ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ನಾಳೆ ಬಡಾನಿಡಿಯೂರು ಶಾಖೆಯ ನೂತನ ಕಟ್ಟಡ “ಸಹಕಾರ ಸದನ”ದ ಉದ್ಘಾಟನೆ ಸಮಾರಂಭ

ಉಡುಪಿ: ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘದ ಬಡಾನಿಡಿಯೂರು ಶಾಖೆಯ ನೂತನ ಕಟ್ಟಡ ಸಹಕಾರ ಸದನವನ್ನು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಅಧ್ಯಕ್ಷ ಡಾ|ಎಂ.ಎನ್. ರಾಜೇಂದ್ರ ಕುಮಾರ್ ಮೇ 27ರಂದು ಬೆಳಿಗ್ಗೆ 10ಕ್ಕೆ ಉದ್ಘಾಟಿಸಲಿದ್ದಾರೆ. ಸಹಕಾರಿ ಸಂಘದ ಅಧ್ಯಕ್ಷ ಟಿ.ಸತೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ದೀಪ ಪ್ರಜ್ವಲನೆ ಮಾಡಲಿದ್ದಾರೆ. ತೊಟ್ಟಂ ಸೈಂಟ್ ಅನ್ಸ್ ಚರ್ಚ್ ಧರ್ಮಗುರು ರೆ|ಫಾ|ಡೆನಿಸ್ ದೇಸಾ […]

ಉದ್ಯಾವರ ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕುಂಭಾಭಿಷೇಕ ಸಂಪನ್ನ

ಉಡುಪಿ: ಧಾರ್ಮಿಕ, ಸಾಂಸ್ಕೃತಿಕ, ಸಂಸ್ಕಾರಯುತ ಸಮೃದ್ಧಿಯ ದೇವಾಲಯ ನಮ್ಮ ಸಂಪತ್ತು. ಭಕ್ತರು ಮತ್ತು ಭಗವಂತನನ್ನು ಸೇರಿಸುವ ಮಾಧ್ಯಮವಾಗಿದೆ. ನಮ್ಮ ಮನಸ್ಸಿನ ನೆಮ್ಮದಿಗಾಗಿ ಪ್ರಾಚೀನರು ಕಂಡುಕೊಂಡ ಪರಿಹಾರವಾಗಿದೆ. ಮಕ್ಕಳಲ್ಲಿ ಧರ್ಮ ಸಂಸ್ಕೃತಿಯ ಪರಿಜ್ನಾನ ಅರಳಿಸಿ ಹಿಂದು ಧರ್ಮವನ್ನು ಉಳಿಸೋಣ ಎಂದು ಕಾಣಿಯೂರು ಮಠದ ಶ್ರೀ ವಿದ್ಯಾಾವಲ್ಲಭತೀರ್ಥ ಶ್ರೀಪಾದರು ಹೇಳಿದರು. ಅವರು ಉದ್ಯಾವರ ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕುಂಭಾಭಿಷೇಕದ ಸಂದರ್ಭ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ಸಂದೇಶ ನೀಡಿದರು. ಭೀಮನಕಟ್ಟೆ ಮಠದ ಶ್ರೀ ರಘುವರೇಂದ್ರತೀರ್ಥ ಶ್ರೀಪಾದರು, ಮಕ್ಕಳಿಗೆ ಬಾಗುವಿಕೆ […]

ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ “ಬ್ರಹ್ಮಕಲಶೋತ್ಸವ”

ಹಿರಿಯಡ್ಕ: ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಮೇ.24 ರಂದು ನಡೆದ ಧಾರ್ಮಿಕ ಸಭೆಯನ್ನು ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯತೀರ್ಥ ಸ್ವಾಮೀಜಿ ಉದ್ಘಾಟಿಸಿ ಮಾತನಾಡಿದರು. ನಮ್ಮ ಕರೆಯುವಿಕೆಗೆ ಭಗವಂತನು ಸಮೀಪಿಸುತ್ತಾನೆ. ಕಂಠದಿಂದ ಬರುವ ಕೂಗಿಗಿಂತ ಹೃದಯದಿಂದ ಬರುವ ಕೂಗಿಗೆ ಭಗವಂತ ಒಲಿಯುತ್ತಾನೆ. ಪ್ರತಿಯೊಬ್ಬರೂ ದೇವರನ್ನು ಧ್ಯಾನದಿಂದ ಸ್ತುತಿಸಿದಾಗ ಭಗವಂತನ ಅನುಗ್ರಹ ಪ್ರಾಪ್ತಿಯಾಗುತ್ತದೆ. ಸುವ್ಯವಸ್ಥೆಯಲ್ಲಿ ಸಮಾಜ ಮುನ್ನಡೆಯಲು ಭಗವಂತನ ಅನುಗ್ರಹ ಅತ್ಯಗತ್ಯ. ಕಾಲಕಾಲಕ್ಕೆ ಮಳೆ ಬೆಳೆ ನೀಡುವ ಮೂಲಕ ಪ್ರತಿಯೊಬ್ಬರಿಗೂ ಬದುಕಲು ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾನೆ. […]

ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ‘ಬ್ರಹ್ಮಕಲಶೋತ್ಸವ’ ಪ್ರಯುಕ್ತ ದೇಗುಲದಲ್ಲಿ ನಡೆದ ಗಣಹೋಮ, ಮಹಾರುದ್ರಯಾಗ

ಉಡುಪಿ: ಕಾರ್ಕಳ ತಾಲೂಕಿನ ಪೆಲತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ, ಶ್ರೀ ಭದ್ರಕಾಳಿ ದೇವರಿಗೆ ಮೇ.25 ರ ವರೆಗೆ ಬ್ರಹ್ಮಕಲಶೋತ್ಸವ ನಡೆಯಲ್ಲಿದ್ದು, ಆ ಪ್ರಯುಕ್ತ ದೇಗುಲದಲ್ಲಿ ಮೇ 23ರ ಬೆಳಿಗ್ಗೆ ಗಂಟೆ 8.00ರಿಂದ ಗಣಪತಿ ಹೋಮ, ಶ್ರೀ ಮಹಾರುದ್ರಯಾಗ, ಮಹಾತತ್ವ ಹೋಮ, ತತ್ವ ಕಲಶಾಭಿಷೇಕ, ತತ್ವನ್ಯಾಸ, ಮಹಾಪೂಜೆ, ಸಹಸ್ರ ಬ್ರಹ್ಮಕಲಶದ ಮಂಡಲ ರಚನೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಮಂಟಪ ಸಂಸ್ಕಾರ, ಸಹಸ್ರಕಲಶಾಧಿವಾಸ, ಕಲಶಾಧಿವಾಸ ಹೋಮಗಳು ಹಾಗೂ ಅಷ್ಟಾವಧಾನ ಧಾರ್ಮಿಕ ಕಾರ್ಯಕ್ರಮಗಳು ಭಕ್ತರ ಸಮ್ಮುಖದಲ್ಲಿ […]

ಇತಿಹಾಸ ಪ್ರಸಿದ್ಧ ಉದ್ಯಾವರ ಮಹತೋಭಾರ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನ: ತಾಮ್ರದ ಸುತ್ತುಪೌಳಿ ಸಮರ್ಪಣೆ, ಬ್ರಹ್ಮಕುಂಭಾಭಿಷೇಕ ಸಂಪನ್ನ

ಉಡುಪಿ: ಉದ್ಯಾವರ ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಬ್ರಹ್ಮ ಕುಂಭಾಭಿಷೇಕವು ಮೇ 21ರಂದು ಸಂಪನ್ನಗೊಂಡಿತು. ಗೌರವಾಧ್ಯಕ್ಷರಾದ ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು, ಅಧಮರು ಮಠದ ಶ್ರೀ ಈಶ ಪ್ರಿಯತೀರ್ಥ ಶ್ರೀಪಾದರು, ವೇ|ಮೂ|ಪುತ್ತೂರು ಶ್ರೀ ತಂತ್ರಿ, ಕುತ್ಪಾಡಿ ಬಾಲಕೃಷ್ಣ ಭಟ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡಿದ್ದು, ಮಹಾಪೂಜೆ ಬಳಿಕ ಸುಮಾರು ಏಳು ಸಾವಿರ ಮಂದಿ ಭಕ್ತರು ಅನ್ನ ಸಂರ್ಪಣೆಯಲ್ಲಿ ಪಾಲ್ಗೊಂಡರು. ಸಂಜೆ ರಂಗ ಪೂಜೆ, ಬಲಿ ಉತ್ಸವವು ಜರುಗಿತು. ದೇವಾಲಯದ ಸುತ್ತುಪೌಳಿ ಮತ್ತು […]