ಆ.13 ರಂದು ಶ್ರೀ ವಿಷ್ಣು ಫ್ರೆಂಡ್ಸ್ ಅಜೆಕಾರು ಇದರ ಆಶ್ರಯದಲ್ಲಿ ಪ್ರಥಮ ವರ್ಷದ “ಕೆಸರ್ ಡೊಂಜಿ ದಿನ”

ಅಜೆಕಾರು: ಕಾರ್ಕಳ ತಾಲೂಕಿನ ಅಜೆಕಾರು ಶ್ರೀ ವಿಷ್ಣು ಫ್ರೆಂಡ್ಸ್ ಇದರ ಆಶ್ರಯದಲ್ಲಿ ಪ್ರಥಮ ವರ್ಷದ ಮರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿಂದೂ ಬಾಂಧವರ ಕೆಸರ್ ಡೊಂಜಿ ದಿನವನ್ನು ಆಗಸ್ಟ್ 13 ಆದಿತ್ಯವಾರ ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬಳಿ ಜಯಂತಿಮಾರ್ ಕಂಬಳದಲ್ಲಿ ನಡೆಯಲಿದೆ. ಮರ್ಣೆ ಗ್ರಾಮದ ಹಿಂದೂ ಸಮಾಜದ ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಪುರುಷರಿಗೆ ಕಬ್ಬಡಿ, ವಾಲಿಬಾಲ್, ಹಗ್ಗ ಜಗ್ಗಾಟ, ವಿವಿಧ ಬಗೆಯ ಆಟೋಟ ಸ್ಪರ್ಧೆಗಳು ನಡೆಯಲಿರುವುದು. ತಾರ ಮೆರುಗಾಗಿ ತುಳು ಚಿತ್ರನಟರಾದ ದೀಪಕ್ ರೈ ಪಾಣಾಜೆ, […]

3 ಶತಕೋಟಿ ವರ್ಷ ಹಳೆಯ ಪುರಾವೆ ಮಂಗಳಗ್ರಹದಲ್ಲಿ ಪತ್ತೆ : ಜೀವ ವಿಕಾಸಕ್ಕೆ ಪೂರಕವಾಗಿದ್ದ ಗ್ರಹ

ನ್ಯೂಯಾರ್ಕ್ : ಮಂಗಳ ಗ್ರಹದಲ್ಲಿ 3.8 ರಿಂದ 3.6 ಶತಕೋಟಿ ವರ್ಷಗಳ ಹಿಂದಿನ ಸೆಡಿಮೆಂಟರಿ ಪದರುಗಳಲ್ಲಿ ಲವಣಗಳ ನಿಕ್ಷೇಪಗಳಿಂದ ರಚಿತವಾದ ಷಟ್ಕೋನಾಕಾರದ ಮಾದರಿಗಳನ್ನು ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ.ಮಂಗಳ ಗ್ರಹದ ಮೇಲೆ ಜೀವಿಗಳ ಉಗಮಕ್ಕೆ ಪೂರಕವಾದ ವಾತಾವರಣ ಇತ್ತು ಎಂಬ ಬಗ್ಗೆ ಹೊಸ ಪುರಾವೆಗಳನ್ನು ವಿಜ್ಞಾನಿಗಳು ಪತ್ತೆ ಮಾಡಿದ್ದಾರೆ.ಕ್ಯೂರಿಯಾಸಿಟಿಯ ಮಾಸ್ಟ್​ ಕ್ಯಾಮ್ 1 ಮತ್ತು ಚೆಮ್​ ಕ್ಯಾಮ್​ 2 ಉಪಕರಣಗಳನ್ನು ಬಳಸಿಕೊಂಡು ವಿಜ್ಞಾನಿಗಳು 3.8 ರಿಂದ 3.6 ಬಿಲಿಯನ್ ವರ್ಷಗಳ ಹಿಂದಿನ ಲವಣಗಳ ನಿಕ್ಷೇಪವನ್ನು ಕಂಡುಹಿಡಿದಿದ್ದಾರೆ. ಋತುಮಾನಕ್ಕನುಗುಣವಾಗಿ ಒಣಗುವ […]

ಇಸ್ರೊದ 3ನೇ ಹಂತದ ಕಾರ್ಯಾಚರಣೆ ಯಶಸ್ವಿ: ಚಂದ್ರನಿಗೆ 1,500 ಕಿಮೀ ಹತ್ತಿರ ತಲುಪಿದ ಚಂದ್ರಯಾನ-೩

ಬೆಂಗಳೂರು: ಭಾನುವಾರ ನಡೆಸಿದ ಚಂದ್ರನ ಕಕ್ಷೆ ಸೇರ್ಪಡೆಯನ್ನು (ಎಲ್‌ಒಐ) ಒಳಗೊಂಡ ತನ್ನ ಮೂರನೇ ಚಂದ್ರಯಾನ ಕಾರ್ಯಾಚರಣೆಯನ್ನು ಇಸ್ರೊ ಪೂರ್ಣಗೊಳಿಸಿದೆ.ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-3 ನೌಕೆ ಚಂದ್ರನಿಗೆ ಅತ್ಯಂತ ಹತ್ತಿರಕ್ಕೆ ತಲುಪಿದೆ.ಚಂದ್ರಯಾನ-3 ಬಾಹ್ಯಾಕಾಶ ನೌಕೆ ಚಂದ್ರನಿಗೆ ತೀರಾ ಹತ್ತಿರಕ್ಕೆ ತಲುಪಿದ್ದು, ಭಾರತದ ಬಾಹ್ಯಾಕಾಶ ಇತಿಹಾಸದಲ್ಲಿ ಇಸ್ರೊ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿತು. ಸೋಮವಾರ ಇಸ್ರೋ ಚಂದ್ರಯಾನ -3 ರ ಎತ್ತರವನ್ನು ಸುಮಾರು 14,000 ಕಿಮೀ ಕಡಿಮೆ ಮಾಡಿ ಚಂದ್ರನಿಗೆ 4,313 ಕಿಮೀಗೆ ಇಳಿಸಿತ್ತು. ಮುಂದಿನ ಚಂದ್ರಯಾನ ಕಾರ್ಯಾಚರಣೆ ಕ್ರಮಗಳು ಆಗಸ್ಟ್ 14 […]

ಚಂದ್ರಯಾನ -3 ಬಾಹ್ಯಾಕಾಶ ನೌಕೆ ಯಶಸ್ವಿಯಾಗಿ ಚಂದ್ರನ ಕಕ್ಷೆಗೆ : ಇಸ್ರೋ ಮತ್ತೊಂದು ಮೈಲಿಗಲ್ಲು ಸೃಷ್ಟಿಸುವೆಡೆಗೆ

ಚಂದ್ರಯಾನ-3 ಬಾಹ್ಯಾಕಾಶ ನೌಕೆ ಯಶಸ್ವಿಯಾಗಿ ಚಂದ್ರನ ಕಕ್ಷೆಯನ್ನು ಪ್ರವೇಶಿಸಿದೆ.ಚಂದ್ರಯಾನ -3 ಬಾಹ್ಯಾಕಾಶ ನೌಕೆ ಯಶಸ್ವಿಯಾಗಿ ಚಂದ್ರನ ಕಕ್ಷೆಯನ್ನು ಪ್ರವೇಶಿಸಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ಆಗಸ್ಟ್​ 24ರಂದು ನೌಕೆ ಚಂದ್ರನ ಮೇಲೆ ಇಳಿಯಲಿದೆ. ಇಸ್ರೋ ಮತ್ತೊಂದು ಮೈಲಿಗಲ್ಲು ಸೃಷ್ಟಿಸಲಿದೆ. ಇಸ್ರೋ ಟ್ವೀಟ್ ಮೂಲಕ ನೀಡಿರುವ ಮಾಹಿತಿಯ ಪ್ರಕಾರ, ಚಂದ್ರಯಾನ-3 ಬಾಹ್ಯಾಕಾಶ ನೌಕೆ ಇಂಜಿನ್ ಅನ್ನು ವಿರುದ್ಧ ದಿಕ್ಕಿನಲ್ಲಿ ಉರಿಸುವ ಮೂಲಕ ತಾನು ಈ ಮೊದಲು ಅಂದುಕೊಂಡ ನಡೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದು, ಚಂದ್ರನ ಮೇಲ್ಮೈಗೆ ಇನ್ನಷ್ಟು ಸನಿಹಕ್ಕೆ ತೆರಳಿದೆ. ಈಗ […]

ಬೆಂಗೇರಿಯಲ್ಲಿ ಸಿದ್ಧವಾಗುತ್ತಿವೆ ಸಾವಿರಾರು ತ್ರಿವರ್ಣ ಧ್ವಜಗಳು : ರಾಷ್ಟ್ರ ಧ್ವಜಗಳಿಗೆ ಭಾರೀ ಬೇಡಿಕೆ

ಹುಬ್ಬಳ್ಳಿ: ರಾಷ್ಟ್ರಧ್ವಜ ತಯಾರಿಕೆಗೆ ಭಾರತೀಯ ಮಾನಕ ಸಂಸ್ಥೆ (ಬಿಐಎಸ್)ಯಿಂದ ಮಾನ್ಯತೆ ಪಡೆದ ದೇಶದ ಏಕೈಕ ಸಂಸ್ಥೆ ಎಂದರೆ ಅದು ಹುಬ್ಬಳ್ಳಿಯ ಬೆಂಗೇರಿಯ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘ. ಕೋವಿಡ್ ನಂತರ ಮತ್ತೆ ಇಲ್ಲಿನ ರಾಷ್ಟ್ರಧ್ವಜಗಳಿಗೆ ದೇಶಾದ್ಯಂತ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆ ಸಂಸ್ಥೆಯು ಈ ವರ್ಷ ಮೂರು ಕೋಟಿ ರೂಪಾಯಿ ವಹಿವಾಟು ನಡೆಸುವ ನಿರೀಕ್ಷೆಯನ್ನು ಹೊಂದಿದೆ. ಈ ಹಿಂದಿನ ದಿನಗಳಿಗೆ ಹೋಲಿಕೆ ‌ಮಾಡಿದರೆ ರಾಷ್ಟ್ರಧ್ವಜಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಪ್ರತಿ ವರ್ಷದಿಂದ ವರ್ಷಕ್ಕೆ ಚೇತರಿಕೆಯನ್ನು ಕಂಡಿದೆ. ಕಳೆದ […]