ಪೆರ್ಡೂರು: ಡಿ.24 ರಂದು ಗಿರಿಜನ ಉತ್ಸವ – ಸಾಂಸ್ಕೃತಿಕ ಕಾರ್ಯಕ್ರಮ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಹಾಗೂ ಮರಾಟಿ ಯುವ ಸಾಂಸ್ಕೃತಿಕ ಕಲಾ ಮತ್ತು ಕ್ರೀಡಾ ಸಂಘ (ರಿ) ಪೆರ್ಡೂರು ಇವರ ಸಹಯೋಗದೊಂದಿಗೆ ಗಿರಿಜನ ಉತ್ಸವ – ಸಾಂಸ್ಕೃತಿಕ ಕಾರ್ಯಕ್ರಮವು ಡಿಸೆಂಬರ್ 24 ರಂದು ಬೆಳಗ್ಗೆ 9.30 ಕ್ಕೆ ಪೆರ್ಡೂರಿನ ಸುಬ್ರಾಯ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಕಾಪು ಶಾಸಕ […]
ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ವೀಳ್ಯ ನೀಡುವ ಮೂಲಕ ಸಮ್ಮೇಳನಕ್ಕೆ ಆಹ್ವಾನ

ಉಡುಪಿ: 14ನೆ ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಧ್ಯಕ್ಷರಾದ ಎಚ್. ಶಾಂತರಾಜ ಐತಾಳ್ ಅವರನ್ನು ಸ್ವಗೃಹದಲ್ಲಿ ಡಿಸೆಂಬರ್ 22 ಶುಕ್ರವಾರದಂದು ವೀಳ್ಯ ನೀಡುವ ಮೂಲಕ ಸಮ್ಮೇಳನಕ್ಕೆ ಆಹ್ವಾನಿಸಲಾಯಿತು. ಡಿಸೆಂಬರ್ 30ರಂದು ಮಣಿಪಾಲದ ಶಿವಪಾಡಿ ಉಮಾಮಹೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮವು ಬಹಳ ಅದ್ದೂರಿಯಾಗಿ ನಡೆಸಲಾಗುವುದು ಎಂದು ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ರವಿರಾಜ್ ಎಚ್. ಪಿ ತಿಳಿಸಿದರು. ಈ ಸಂದರ್ಭದಲ್ಲಿ ರಾಗಿಣಿ ಎಸ್ ಐತಾಳ್, ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಮಾಜಿ ಅಧ್ಯಕ್ಷ ಡಾ. ಗಣನಾಥ್ […]
ಡಿ.23ರಂದು ‘ಅಮೃತ ಸಂಗಮ’ ಎಂಜಿಎಂ ಕಾಲೇಜಿನ ಹಳೆವಿದ್ಯಾರ್ಥಿಗಳ ಸಮಾವೇಶ

ಉಡುಪಿ: ಉಡುಪಿ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವದ ಪ್ರಯುಕ್ತ ‘ಅಮೃತ ಸಂಗಮ’ ಹಳೆವಿದ್ಯಾರ್ಥಿಗಳ ಸಮಾವೇಶವನ್ನು ಇದೇ ಡಿ.23ರಂದು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಪ್ರಧಾನ ಸಂಘಟಕ ಪ್ರೊ.ಎಂ.ಎಲ್.ಸಾಮಗ ತಿಳಿಸಿದ್ದಾರೆ. ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಲೇಜು ಸ್ಥಾಪನೆಗೊಂಡ 1949ರಿಂದ ಇದುವರೆಗಿನ ಎಲ್ಲಾ ಹಳೆ ವಿದ್ಯಾರ್ಥಿಗಳು ಒಟ್ಟು ಸೇರಿ ಒಂದು ದಿನದ ಸಂಭ್ರಮ, ಸಡಗರವನ್ನು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲಿದ್ದಾರೆ ಎಂದರು. ಡಿ. 23ರಂದು ಬೆಳಿಗ್ಗೆ 9:30ಕ್ಕೆ ಡಾ.ಟಿಎಂಎ ಪೈ ಪುತ್ಥಳಿಗೆ ಗೌರವಾರ್ಪಣೆಯೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ. […]
ಚಿತ್ರನಟಿ ಸಾಯಿ ಪಲ್ಲವಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ

ಉಡುಪಿ: ದಕ್ಷಿಣ ಭಾರತದ ಪ್ರಸಿದ್ಧ ಚಿತ್ರನಟಿ ಸಾಯಿ ಪಲ್ಲವಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ಖಾಸಗಿ ಕಾರ್ಯ ನಿಮಿತ್ತ ಕರಾವಳಿಗೆ ಬಂದಿರುವ ಚಿತ್ರನಟಿ ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಪಡೆದಿದ್ದಾರೆ. ನಂತರ ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾ ವಲ್ಲಭ ತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಮಠಕ್ಕೆ ಭೇಟಿ ನೀಡಿದ ಸಾಯಿ ಪಲ್ಲವಿ ಅವರನ್ನು ಶ್ರೀ ಕೃಷ್ಣ ಮಠದ ವತಿಯಿಂದ ಗೌರವಿಸಲಾಯಿತು.
ನಾಳೆ (ಡಿ.22) ಮಣಿಪಾಲದಲ್ಲಿ “ಬೇಕ್ ಲೈನ್” ಕೇಕ್ ಶಾಪ್ ಶುಭಾರಂಭ; ಇನ್ಮುಂದೆ ಸ್ವಾದಿಷ್ಟಕರ ವೆರೈಟಿ ಫ್ರೆಶ್ ಕೇಕ್ ಗಳು ನಿಮ್ಮ ಮನೆ ಬಾಗಿಲಿಗೆ ಬರಲಿವೆ.

ಮಣಿಪಾಲ: ಇಲ್ಲಿನ ಅನಂತ ನಗರದಲ್ಲಿರುವ ಉಡುಪಿ ಗ್ರೂಪ್ ಆಫ್ ಇನ್ಸ್ಟಿ ಟ್ಯೂಶನ್ಸ್ ನ ಬಳಿ ಇರುವ ಅವಂತಿ ಕಾರ್ನರಿನಲ್ಲಿ ಡಿ.22 ರಂದು ಹೊಸದಾದ ಕೇಕ್ ಶಾಪ್ ‘ಬೇಕ್ ಲೈನ್’ ಇದರ ಉದ್ಘಾಟನ ಸಮಾರಂಭವು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ನಿಮ್ಮ ಸಂತೋಷದ ಕ್ಷಣಗಳನ್ನು ಸಿಹಿಯೊಂದಿಗೆ ಆಚರಿಸಲು ಬೇಕ್ ಲೈನ್ ಫ್ರೆಶ್ ಕೇಕ್ ಹಾಗೂ ಕನ್ಫೆಕ್ಷನರಿಗಳನ್ನು ನಿಮ್ಮ ಮನೆ ಬಾಗಿಲಿಗೆ ತಲುಪಿಸಲಿದೆ. ಬೇಕ್ ಲೈನ್ ಶಾಖೆಗಳು ಕಟಪಾಡಿ, ತೆಂಕನಿಡಿಯೂರು, ಮುದರಂಗಡಿ, ಮೂಡುಬೆಳ್ಳೆ, ಕಾರ್ಕಳ, ಕೆಮ್ಮಣ್ಣು, ಶಿರ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇದೀಗ […]