ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ದಸರಾ ವೈಭವದ ಶೋಭಾಯಾತ್ರೆ: ಶೋಭಾಯಾತ್ರೆಯಲ್ಲಿ ಸಾವಿರಾರು ಮಂದಿ ಭಾಗಿ

ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಹತ್ತು ದಿನಗಳ ಕಾಲ ಜರಗಿದ ಉಚ್ಚಿಲ ದಸರಾ ಉತ್ಸವದ ಪ್ರಯುಕ್ತ ಜರಗಿದ ವೈಭವದ ಶೋಭಾ ಯಾತ್ರೆಗೆ ಉಚ್ಚಿಲ ದಸರಾ ರೂವಾರಿ ಡಾ| ಜಿ. ಶಂಕರ್ ಮಂಗಳವಾರ ಸಂಜೆ ಗಣ್ಯರ ಜೊತೆಗೂಡಿ ಚಾಲನೆ ನೀಡಿದರು. ಪ್ರಧಾನ ಅರ್ಚಕ ವೇ| ಮೂ|ರಾಘವೇಂದ್ರ ಉಪಾಧ್ಯಾಯ ಅವರ ನೇತೃತ್ವದಲ್ಲಿ ನವದುರ್ಗೆಯರು ಮತ್ತು ಶಾರದಾ ಮಾತೆಗೆ ಮಹಾ ಮಂಗಳಾರತಿ ಬೆಳಗಿ, ವಿಸರ್ಜನಾ ಪೂಜೆ ನಡೆಸಿದರು. ವಿವಿಧ ಟ್ಯಾಬ್ಲೋಗಳೊಂದಿಗೆ ಉಚ್ಚಿಲದಿಂದ ಕಾಲ್ನಡಿಗೆ ಮೂಲಕ ಹೊರಟ ಶೋಭಾಯಾತ್ರೆಯು ರಾಷ್ಟ್ರೀಯ […]
ವಿಶ್ವ ಬಂಟರ ಸಮ್ಮೇಳನದ ಹಸಿರು ಹೊರೆ ಕಾಣಿಕೆ ಸಮರ್ಪಣೆ

ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅ. 28 29ರಂದು ಜರಗುವ ವಿಶ್ವ ಬಂಟರ ಸಮ್ಮೇಳನ 2023ರ ಪೂರ್ವಭಾವಿಯಾಗಿ ಹಸುರು ಹೊರೆ ಕಾಣಿಕೆ ಸಮರ್ಪಣೆ, ಬುಧವಾರ ವಿಜೃಂಭಣೆಯಿಂದ ನಡೆಯಿತು. ಉಡುಪಿ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಯ 48 ಬಂಟರ ಸಂಘಟನೆಯ ಪ್ರತಿನಿಧಿಗಳು ಈ ಹಸುರು ಹೊರೆ ಕಾಣಿಕೆಯಲ್ಲಿ ಭಾಗವಹಿಸಿದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ನಗರದ ಜೋಡುಕಟ್ಟೆಯಲ್ಲಿ ಹೊರೆ ಕಾಣಿಕೆ ಸಮರ್ಪಣೆಗೆ ಚಾಲನೆ ನೀಡಿದರು. ಜೋಡುಕಟ್ಟೆಯಿಂದ ಅಮ್ಮಣ್ಣಿ ರಾಮಣ್ಣ […]
ಸಮಾಜದ ಸಮಸ್ತರನ್ನೂ ಒಗ್ಗೂಡಿಸಿ ಸಮುದಾಯೋನ್ನತಿಯಿಂದ ರಾಷ್ಟ್ರೋನ್ನತಿಯತ್ತ ಸಾಗುವ ವಿಶ್ವ ಬಂಟರ ಸಮ್ಮೇಳನ-2023

ಅವಿಭಜಿತ ದ.ಕ ಜಿಲ್ಲೆಯ ಅನಭಿಷಿಕ್ತ ದೊರೆಗಳಾಗಿ ಮೆರೆದ ಜನನಿ, ಜನ್ಮ ಭೂಮಿ ಮತ್ತು ಕರ್ಮಭೂಮಿಗೆ ಕೀರ್ತಿ ತಂದ ಬಾವ, ಗುತ್ತು, ಬರ್ಕೆ, ಬೂಡಿನ ಗತ್ತು ಗೈರತ್ತಿನ ಕ್ಷಾತ್ರ ತೇಜದ ವೈಶ್ಯ ವರ್ಣದ ಸಮುದಾಯ ಬಂಟ ಯಾನೆ ನಾಡವರದ್ದು. ಬಂಟ ಅಂದರೆ ಸಚಿವ- ಮಂತ್ರಿ- ಭಟ ಎಂಬುದಾಗಿಯೂ, ಅರಸೊತ್ತಿಗೆಯ ಕಾಲದಲ್ಲಿ ಆಳುಪ ಅರಸರಾಗಿ, ಸಾಮಂತಿಕೆಯ ಕಾಲದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದವರು. ಛಲ, ಬುದ್ದಿ ಬಲ- ನಿಷ್ಠೆ ಮತ್ತು ಪ್ರಾಮಾಣಿಕತೆಗೆ ಇನ್ನೊಂದು ಹೆಸರಿದ್ದರೆ ಅದು ಬಂಟರದ್ದು. ಆಡು ಮುಟ್ಟದ ಸೊಪ್ಪಿಲ್ಲ, […]
ಉಡುಪಿ: ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಅ.24ರಂದು ವಿಜಯದಶಮಿ ಆಚರಣೆ.

ಉಡುಪಿ: ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವವು ವಿಜೃಂಭಣೆಯಿಂದ ನಡೆಯುತ್ತಿದ್ದು, ಸಾವಿರಾರು ಮಂದಿ ಭಕ್ತರು ದೇಗುಲಕ್ಕೆ ಆಗಮಿಸಿ, ದೇವರ ಪ್ರಸಾದವನ್ನು ಪಡೆದರು. ಶ್ರೀ ಕ್ಷೇತ್ರದಲ್ಲಿ ಅ.23ರಂದು ರಾತ್ರಿ ಶಾರದಾ ವಿಸರ್ಜನೆ, ಕನ್ನಿಕಾ ಪೂಜೆ, ಮಹಾಮಂತ್ರಾಕ್ಷತೆ ಹಾಗೂ ಅ.24ರಂದು ವಿಜಯದಶಮಿ ಆಚರಣೆ ನಡೆಯಲಿದೆ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ|ಕಟ್ಟೆರವಿರಾಜ ವಿ. ಆಚಾರ್ಯ ತಿಳಿಸಿದ್ದಾರೆ.
ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿಯ ವಿಶೇಷ ಪೂಜೆ

ಬ್ರಹ್ಮಾವರ: ಶ್ರೀ ಕ್ಷೇತ್ರ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿಯ ವಿಶೇಷ ಪೂಜಾ ಸಮಾರಂಭವು ಶ್ರೀ ದುರ್ಗಾಪರಮೇಶ್ವರೀ ದೇವಿ ಸನ್ನಿಧಿಯಲ್ಲಿ ಅ.24ರ ವರೆಗೆ ನಡೆಯಲಿದೆ. ನವರಾತ್ರಿಯ ಈ ಕಾರ್ಯಕ್ರಮಗಳಿಗೆ ತಾವೆಲ್ಲರೂ ಆಗಮಿಸಿ, ಶ್ರೀ ದೇವಿಯ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ, ಅಮ್ಮನವರ ಪೂರ್ಣಾನುಗ್ರಹಕ್ಕೆ ಪಾತ್ರರಾಗಬೇಕಾಗಿ ಗೋವಿಂದರಾಜು ಎಸ್. ಕಾರ್ಯನಿರ್ವಹಣಾಧಿಕಾರಿ, ಹೆಚ್.ಧನಂಜಯ ಶೆಟ್ಟಿ ಅಧ್ಯಕ್ಷರು ಹೆಚ್.ಸುರೇಂದ್ರ ಶೆಟ್ಟಿ ಅನುವಂಶಿಕ ಮುಕ್ತೇಸರ, ಹೆಚ್. ಪ್ರಭಾಕರ ಶೆಟ್ಟಿ ಅನುವಂಶಿಕ ಮುಕ್ತೇಸರ, ಹೆಚ್.ಶಂಭು ಶೆಟ್ಟಿ ಅನುವಂಶಿಕ ಮುಕ್ತೇಸರ, ಆರ್. ಶ್ರೀನಿವಾಸ ಶೆಟ್ಟಿ ಅನುವಂಶಿಕ […]