೃತ್ವದಲ್ಲಿ ದೇಗುಲದ ಆನುವಂಶಿಕ ಮೊಕ್ತೇಸರ ಟಿ. ಶ್ರೀನಿವಾಸ ಭಟ್ ಸಹಕಾರದಲ್ಲಿ ವಿವಿಧ ಧಾರ್ಮಿಕ ವಿದಿ ವಿಧಾನಗಳು ಜರಗಿತು. ಬೆಳಗ್ಗೆ 6.45ರ ಮೀನ ಲಗ್ನ ಸುಮುಹೂರ್ತದಲ್ಲಿ ದೇವರಿಗೆ ಅಷ್ಟಬಂಧ ಬ್ರಹ್ಮಕುಂಭಾಭಿಷೇಕ ನಡೆಯಲಿರುವುದು. ಬಳಿಕ ನ್ಯಾಸಪೂಜೆ ಪ್ರಸನ್ನಪೂಜೆ ಅವಸೃತಬಲಿ, ಮಹಾ ಮಂತ್ರಕ್ಷತೆ, ಪ್ರಸಾದ ವಿತರಣೆಯಾಯಿತು. ಮಧ್ಯಾಹ್ನ ಪಲ್ಲಪೂಜೆಯಾಗಿ ಮಹಾಅನ್ನಸಂತರ್ಪಣೆ ನಡೆಯಿತು. ಸುಮಾರು ೧೫ ಸಾವಿರ ಮಂದಿ […]

ಇಂದು ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ‌ಮನ್ಮಹಾರಥೋತ್ಸವ

ಉಡುಪಿ: ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ, ಶ್ರೀ ಮಹಿಷ ಮರ್ದಿನಿ ದೇವಿಯ ರಥೋತ್ಸವ ದಿ. 22 ರಿಂದ 27ರವರೆಗೆ ನಡೆಯಲಿದೆ. ಮಾ.25ರಂದು ಮಧ್ಯಾಹ್ನ 12ಕ್ಕೆ ರಥಾರೋಹಣ, ಅನ್ನಸಂತರ್ಪಣೆ, ಶ್ರೀ ದುರ್ಗಾದೇವಿ ಸಂಕೀರ್ತನ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ, ರಾತ್ರಿ ‌8 ಗಂಟೆಗೆ ‌ಮನ್ಮಹಾರಥೋತ್ಸವ ನಡೆಯಲಿದೆ. ಹಾಗೂ ವೈವಿಧ್ಯಮಯ ಯಕ್ಷಗಾನ ವೇಷಗಳ ಮೆರವಣಿಗೆ, ಹಚ್ಚಡ ಸೇವೆ, ಉಂಡಾರು ಬಳಗದವರಿಂದ ಚಂಡೆ ವಾದನ ಹಾಗೂ ಸ್ಯಾಕ್ಸ್ ಫೋನ್ ಕಾರ್ಯಕ್ರಮಗಳು ನಡೆಯಲಿವೆ. ಮಾ.26ರಂದು ಬೆಳಗ್ಗೆ 7ಕ್ಕೆ ಕವಟೂದ್ಘಾಟನೆ, ತುಲಾಭಾರ ಸೇವೆ […]

ವಡಭಾಂಡ ಬಲರಾಮ ದೇವಸ್ಥಾನದ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ

ಮಲ್ಪೆ: ಒಂದು ದೇವಸ್ಥಾನದ ಜೀರ್ಣೋದ್ದಾರ ಎಂದರೆ ಇಡೀ ಊರಿಗೆ ಊರೇ ಸಂಭ್ರಮಿಸುತ್ತದೆ. ದೇವರು ಮತ್ತೆ ಆಲಯ ಸೇರುವುದರೊಂದಿಗೆ ಎಲ್ಲರಿಗೂ ಶ್ರೇಯಸ್ಸಾಗುತ್ತದೆ. ಆತನ ಅನುಗ್ರಹ ದೇವಸ್ಥಾನಕ್ಕೆ ದುಡಿದ ಎಲ್ಲರಿಗೂ ಸಿಗುವಂತಾಗಲಿ ಎಂದು ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ನುಡಿದರು. ಅವರು ಶುಕ್ರವಾರ ವಡಭಾಂಡೇಶ್ವರ ಶ್ರೀ ವಡಭಾಂಡ ಬಲರಾಮ ದೇವಸ್ಥಾನದ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಮಧ್ವರ ಪವಿತ್ರ ಕ್ಷೇತ್ರ ವಡಭಾಂಡೇಶ್ವರ ಅದಮಾರು ಮಠದ ಕಿರಿಯ ಯತಿ ಶ್ರೀ ಈಶ ಪ್ರಿಯ […]

ಕಾರ್ಕಳ: ನಾಳೆ (ಮಾ. 24) ಅಭಿನವ್ ಭಾರತ್ ವತಿಯಿಂದ “ನಮಗಾಗಿ ಮೋದಿ” ವಿಶೇಷ ರಾಷ್ಟ್ರ ಜಾಗೃತಿ ಸಮಾವೇಶ

ಉಡುಪಿ: ಅಭಿನವ ಭಾರತ ಕಾರ್ಕಳ ವತಿಯಿಂದ ನಮಗಾಗಿ ಮೋದಿ ವಿಶೇಷ ರಾಷ್ಟ್ರ ಜಾಗೃತಿ ಸಮಾವೇಶ ಮಾರ್ಚ್ 24ರಂದು ಸಂಜೆ 4 ಗಂಟೆಗೆ ಕಾರ್ಕಳದ ಬಂಡಿಮಠದಲ್ಲಿರುವ ಹೋಟೆಲ್ ಬಾಲಾಜಿ ಇನ್ ನಲ್ಲಿ ನಡೆಯಲಿದೆ. ಸಮಾವೇಶದಲ್ಲಿ ಯುವ ರಾಜಕೀಯ ವಿಶ್ಲೇಷಕರಾದ ಸುರಭಿ ಹುದಿಗೆರೆ ಇವರು ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ವಿಂಗ್ ಕಮಾಂಡರ್ ಬಿ.ಎಸ್ ಸುದರ್ಶನ್, ಹಿರಿಯ ನ್ಯಾಯವಾದಿ ಎಂ.ಕೆ. ವಿಜಯಕುಮಾರ್, ಪತ್ರಕರ್ತ, ಅಂಕಣಕಾರ ಸಂತೋಷ್ ತಮ್ಮಯ್ಯ ಪಾಲ್ಗೊಳ್ಳಲಿದ್ದಾರೆ. ಈ ಜಾಗೃತಿ ಸಮಾವೇಶದ ಅಧ್ಯಕ್ಷತೆಯನ್ನು ಹಿರಿಯ ಉದ್ಯಮಿಯಾದ ಬೋಳ ಪ್ರಭಾಕರ್ ಕಾಮತ್ […]

ಮಾ.25 ರಂದು ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ‌ಮನ್ಮಹಾರಥೋತ್ಸವ

ಉಡುಪಿ: ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ, ಶ್ರೀ ಮಹಿಷ ಮರ್ದಿನಿ ದೇವಿಯ ರಥೋತ್ಸವ ದಿ. 22 ರಿಂದ 27ರವರೆಗೆ ನಡೆಯಲಿದೆ. ಮಾ. 22ರ ರಾತ್ರಿ 7:30ಕ್ಕೆ ವಿಘ್ನೇಶ್ವರ ಪ್ರಾರ್ಥನೆ ನಡೆಯಲಿದ್ದು, ಮಾ. 23 ರಂದು ಮಧ್ಯಾಹ್ನ ಒಂದಕ್ಕೆ ದಿ|ಪರ್ಕಳ ಗುರುರಾಜ್ ಜೋಯ್ಸರ ಸುಪುತ್ರರಿಂದ ಕಲಶ ಅಭಿಷೇಕ ನಡೆಯಲಿದೆ. ಅದೇ ದಿನ ರಾತ್ರಿ ಬೈಗಿನ ಬಲಿ, ಚಂದ್ರಮಂಡಲ ರಥೋತ್ಸವ ಮತ್ತು ದೊಡ್ಡ ರಂಗ ಪೂಜೆ, ಬೂತ ಬಲಿ, ಮಾ. 24ರಂದು ಬೆಳಿಗ್ಗೆ ಆಶ್ಲೇಷ ಬಲಿ, ದುರ್ಗಾ ಹೋಮ […]