ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ “ಬ್ರಹ್ಮಕಲಶೋತ್ಸವ”

ಹಿರಿಯಡ್ಕ: ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಮೇ.24 ರಂದು ನಡೆದ ಧಾರ್ಮಿಕ ಸಭೆಯನ್ನು ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯತೀರ್ಥ ಸ್ವಾಮೀಜಿ ಉದ್ಘಾಟಿಸಿ ಮಾತನಾಡಿದರು. ನಮ್ಮ ಕರೆಯುವಿಕೆಗೆ ಭಗವಂತನು ಸಮೀಪಿಸುತ್ತಾನೆ. ಕಂಠದಿಂದ ಬರುವ ಕೂಗಿಗಿಂತ ಹೃದಯದಿಂದ ಬರುವ ಕೂಗಿಗೆ ಭಗವಂತ ಒಲಿಯುತ್ತಾನೆ. ಪ್ರತಿಯೊಬ್ಬರೂ ದೇವರನ್ನು ಧ್ಯಾನದಿಂದ ಸ್ತುತಿಸಿದಾಗ ಭಗವಂತನ ಅನುಗ್ರಹ ಪ್ರಾಪ್ತಿಯಾಗುತ್ತದೆ. ಸುವ್ಯವಸ್ಥೆಯಲ್ಲಿ ಸಮಾಜ ಮುನ್ನಡೆಯಲು ಭಗವಂತನ ಅನುಗ್ರಹ ಅತ್ಯಗತ್ಯ. ಕಾಲಕಾಲಕ್ಕೆ ಮಳೆ ಬೆಳೆ ನೀಡುವ ಮೂಲಕ ಪ್ರತಿಯೊಬ್ಬರಿಗೂ ಬದುಕಲು ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾನೆ. […]
ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ‘ಬ್ರಹ್ಮಕಲಶೋತ್ಸವ’ ಪ್ರಯುಕ್ತ ದೇಗುಲದಲ್ಲಿ ನಡೆದ ಗಣಹೋಮ, ಮಹಾರುದ್ರಯಾಗ

ಉಡುಪಿ: ಕಾರ್ಕಳ ತಾಲೂಕಿನ ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ, ಶ್ರೀ ಭದ್ರಕಾಳಿ ದೇವರಿಗೆ ಮೇ.25 ರ ವರೆಗೆ ಬ್ರಹ್ಮಕಲಶೋತ್ಸವ ನಡೆಯಲ್ಲಿದ್ದು, ಆ ಪ್ರಯುಕ್ತ ದೇಗುಲದಲ್ಲಿ ಮೇ 23ರ ಬೆಳಿಗ್ಗೆ ಗಂಟೆ 8.00ರಿಂದ ಗಣಪತಿ ಹೋಮ, ಶ್ರೀ ಮಹಾರುದ್ರಯಾಗ, ಮಹಾತತ್ವ ಹೋಮ, ತತ್ವ ಕಲಶಾಭಿಷೇಕ, ತತ್ವನ್ಯಾಸ, ಮಹಾಪೂಜೆ, ಸಹಸ್ರ ಬ್ರಹ್ಮಕಲಶದ ಮಂಡಲ ರಚನೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಮಂಟಪ ಸಂಸ್ಕಾರ, ಸಹಸ್ರಕಲಶಾಧಿವಾಸ, ಕಲಶಾಧಿವಾಸ ಹೋಮಗಳು ಹಾಗೂ ಅಷ್ಟಾವಧಾನ ಧಾರ್ಮಿಕ ಕಾರ್ಯಕ್ರಮಗಳು ಭಕ್ತರ ಸಮ್ಮುಖದಲ್ಲಿ […]
ಇತಿಹಾಸ ಪ್ರಸಿದ್ಧ ಉದ್ಯಾವರ ಮಹತೋಭಾರ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನ: ತಾಮ್ರದ ಸುತ್ತುಪೌಳಿ ಸಮರ್ಪಣೆ, ಬ್ರಹ್ಮಕುಂಭಾಭಿಷೇಕ ಸಂಪನ್ನ

ಉಡುಪಿ: ಉದ್ಯಾವರ ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಬ್ರಹ್ಮ ಕುಂಭಾಭಿಷೇಕವು ಮೇ 21ರಂದು ಸಂಪನ್ನಗೊಂಡಿತು. ಗೌರವಾಧ್ಯಕ್ಷರಾದ ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು, ಅಧಮರು ಮಠದ ಶ್ರೀ ಈಶ ಪ್ರಿಯತೀರ್ಥ ಶ್ರೀಪಾದರು, ವೇ|ಮೂ|ಪುತ್ತೂರು ಶ್ರೀ ತಂತ್ರಿ, ಕುತ್ಪಾಡಿ ಬಾಲಕೃಷ್ಣ ಭಟ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡಿದ್ದು, ಮಹಾಪೂಜೆ ಬಳಿಕ ಸುಮಾರು ಏಳು ಸಾವಿರ ಮಂದಿ ಭಕ್ತರು ಅನ್ನ ಸಂರ್ಪಣೆಯಲ್ಲಿ ಪಾಲ್ಗೊಂಡರು. ಸಂಜೆ ರಂಗ ಪೂಜೆ, ಬಲಿ ಉತ್ಸವವು ಜರುಗಿತು. ದೇವಾಲಯದ ಸುತ್ತುಪೌಳಿ ಮತ್ತು […]
ಪುಣ್ಯಕ್ಷೇತ್ರ ಕೇದಾರನಾಥ ಯಾತ್ರೆಗೆ ಹೆಲಿಕಾಪ್ಟರ್ ಬುಕಿಂಗ್ ಆರಂಭ

ಹಿಂದುಗಳ ಪ್ರಮುಖ ಪುಣ್ಯಕ್ಷೇತ್ರಗಳಲ್ಲಿ ಕೇದಾರನಾಥ ಧಾಮ ಒಂದಾಗಿದ್ದು, ಉತ್ತರ ಖಂಡದ ಗುಡ್ಡಗಾಡು ಪ್ರದೇಶದಲ್ಲಿ 12,000 ಅಡಿ ಎತ್ತರದಲ್ಲಿದೆ. ಕೇದಾರನಾಥಯಾತ್ರೆಗೆ ಐ ಆರ್ ಸಿಟಿಸಿ ಮೂಲಕ ಹೆಲಿಕಾಪ್ಟರ್ ರೈಡ್ ಗೆ ಬುಕಿಂಗ್ ಆರಂಭಗೊಂಡಿದ್ದು, ಮಂಗಳವಾರ ಮಧ್ಯಾಹ್ನ 12 ಗಂಟೆಯಿಂದ ಬುಕಿಂಗ್ ಆರಂಭಗೊಂಡಿದೆ. ಮೇ 28 ರಿಂದ ಜೂನ್ 15ರ ನಡುವಿನ ಹೆಲಿಕಾಪ್ಟರ್ ರೈಡನ್ನು ಬುಕ್ ಮಾಡಿಕೊಳ್ಳಬಹುದು. ಬುಕಿಂಗ್ ಗಾಗಿ ವೆಬ್ಸೈಟ್ನಲ್ಲಿ ಲಾಗಿನ್ ಐಡಿ ಅನ್ನು ರಚಿಸಿ, ಲಾಗಿನ್ ಮಾಡಿದ ನಂತರ ಬಳಕೆದಾರರು ಹೆಲಿ ಆಪರೇಟರ್ ಕಂಪನಿಯನ್ನು ಆಯ್ಕೆ ಮಾಡುವ […]
ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ‘ಬ್ರಹ್ಮಕಲಶೋತ್ಸವ’

ಉಡುಪಿ ಕಾರ್ಕಳ ತಾಲೂಕಿನ ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ, ಶ್ರೀ ಭದ್ರಕಾಳಿ ದೇವರಿಗೆ ಬ್ರಹ್ಮಕಲಶೋತ್ಸವವು ಮೇ 25 ರವರೆಗೆ ನಡೆಯಲ್ಲಿದ್ದು, ಆ ಪ್ರಯುಕ್ತ ದೇಗುಲದಲ್ಲಿ ಮೇ 21ರ ಬೆಳಿಗ್ಗೆ ಗಂಟೆ 8.00ರಿಂದ ಸಹಸ್ರ ಪ್ರಮೋದಕ ಗಣಪತಿ ಹೋಮ, ಅಷ್ಟ ಬಂದ, ಬಿಂಬ ಶುದ್ಧಿ, ಗಣಪತಿ ದೇವರಿಗೆ ಶಾಂತಿ ಪ್ರಾಯಶ್ಚಿತ್ತ ಹೋಮ, 108 ಕಲಶ ಸಹಿತ ಮಹಾ ಮಂತ್ರ ಹೋಮ, ಕಲಶಾಭಿಷೇಕ, ಮಹಾಪೂಜೆ ಹಾಗೂ ಮಧ್ಯಾಹ್ನ ಅನ್ನ ಸಂತರ್ಪಣೆ, ಸಂಜೆ ಗಂಟೆ 5:30 […]