ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ಫೆ.14ರಂದು ಶ್ರೀ ಮನ್ಮಹಾರಥೋತ್ಸವ

ಬ್ರಹ್ಮಾವರ: ಮಂದಾರ್ತಿ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಫೆಬ್ರವರಿ 13 ಕುಂಭ ಸಂಕ್ರಮಣದಂದು ರಾತ್ರಿ ಕೆಂಡೆಸೇವೆ, 14ರಂದು ಶ್ರೀ ಮನ್ಮಹಾರಥೋತ್ಸವ, 15ರಂದು ರಾತ್ರಿ ಕೆರೆ ದೀಪೋತ್ಸವ, ಪಲ್ಲಕ್ಕಿ ಉತ್ಸವ, ಅಷ್ಟವಧಾನ ಸೇವೆ ನಡೆಯಲಿದ್ದು, ಆನಂತರ ಐದು ಮೇಳಗಳಿಂದ ಸೇವೆ ಆಟ ನಡೆಯಲಿದೆ. ದೇವಸ್ಥಾನದಲ್ಲಿ ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗಿ ಹೆಚ್ಚುತ್ತಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಕೆಂಡಸೇವೆ ಈ ಬಾರಿ ಮಾಮೂಲಿಗಿಂತ ಬೇಗನೆ ಪ್ರಾರಂಭಗೊಳ್ಳಲಿದೆ. ರಾತ್ರಿ 7ರಿಂದ ಸೇವಾ ಚೀಟಿ ನೀಡಲು ಪ್ರಾರಂಭವಾಗಲಿದ್ದು, ರಾತ್ರಿ 9ಕ್ಕೆ ದರ್ಶನ ಸೇವೆ ಮುಗಿದ […]

ಮಲ್ಪೆ ವಡಭಾಂಡ ಬಲರಾಮ ದೇವಸ್ಥಾನ ಪುನಃ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಲೋಕಾರ್ಪಣೆ 

ಮಲ್ಪೆ: ಇಲ್ಲಿನ ಇತಿಹಾಸ ಪ್ರಸಿದ್ದ ವಡಭಾಂಡ ಬಲರಾಮ ದೇವಸ್ಥಾನದ ಪುನಃ ಪ್ರತಿಷ್ಠೆ ಬಹ್ಮಕಲಶೋತ್ಸವದ ಅಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಫೆ.11 ರಂದು ದೇವಸ್ಥಾನದಲ್ಲಿ ನಡೆಯಿತು. ಶಾಸಕ ಯಶ್‌ಪಾಲ್ ಸುವರ್ಣ ಅವರು ಅಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಗ್ರಾಮದ ಭಕ್ತರ ಒಮ್ಮತಡಾ ಸಹಕಾರದಿಂದ ಎಲ್ಲ ಕಾರ್ಯಕ್ರಮಗಳು ಯಶಸ್ವಿಯಾಗಿ ಸಾಗಲಿ ಎಂದರು. ಬ್ರಹ್ಮಕಲಶೋತ್ಸವ ಸಮಿತಿಯ ಸಮಿತಿಯ ಅಧ್ಯಕ್ಷ ಸಾಧು ಸಾಲ್ಯಾನ್‌, ಗೌರವಾಧ್ಯಕ್ಷ ಆನಂದ ಪಿ. ಸುವರ್ಣ, ಹರಿಯಪ್ಪ ಕೋಟ್ಯಾನ್, ಕಾರ್ಯಾಧ್ಯಕ್ಷ ನಾಗರಾಜ್ ಮೂಲಿಗಾರ್, ಪ್ರಧಾನಕಾರ್ಯದರ್ಶಿ ಪ್ರಕಾಶ್ ಜಿ. ಕೊಡವೂರು, ಕೋಶಾಧಿಕಾರಿ ಟಿ. […]

14ನೇ ವರ್ಷದ ಜಪ್ಪಿನಮೊಗರು “ಜಯ – ವಿಜಯ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಮಂಗಳೂರು: ಫೆ.10 ರಂದು ನಡೆದ 14ನೇ ವರ್ಷದ ಜಪ್ಪಿನಮೊಗರು “ಜಯ – ವಿಜಯ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ: ಕನೆಹಲಗೆ: 06 ಜೊತೆ ಅಡ್ಡಹಲಗೆ: 05 ಜೊತೆ ಹಗ್ಗ ಹಿರಿಯ: 13 ಜೊತೆ ನೇಗಿಲು ಹಿರಿಯ: 28 ಜೊತೆ ಹಗ್ಗ ಕಿರಿಯ: 16 ಜೊತೆ ನೇಗಿಲು ಕಿರಿಯ: 70 ಜೊತೆ ಒಟ್ಟು ಕೋಣಗಳ ಸಂಖ್ಯೆ: 138 ಜೊತೆ ಕನೆಹಲಗೆ: (ಸಮಾನ ಬಹುಮಾನ) ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ ಮುಟ್ಟಿದವರು: […]

ಫೆಬ್ರವರಿ 11: ಶ್ರೀಕ್ಷೇತ್ರ ಕುದ್ರೋಳಿ ಶ್ರೀ ಭಗವತೀ ದೇವಸ್ಥಾನದಲ್ಲಿ ‘ಚಂದ್ರಹಾಸ’ ಮತ್ತು ‘ಶ್ರೀನಿವಾಸ ಕಲ್ಯಾಣ’ ಕಾಲಮಿತಿ ಯಕ್ಷಗಾನ ಪ್ರದರ್ಶನ

ಮಂಗಳೂರು: ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನ ಮತ್ತು ರಂಗಸ್ಥಳ ಮಂಗಳೂರು (ರಿ) ಇವರ ಆಶ್ರಯದಲ್ಲಿ ಶ್ರೀಕ್ಷೇತ್ರ ಕುದ್ರೋಳಿ ಭಗವತೀ ದೇವಸ್ಥಾನದ ಪ್ರೋತ್ಸಾಹದೊಂದಿಗೆ ಮಂಗಳೂರಿನಲ್ಲಿ ದ್ವಿತೀಯ ಬಾರಿಗೆ ಇದೇ ಬರುವ ಫೆಬ್ರವರಿ 11 ಭಾನುವಾರ ದಂದು ಸಂಜೆ 4.30 ರಿಂದ ರಾತ್ರಿ 10 ರವರೆಗೆ ಬಡಗು ತಿಟ್ಟಿನ ಪ್ರಸಿದ್ಧ ಯಕ್ಷಗಾನ ಮೇಳವಾಗಿರುವ ಶ್ರೀಕ್ಷೇತ್ರ ಹಟ್ಟಿಯಂಗಡಿ ಮೇಳ, ಇವರಿಂದ ಕಾಲಮಿತಿ ಯಕ್ಷಗಾನ ಪ್ರದರ್ಶನವಾಗಿ ‘ಚಂದ್ರಹಾಸ’ ಮತ್ತು ‘ಶ್ರೀನಿವಾಸ ಕಲ್ಯಾಣ’ ಎಂಬ ಕಥಾನಕ ಪ್ರದರ್ಶನವು ಕೊಡಿಯಾಲ್ ಬೈಲ್ ಕುದ್ರೋಳಿ ಶ್ರೀ ಭಗವತೀ […]

ಉಡುಪಿ: ಇಂದು ಮಿಷನ್ ಆಸ್ಪತ್ರೆಯ ಹೊಸ ಕ್ಯಾಂಪಸ್ “ಲೋಂಬಾರ್ಡ್ ಕಾಲೇಜ್ ಆಫ್ ಪ್ಯಾರಾ ಮೆಡಿಕಲ್ ಆ್ಯಂಡ್ ಅಲೈಡ್ ಹೆಲ್ತ್ ಸೈಯನ್ಸ್” ಉದ್ಘಾಟನೆ.

ಉಡುಪಿ, ಫೆ.10: ಲೋಂಬಾರ್ಡ್ ಮೆಮೋರಿಯಲ್ (ಮಿಷನ್) ಆಸ್ಪತ್ರೆಯ ಹೊಸ ಕ್ಯಾಂಪಸ್ “ಲೋಂಬಾರ್ಡ್ ಕಾಲೇಜ್ ಆಫ್ ಪ್ಯಾರಾ ಮೆಡಿಕಲ್ ಆ್ಯಂಡ್ ಅಲೈಡ್ ಹೆಲ್ತ್ ಸೈಯನ್ಸ್” ಫೆ.10 ರಂದು ಸಂಜೆ 4 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ನೂತನ ಸಂಸ್ಥೆಯನ್ನು ರೆ.ಫಾ.ಹೇಮಚಂದ್ರ ಕುಮಾರ್ ಬಿಷಪ್ ಅವರು ಉದ್ಘಾಟಿಸಲಿದ್ದಾರೆ. ಲೊಂಬಾರ್ಡೋ ಮೆಮೋರಿಯಲ್ ಆಸ್ಪತ್ರೆಯ ನಿರ್ದೇಶಕ ಡಾ.ಸುನಿಲ್ ಜತ್ತನ್ನ ಅಧ್ಯಕ್ಷತೆ ವಹಿಸಲಿದ್ದಾರೆ. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಮಾಜಿ ಶಾಸಕ ವಿನಯ್ ಕುಮಾರ್ ಸೊರಕೆ, ಜಿಲ್ಲಾ ಸರ್ಜನ್ ಡಾ.ವೀಣಾ ಕುಮಾರಿ ಎಂ, ಕಿನ್ನಿಮುಲ್ಕಿ ವಾರ್ಡ್‍ನ […]