ಡಿಜಿ ಲಾಕರ್​ನಲ್ಲಿ ದ್ವಿತೀಯ ಪಿಯುಸಿ ಪಾಸ್ ಔಟ್ ಆದ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ಲಭ್ಯ

ಬೆಂಗಳೂರು : ವಿದ್ಯಾರ್ಥಿಗಳು ತಮ್ಮ ಆಧಾರ್ ಸಂಖ್ಯೆ ನಮೂದಿಸುವ ಮೂಲಕ ಅಂಕಪಟ್ಟಿಯನ್ನ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. 2023ರ ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ 5,24,128 ವಿದ್ಯಾರ್ಥಿಗಳ ಅಂಕಪಟ್ಟಿಗಳನ್ನು ಡಿಜಿ ಲಾಕರ್ ನಲ್ಲಿ ಅಪ್ ಲೋಡ್ ಮಾಡಲಾಗಿದೆ. 2023ರ ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಜೂನ್ 26 ರಿಂದಲೇ ಡಿಜಿ ಲಾಕರ್​​ಗೆ ಅಪ್ಲೋಡ್​​ಗೆ ಮಾಡಲಾಗಿದೆ. ಹಾಗಾಗಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಎನ್‌ಎಡಿ ಡಿಜಿಲಾಕರ್ […]

ಮಳೆಯಿಂದಾಗಿ ಜೋಗ ಜಲಪಾತಕ್ಕೆ ಜೀವಕಳೆ : ಪ್ರವಾಸಿಗರಿಗೆ ರಾಜಾ, ರಾಣಿ, ರೋರರ್, ರಾಕೆಟ್ ಮೋಡಿ

ಶಿವಮೊಗ್ಗ :ಇನ್ನು ಜಗತ್ ಪ್ರಸಿದ್ಧ ಜೋಗ ಜಲಪಾತಕ್ಕೆ ಮಳೆಯಿಂದ ಜೀವಕಳೆ ಬಂದಂತೆ ಆಗಿದೆ. ಜಿಲ್ಲೆಯಲ್ಲಿ ಮುಂಗಾರು ತಡವಾದರು ಸಹ ಸಣ್ಣದಾಗಿ ಪ್ರಾರಂಭಗೊಂಡಿದೆ. ಆದರೆ ನಿರೀಕ್ಷಿಸಿದಷ್ಟು ಪ್ರಮಾಣದಲ್ಲಿ ಮಳೆ ಬಾರದೆ ಇದ್ದರೂ ಸಹ ವರುಣನ ಆಗಮನ ಮಲೆನಾಡ ರೈತರಿಗೆ ತುಸು ನೆಮ್ಮದಿ ತರಿಸಿದೆ. ಮುಂಗಾರು ಸುಮಾರು 40 ದಿನ ತಡವಾದರೂ ಜೋಗದಲ್ಲಿ ಶರಾವತಿ ಬಳಕುತ್ತಾ ಮೇಲಿಂದ ಧುಮ್ಮಿಕ್ಕುತ್ತಿದ್ದಾಳೆ. ರಾಜಾ, ರಾಣಿ, ರೋರರ್, ರಾಕೆಟ್ ಎಂಬ ನಾಲ್ಕು ಕವಲುಗಳಲ್ಲಿ 960 ಅಡಿ ಎತ್ತರದಿಂದ ಶರಾವತಿ ನದಿ ಕೆಳಕ್ಕೆ ಬಿದ್ದು ಮುಂದೆ […]

ದಕ್ಷಿಣ ಕನ್ನಡದಲ್ಲಿ ವರ್ಷಕ್ಕೆ ಟನ್ ಗಟ್ಟಲೆ ಇಳುವರಿ ಪಡೆದು ವಿದೇಶಿ ಹಣ್ಣಗಳನ್ನು ಬೆಳೆಯುವ ಬೆಳೆಗಾರ

ಮಂಗಳೂರು : ಮೂಲತಃ ಬೆಂಗಳೂರಿನ ಪೀಣ್ಯ ನಿವಾಸಿಯಾಗಿರುವ ಲಕ್ಷ್ಮಣ್ ಹನ್ನೆರಡು ವರ್ಷಗಳ ಹಿಂದೆ ಕೃಷಿ ಮಾಡಲೆಂದೇ ದಕ್ಷಿಣ ಕನ್ನಡ ಜಿಲ್ಲೆಗೆ ಬಂದಿದ್ದಾರೆ. ಮನಸು ಮಾಡಿದರೆ, ಬೆಂಗಳೂರಿನಲ್ಲಿ ಉದ್ಯಮ ನಡೆಸಿ ಹೆಚ್ಚು ಹಣ ಸಂಪಾದಿಸಬಹುದಿತ್ತು. ಆದರೆ, ದಕ್ಷಿಣ ಕನ್ನಡ ಜಿಲ್ಲೆಗೆ ಬಂದು ಕೃಷಿ ಮಾಡಿದರೆ ಹೇಗೆ ಎಂದುಕೊಂಡು ಬೆಳ್ತಂಗಡಿ ತಾಲೂಕಿನ ನೇತ್ರಾವತಿ ನದಿ ತಟದಲ್ಲಿರುವ ತೆಕ್ಕಾರು ಎನ್ನುವ ಹಳ್ಳಿಯಲ್ಲಿ ಸುಮಾರು 40 ಎಕರೆ ಜಾಗವನ್ನು ಖರೀದಿಸಿ ಕೃಷಿಯ ಕಸಿಗೆ ಇಳಿದಿದ್ದರು. ವಿದೇಶಗಳಲ್ಲಿ ಹೆಚ್ಚಾಗಿ ಬೆಳೆಯುವ ಹಣ್ಣನ್ನು ಕರ್ನಾಟಕದಲ್ಲಿ ತಿನ್ನುವ […]

ಹೆಬ್ರಿ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನಲ್ಲಿ ಭರತನಾಟ್ಯ ತರಬೇತಿ ಉದ್ಘಾಟನೆ 

ಹೆಬ್ರಿ: ತಮ್ಮಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸೂಕ್ತ ತರಬೇತಿ ನೀಡಿದಾಗ ಮಾತ್ರ ಆ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯ.ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆ ಕಳೆದ 9 ವಷ೯ಗಳಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕಲಾಪ್ರಕಾರಗಳನ್ನು ತರಬೇತಿ ನೀಡುವುದರ ಜತೆಗೆ ಉತ್ತಮ ವೇದಿಕೆಗಳನ್ನು ಕಲ್ಪಿಸಿಕೊಡುತ್ತಿದೆ. ಪೋಷಕರು ತಮ್ಮಮಕ್ಕಳನ್ನು ಇಂತಹ ತರಗತಿಗಳಿಗೆ ಸೇರಿಸುವುದರ ಮೂಲಕ ಪ್ರತಿಭೆಗಳ ಅನಾವರಣಕ್ಕೆ ಅವಕಾಶ ಕಲ್ಪಿಸಿ ಎಂದು ಜೇಸಿಐ ಹೆಬ್ರಿ ಇದರ ಅಧ್ಯಕ್ಷ ಪ್ರವೀಣ್ ಶೆಟ್ಟಿ ಹೇಳಿದರು. ಅವರು ಜು.2 ರಂದು ಚಾಣಕ್ಯ ಏಜ್ಯುಕೇಶನ್ ಮತ್ತು ಕಲ್ಚರಲ್ […]

ಮಕ್ಕಳನ್ನು ಶಾಲೆಗಳತ್ತ ಆಕರ್ಷಿಸಿ ಅವರಿಗೆ ಉತ್ತಮ ಶಿಕ್ಷಣ ನೀಡುವ ಉದ್ದೇಶ ‘ನಲಿಕಲಿ ನಕ್ಷತ್ರ’

ಗಂಗಾವತಿ (ಕೊಪ್ಪಳ):ಇಲ್ಲೊಂದು ಸರ್ಕಾರಿ  ಶಾಲೆಯ ಗೋಡೆಗಳಿಗೆ ಚಿತ್ತಾರಗಳನ್ನು ಬಿಡಿಸುವ ಮೂಲಕ ಗಮನ ಇವರು ಸೆಳೆಯುತ್ತಿದ್ದಾರೆ.ಶಿಕ್ಷಕರ ತಂಡ ಮಕ್ಕಳನ್ನು ಶಾಲೆಗೆ ಸೆಳೆಯುವ ಉದ್ದೇಶದೊಂದಿಗೆ ಕೆಲಸ ಮಾಡುತ್ತಿದೆ. ಶಾಲಾ ಬಿಡುವಿನ ಅವಧಿಯಲ್ಲಿ ಗಂಗಾವತಿಯ ಸರ್ಕಾರಿ ಶಾಲೆಗಳ ಶಿಕ್ಷಕರು ‘ನಲಿಕಲಿ ನಕ್ಷತ್ರ’ ಎಂಬ ತಂಡ ಕಟ್ಟಿಕೊಂಡು ಶಾಲೆಗಳನ್ನು ಸುಂದರಗೊಳಿಸುವ ಕಾಯಕ ಮಾಡುತ್ತಿದ್ದಾರೆ. ಮಕ್ಕಳನ್ನು ತಮ್ಮ ಶಾಲೆಗಳತ್ತ ಆಕರ್ಷಿಸಿ ಅವರಿಗೆ ಉತ್ತಮ ಶಿಕ್ಷಣ ನೀಡಬೇಕಿದೆ. ಇದರ ಜೊತೆಗೆ ಕಟ್ಟಡದ ಸೌಂದರ್ಯಕ್ಕೂ ಗಮನ ಕೊಡಬೇಕು. ಒಳ ಮತ್ತು ಹೊರಾಂಗಣಗಳನ್ನು ಆಕರ್ಷಣೀಯಗೊಳಿಸಲು ನಾನಾ ಚಿತ್ತಾರಗಳ ಮೊರೆ […]