ಮೇ.17ರಿಂದ 24: ಇತಿಹಾಸ ಪ್ರಸಿದ್ಧ ಉದ್ಯಾವರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಸುತ್ತುಪೌಳಿ ಸಮರ್ಪಣೆ, ಬ್ರಹ್ಮಕುಂಭಾಭಿಷೇಕ

ಉಡುಪಿ: ಇತಿಹಾಸ ಪ್ರಸಿದ್ಧ ಉದ್ಯಾವರದ ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಇದೇ ಬರುವ ಮೇ.17ರಿಂದ 24ರ ವರೆಗೆ ನವೀಕೃತ ತಾಮ್ರ ಸುತ್ತುಪೌಳಿ ಸಮರ್ಪಣೆ, ಬ್ರಹ್ಮಕುಂಭಾಭಿಷೇಕ ಹಾಗೂ ರಾಶಿಪೂಜಾ ಮಹೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಕೆ. ಉದಯಕುಮಾರ್ ಶೆಟ್ಟಿ ಹೇಳಿದರು. ಇಂದು ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ.19ರಂದು ಮಧ್ಯಾಹ್ನ 3.30ಕ್ಕೆ ಅಂಬಲಪಾಡಿ ದೇವಸಾನದಿಂದ ಹೊರಕಾಣಿಕೆ ಮೆರವಣಿಗೆಗೆ ಆರಂಭಗೊಳ್ಳಲಿದೆ. ಅಂಬಲಪಾಡಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬಿ.ವಿಜಯ ಬಲ್ಲಾಳ್ ಅವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಬಳಿಕ […]
ನಳಿನ್ ಕುಮಾರ್ ಹಾಗೂ ಡಿ.ವಿ. ಸದಾನಂದ ಗೌಡ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಪ್ರತೀಕಾರ ತೆಗೆದುಕೊಂಡ ಕೆಲಸ ನಡೆದಿದೆ. ಪುತ್ತೂರು ಬಸ್ ನಿಲ್ದಾಣದ ಬಳಿ ನಳಿನ್ ಕುಮಾರ್ ಹಾಗೂ ಡಿ.ವಿ ಗೆ ಶ್ರದ್ಧಾಂಜಲಿ ಕೋರಲಾಗಿದೆ. ಜತೆಗೆ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಲಾದ ಬಗ್ಗೆ ವರದಿಯಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರ ಸಂಘ ಪರಿವಾರದ ಗಟ್ಟಿ ನೆಲ. ಇಲ್ಲಿ ಬಿಜೆಪಿ ಸಶಕ್ತವಾಗಿದೆ. ಪುತ್ತೂರಿನಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಾಣಲು ನೀವೇ ಕಾರಣ ಎಂಬ ಒಕ್ಕಣೆಯಿರುವ ಬ್ಯಾನರ್ ಅನ್ನು ಇದೀಗ ಅಳವಡಿಸಲಾಗಿದೆ. ಈ ಮೂಲಕ ಯಾರು […]
ನಾಲ್ಕನೇ ಬಾರಿ ಶಾಸಕರಾಗಿ ಆಯ್ಕೆಯಾದ ವಿ.ಸುನಿಲ್ ಕುಮಾರ್ ಅವರನ್ನು ಜೋಡುರಸ್ತೆಯಲ್ಲಿ ಅದ್ದೂರಿಯ ಸ್ವಾಗತ..

ಕಾರ್ಕಳ: ಕರ್ನಾಟಕ ಚುನಾವಣಾ ಫಲಿತಾಂಶದಲ್ಲಿ ವಿ.ಸುನೀಲ್ ಕುಮಾರ್ ಅವರು ನಾಲ್ಕನೇ ಬಾರಿ ಶಾಸಕನಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಕಾರ್ಕಳ ಕೇಂದ್ರ ಭಾಗಕ್ಕೆ ಪಾದಸ್ವರ್ಶ ಗೈಯುತ್ತಿದ್ದಂತೆ ಜೋಡುರಸ್ತೆಯ ಪೂರ್ಣಿಮಾ ಸಿಲ್ಕ್ಸ್ ಮುಂಭಾಗದಲ್ಲಿ ಕಾರ್ಕಳದ ಜನತೆ ಅವರನ್ನು ಅದ್ದೂರಿಯ ಸ್ವಾಗತ ಮಾಡಲಾಯಿತು. ಜೋಡುರಸ್ತೆಯ ಪೂರ್ಣಿಮಾ ಸಿಲ್ಕ್ಸ್ ಸಂಸ್ಥೆಯ ಪಾಲುದಾರರಾದ ರವಿಪ್ರಕಾಶ್ ಹಾಗೂ ಕಿರಣ ರವಿಪ್ರಕಾಶ್ ಪ್ರಭು ಮತ್ತು ಪ್ರಜ್ವಲ್ ಪ್ರಭು ಇವರು ಆತ್ಮೀಯವಾಗಿ ಶಾಸಕ ಸುನೀಲ್ ಕುಮಾರ್ ಅವರನ್ನು ಸ್ವಾಗತಿಸಿ ಬರಮಾಡಿಕೊಂಡರು. ಶುದ್ಧ ರೇಷ್ಮೆ ಶಾಲು ಹೊದಿಸಿ, ಹೂಮಾಲೆಯನ್ನು […]
ಜಗದ್ಗುರು ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ದಿವ್ಯಸಾನಿಧ್ಯದಲ್ಲಿ ವಸಂತ ವೇದ ಶಿಬಿರದ ಸಮಾರೋಪ ಕಾರ್ಯಕ್ರಮ

ಉಡುಪಿ: ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಕಟಪಾಡಿ, ಪಡುಕುತ್ಯಾರು ಇದರ ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯಸಾನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ವಸಂತ ವೇದ ಶಿಬಿರ 2023 ಅನ್ನು ಮೇ 6 ರಿಂದ 14 ರ ವರೆಗೆ ಶ್ರೀ ಸರಸ್ವತೀ ಸತ್ಸಂಗ ಮುಂದಿರ ಪಡುಕುತ್ಯಾರು ಇಲ್ಲಿ ಆಯೋಜಿಸಲಾಗಿದೆ. ಶಿಬಿರ ಉದ್ಘಾಟನೆಯು ಮೇ 7 ರಂದು ಜರುಗಿದ್ದು,ಸಮಾರೋಪವು ಮೇ 14 ರಂದು ಜಗದ್ಗುರುಗಳ ಪಟ್ಟಾಭಿಷೇಕ ವರ್ಧಂತಿ ಸಮಾರಂಭದೊಂದಿಗೆ ಸಂಪನ್ನವಾಗಲಿದೆ. ವಸಂತ ವೇದ […]
‘ದಿ ಕೇರಳ ಸ್ಟೋರಿ’ ಬಾಕ್ಸ್ ಆಫೀಸಿನಲ್ಲಿ ದಾಖಲೆಯ ಕಲೆಕ್ಷನ್..

‘ದಿ ಕೇರಳ ಸ್ಟೋರಿ’ ಬಾಕ್ಸ್ ಆಫೀಸಿನಲ್ಲಿ ದಾಖಲೆ ಕಲೆಕ್ಷನ್ ಕಲೆ ಹಾಕುತ್ತಿದೆ. ರಿಲೀಸ್ ಆದ 7 ದಿನಕ್ಕೆ ಬರೋಬ್ಬರಿ 80 ಕೋಟಿ ರೂ. ಬಾಚುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸಿದೆ. ಅನೇಕ ಸಂಘಟನೆಗಳು ಸಿನಿಮಾವನ್ನು ಉಚಿತವಾಗಿ ತೋರಿಸುವ ಮೂಲಕ ಬಾಕ್ಸ್ ಆಫೀಸಿಗೆ ಆದಾಯ ಹರಿದು ಬರುವಂತೆ ಮಾಡುತ್ತಿದ್ದಾರೆ. ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನಲ್ಲಿ ನಿಷೇಧ ಹೇರಿದ್ದರೂ, ಸ್ವತಃ ಕೇರಳದಲ್ಲೇ ಸಿನಿಮಾ ಪ್ರದರ್ಶನಕ್ಕೆ ನಾನಾ ಅಡತಡೆಗಳನ್ನು ಒಡ್ಡಿದ್ದರೂ ಅದು ಹೇಗೆ ಐದೇ ದಿನಕ್ಕೆ ಐವತ್ತು ಕೋಟಿ ಕಲೆಕ್ಷನ್ ಆಗೋಕೆ […]