‘ದಿ ಕೇರಳ ಸ್ಟೋರಿ’ ಬಾಕ್ಸ್ ಆಫೀಸಿನಲ್ಲಿ ದಾಖಲೆಯ ಕಲೆಕ್ಷನ್..

‘ದಿ ಕೇರಳ ಸ್ಟೋರಿ’ ಬಾಕ್ಸ್ ಆಫೀಸಿನಲ್ಲಿ ದಾಖಲೆ ಕಲೆಕ್ಷನ್ ಕಲೆ ಹಾಕುತ್ತಿದೆ. ರಿಲೀಸ್ ಆದ 7 ದಿನಕ್ಕೆ ಬರೋಬ್ಬರಿ 80 ಕೋಟಿ ರೂ. ಬಾಚುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದೆ. ಅನೇಕ ಸಂಘಟನೆಗಳು ಸಿನಿಮಾವನ್ನು ಉಚಿತವಾಗಿ ತೋರಿಸುವ ಮೂಲಕ ಬಾಕ್ಸ್ ಆಫೀಸಿಗೆ ಆದಾಯ ಹರಿದು ಬರುವಂತೆ ಮಾಡುತ್ತಿದ್ದಾರೆ. ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನಲ್ಲಿ ನಿಷೇಧ ಹೇರಿದ್ದರೂ, ಸ್ವತಃ ಕೇರಳದಲ್ಲೇ ಸಿನಿಮಾ ಪ್ರದರ್ಶನಕ್ಕೆ ನಾನಾ ಅಡತಡೆಗಳನ್ನು ಒಡ್ಡಿದ್ದರೂ ಅದು ಹೇಗೆ ಐದೇ ದಿನಕ್ಕೆ ಐವತ್ತು ಕೋಟಿ ಕಲೆಕ್ಷನ್ ಆಗೋಕೆ […]
ಹಣ್ಣುಗಳ ‘ರಾಜ’ ಮಾವಿನ ಹಣ್ಣಿನಲ್ಲಿದೆ ಅನೇಕ ಆರೋಗ್ಯ ಪ್ರಯೋಜನಗಳು

ಹಣ್ಣುಗಳ ರಾಜನೆಂದೇ ಖ್ಯಾತಿವೆತ್ತ ಮಾವು ನೋಡಲು ಸುಂದರ, ತಿನ್ನಲು ರುಚಿಕರ. ಮಾತ್ರವಲ್ಲ, ಮಾವಿನ ಹಣ್ಣಿನ ಆರೋಗ್ಯ ಪ್ರಯೋಜನಗಳೂ ಒಂದೆರಡಲ್ಲ. ಆಮ್ರಫಲ, ಆಮ್, ಮಾವು ಎಂದು ಕರೆಯಲ್ಪಡುವ ಈ ಹಣ್ಣಿನಲ್ಲಿರುವ ಆರೋಗ್ಯ ಪ್ರಯೋಜನಗಳಿಂದಾಗಿಯೆ ಇದನ್ನು ಹಣ್ಣುಗಳ ರಾಜ ಎಂದು ಕರೆಯಲಾಗುತ್ತದೆ. ಮಾವು ಉಷ್ಣವಲಯದ ಮರವಾಗಿದ್ದು ಇದರ ವೈಜ್ಞಾನಿಕ ಹೆಸರು ಮ್ಯಾಂಗಿಫೆರಾ ಇಂಡಿಕಾ. ಇದು ಈಶಾನ್ಯ ಭಾರತ, ಬಾಂಗ್ಲಾದೇಶ ಮತ್ತು ವಾಯುವ್ಯ ಮ್ಯಾನ್ಮಾರ್ ಮೂಲದ ಸಸ್ಯವಾಗಿದೆ. ಭಾರತದಲ್ಲಿ ಬೆಳೆದ ಮಾವಿಗೆ ಪ್ರಪಂಚದಾದ್ಯಂತ ಬೇಡಿಕೆ ಇದೆ. ಮಾವಿನ ಹಣ್ಣಿನ ಆರೋಗ್ಯ ಪ್ರಯೋಜನಗಳು […]
ಕಾರ್ಕಳ: ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡ ನ್ಯೂ ಪವನ್ ಜುವೆಲ್ಲರ್ಸ್ ಶುಭಾರಂಭ

ಕಾರ್ಕಳ: ಮೇ.12 ಶುಕ್ರವಾರದಂದು ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರು, ಪೀಠಾಧೀಶ್ವರರು, ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ, ಪಡುಕುತ್ಯಾರು ಇವರ ದಿವ್ಯ ಉಪಸ್ಥಿತಿಯಲ್ಲಿ ನ್ಯೂ ಪವನ್ ಜುವೆಲ್ಲರ್ಸ್ ನೂತನ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದೆ. ಮುಖ್ಯ ಅತಿಥಿಗಳು: ಶ್ರೀ ವಿ. ಸುನಿಲ್ ಕುಮಾರ್, ಶಾಸಕರು, ಕಾರ್ಕಳ ದಿನಾಂಕ: 12-05-2023ನೇ ಶುಕ್ರವಾರ ಬೆಳಿಗ್ಗೆ ಗಂಟೆ 7.45 ಸ್ಥಳ: ಸದಾಶಿವ ಟವರ್, ಅನಂತಶಯನ ರಸ್ತೆ, ಕಾರ್ಕಳ ಈ ಶುಭ ಸಮಾರಂಭಕ್ಕೆ ತಮ್ಮನ್ನು ಹಾರ್ದಿಕವಾಗಿ ಆಮಂತ್ರಿಸುವ, ಪವನ್ […]
ಅಳದಂಗಡಿ ಬೃಹತ್ ಸಾರ್ವಜನಿಕ ಸಭೆ: ಅಣ್ಣಾಮಲೈ ಭಾಗಿ

ಬೆಳ್ತಂಗಡಿ: ವಿಧಾನ ಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮತಪ್ರಚಾರವು ಬಹಳ ಭರದಿಂದ ಸಾಗುತಿದೆ. ಇದೀಗ ಭಾರತೀಯ ವಿಧಾನ ಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಹರೀಶ್ ಪೂಂಜ ಅವರು ಸ್ವರ್ಧಿಸುತ್ತಿದ್ದು. ಇಂದು ಸಂಜೆ 4 ಗಂಟೆಗೆ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ರಾಜ್ಯ ಚುನಾವಣಾ ಸಹ ಉಸ್ತುವಾರಿ ಶ್ರೀ ಕೆ. ಅಣ್ಣಾಮಲೈ ಅವರು ಅಳದಂಗಡಿಯಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಕಾಪು; ಮನೆಗೊಂದರಂತೆ ಉದ್ಯೋಗ ಒದಗಿಸಿಕೊಡುವ ಮಹತ್ವಾಕಾಂಕ್ಷಿ ಯೋಜನೆಗಳಿಗೆ ಚಾಲನೆ: ಸೊರಕೆ

ಕಾಪು : ಸಣ್ಣ ಕೈಗಾರಿಕೆಗೆ ಒತ್ತು ಕೊಟ್ಟು ಮನೆಗೊಬ್ಬರಿಗೆ ಉದ್ಯೋಗ ನೀಡುವ ಮಹತ್ವಾಕಾಂಕ್ಷಿ ಯೋಜನೆಗಳಿಗೆ ಶಾಸಕನಾದ ಕೂಡಲೇ ಚಾಲನೆ ನೀಡಲಾಗುವುದು ಎಂದು ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ. ಮಣಿಪಾಲ ಟೆಕ್ನಾಲಜಿ ಸಮೂಹ ಸಂಸ್ಥೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಅವರು ಕಾರ್ಮಿಕರೇ ಈ ದೇಶದ ನಿಜವಾದ ಸಂಪತ್ತು. ಮಣಿಪಾಲ ಗ್ರೂಫ್ಸ್ ತಾಂತ್ರಿಕ ಸಂಸ್ಥೆಗಳು ದೇಶ ಮಾತ್ರವಲ್ಲದೇ ಪ್ರಪಂಚದಾದ್ಯಂತ ಸುದ್ಧಿಯಲ್ಲಿವೆ. ಗ್ರಾಮೀಣ ಭಾಗದ ಸಾವಿರಾರು ಮಂದಿಗೆ ಉದ್ಯೋಗ ನೀಡುವ ಮಹತ್ಕಾರ್ಯ ಮಣಿಪಾಲ ಸಮೂಹ […]