ವಾವಿಲಾಲ ಚಿದ್ವಿಲಾ ರೆಡ್ಡಿಗೆ ಫಸ್ಟ್‌ ರ‍್ಯಾಂಕ್ , IIT ಪ್ರವೇಶ ಪರೀಕ್ಷೆಯ JEE-Advanced ಫಲಿತಾಂಶ ಪ್ರಕಟ

ನವದೆಹಲಿ : ಭಾರತೀಯ ತಂತ್ರಜ್ಞಾನ ಸಂಸ್ಥೆಗಳಿಗೆ (IIT ) ಪ್ರವೇಶಾತಿ ನಿರ್ಧರಿಸಲು ನಡೆದ ಜೆಇಇ – ಅಡ್ವಾನ್ಸ್‌ಡ್‌​ (JEE – Advanced) ಉನ್ನತ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ.IIT ಪ್ರವೇಶ ಪರೀಕ್ಷೆಯ JEE-Advanced ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಹೈದರಾಬಾದ್ ಮೂಲದ ವಾವಿಲಾಲ ಚಿದ್ವಿಲಾಸ್ ರೆಡ್ಡಿ ಅತಿ ಹೆಚ್ಚು ಅಂಕಗಳಿಸುವ ಮೂಲಕ ಪ್ರಥಮ ರ‍್ಯಾಂಕ್​ ಗಳಿಸಿದ್ದಾರೆ. ಈ ವರ್ಷದ JEE – Advanced ಪರೀಕ್ಷೆಯನ್ನು ಐಐಟಿ ಗುವಾಹಟಿ ನಡೆಸಿತ್ತು. ವಾವಿಲಾಲ ರೆಡ್ಡಿ ಅವರು 360 ಅಂಕಗಳಿಗೆ 341 […]

ಉಡುಪಿ: ನಾಳೆ (ಜೂ.15) ಮಿಷನ್ ಆಸ್ಪತ್ರೆಯ ಶತಮಾನೋತ್ಸವ ಸಂಭ್ರಮದ ಸಮಾರೋಪ ಸಮಾರಂಭ ಮತ್ತು ಸಿಟಿ ಸ್ಕ್ಯಾನ್ ಘಟಕದ ಉದ್ಘಾಟನೆ

ಉಡುಪಿ: ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆ ಉಡುಪಿ ಇದರ ಶತಮಾನೋತ್ಸವ ಸಂಭ್ರಮದ ಸಮಾರೋಪ ಸಮಾರಂಭ ಮತ್ತು ಸಿಟಿ ಸ್ಕ್ಯಾನ್ ಘಟಕದ ಉದ್ಘಾಟನೆ ಕಾರ್ಯಕ್ರಮವು ಜೂನ್ 15ರಂದು ಆಸ್ಪತ್ರೆಯ ಆವರಣದಲ್ಲಿ ನಡೆಯಲಿದೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಸುಶಿಲ್ ಜತನ್ನ ತಿಳಿಸಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾರೋಪ ಕಾರ್ಯಕ್ರಮವು ಸಿಎಸ್‌ಐ ಕರ್ನಾಟಕ ದಕ್ಷಿಣ ಧರ್ಮಪ್ರಾಂತ್ಯದ ಉಪಾಧ್ಯಕ್ಷ ವಿಕ್ಟರ್ ಅವರ ನೇತೃತ್ವದಲ್ಲಿ ಮಧ್ಯಾಹ್ನ 2.30 ಕ್ಕೆ ಮಿಷನ್ ಆಸ್ಪತ್ರೆ ಚಾಪೆಲ್‌ನಲ್ಲಿ ಕೃತಜ್ಞತಾ ಸೇವೆಯೊಂದಿಗೆ ಆರಂಭವಾಗಲಿದೆ. ಬಳಿಕ ಸಂಜೆ 4 […]

ಹಲಸಿನ ಹಣ್ಣಿನ ಅಚ್ಚರಿಯೆನಿಸುವ ಆಯುರ್ವೇದೀಯ ಆರೋಗ್ಯ ಪ್ರಯೋಜನಗಳು ಹಲವು

ಆರ್ಟೊಕಾರ್ಪಸ್ ಹೆಟೆರೊಫಿಲ್ಲಸ್ ಎಂಬ ವೈಜ್ಞಾನಿಕ ಹೆಸರು ಹೊಂದಿರುವ ಹಲಸು ಉಷ್ಣವಲಯದ ದೇಶಗಳಾದ ಆಫ್ರಿಕಾ, ಏಷ್ಯಾ ಮತ್ತು ದಕ್ಷಿಣ ಅಮೆರಿಕಾ ದೇಶಗಳಲ್ಲಿ ಯಥೇಚ್ಛವಾಗಿ ಬೆಳೆಯುತ್ತವೆ. ಪ್ರಾಚೀನ ಕಾಲದಿಂದಲೂ ಮಾನವನ ಆಹಾರದ ಭಾಗವಾಗಿರುವ ಹಲಸಿನ ಹಣ್ಣನ್ನು ಸಂಸ್ಕೃತದಲ್ಲಿ ಪಾನಸ ಫಲ ಎಂದು ಕರೆಯಲಾಗುತ್ತದೆ. ಹಲಸು ಬಾಂಗ್ಲಾದೇಶ ಮತ್ತು ಶ್ರೀಲಂಕಾದ ರಾಷ್ಟ್ರೀಯ ಹಣ್ಣಾಗಿದ್ದರೆ, ಭಾರತದ ಕೇರಳ ಮತ್ತು ತಮಿಳುನಾಡಿನಲ್ಲಿ ರಾಜ್ಯ ಹಣ್ಣು ಎನ್ನುವ ಹೆಗ್ಗಳಿಕೆ ಹೊಂದಿದೆ. ಆಯುರ್ವೇದವು ಹಲಸಿನ ಹಣ್ಣಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ. ಇದು ದೇಹದಲ್ಲಿ ಪಿತ್ತ ಮತ್ತು ವಾತ […]

ಮಧ್ಯಮ ವರ್ಗದವರ ಜೇಬಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಹಣ ಹಾಕುತ್ತೇವೆ ಎಂದ ಸಿಎಂ

ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು:ಇಂದಿನಿಂದ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ಸಾಮಾನ್ಯ ಸಾರಿಗೆ ಬಸ್​​ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು. ​ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಪಕ್ಷ ಗೇಲಿ ಮಾಡಿಕೊಂಡೇ ಇರಲಿ ನಾವು ಜನರ ಮಧ್ಯೆ ಇದ್ದು ಕೆಲಸ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಶಕ್ತಿ ಯೋಜನೆ ಜಾರಿ ಬಳಿಕ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ವಿರೋಧ ಪಕ್ಷದವರಿಗೆ ನಡುಕ ಹುಟ್ಟಿದೆ. ಅದಕ್ಕಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರು […]

ಉಡುಪಿ: ಜೂನ್ 15 ರಂದು ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ವತಿಯಿಂದ ಔಷಧೀಯ ಸಸ್ಯಗಳ ವಿತರಣೆ

ಉಡುಪಿ: ಕ್ಯಾನ್ಸರ್ ಕಾಯಿಲೆಯ ಚಿಕಿತ್ಸೆಯಲ್ಲಿ ಪರಿಣಾಮಕಾರಿ ಎನ್ನಲಾದ ಔಷಧೀಯ ಗುಣವುಳ್ಳ ಲಕ್ಷಣ ಫಲ ಹಾಗೂ ಇನ್ನಿತರ ಔಷಧೀಯ ಸಸ್ಯಗಳನ್ನು ಇಲ್ಲಿನ ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ವತಿಯಿಂದ ಜೂನ್ 15 ಗುರುವಾರದಂದು ಬೆಳಿಗ್ಗೆ 10 ಗಂಟೆಗೆ ಭುಜಂಗ ಪಾರ್ಕಿನಲ್ಲಿ ಉಚಿತವಾಗಿ ನೀಡಲಾಗುತ್ತಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.