ಲೋಕಕಲ್ಯಾಣಕ್ಕಾಗಿ ಪಂಚನಬೆಟ್ಟು ಶ್ರೀ ದುರ್ಗಾಪರಮೇಶ್ವರಿ ಯಜ್ಞ ಶಾಲೆಯಲ್ಲಿ ಆಶ್ಲೇಷಾ ಬಲಿ, ನವ ಚಂಡಿಕಾಯಾಗ: ಶಿಕ್ಷಕರನ್ನು ಗೌರವಿಸಿದ್ದು ಶ್ರೇಷ್ಠ ಕಾರ್ಯ: ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ

ಹಿರಿಯಡ್ಕ: ಅಂಗನವಾಡಿಯಿಂದ ಹಿಡಿದು ಸ್ನಾತಕೋತ್ತರದ ತನಕದ ಶಿಕ್ಷಕರನ್ನು ಗೌರವಿಸಿದ್ದು, ಶ್ರೇಷ್ಠ ಕೆಲಸ. ನಾನು ಯತಿ ದೀಕ್ಷೆ ಪಡೆದ ನಂತರ ನೋಡಿದ ಅದ್ಭುತ ಕಾರ್ಯಕ್ರಮಗಳಲ್ಲಿ ಇದೂ ಒಂದು. ಲೋಕಕಲ್ಯಾಣಕ್ಕಾಗಿ ಆಶ್ಲೇಷಾ ಬಲಿ, ನವ ಚಂಡಿಕಾಯಾಗ ವಿದ್ವಾನ್ ಅಜಿತ್ ಆಚಾರ್ಯ ಪಂಚನಬೆಟ್ಟು ನೇತೃತ್ವದಲ್ಲಿ ನಡೆಯುತ್ತಿರುವುದು ಮತ್ತೊಂದು ವಿಶೇಷತೆಯಾಗಿದೆ. ನಾಡಿಗೆ ಶುಭವಾಗಲಿ ಎಂದು ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಹೇಳಿದರು. ಲೋಕ ಕಲ್ಯಾಣಕ್ಕಾಗಿ ಪಂಚನಬೆಟ್ಟು ಶ್ರೀ ದುರ್ಗಾಪರಮೇಶ್ವರಿ ಯಜ್ಞ ಶಾಲೆಯಲ್ಲಿ ನಡೆದ ಆಶ್ಲೇಷಾ ಬಲಿ, ನವ ಚಂಡಿಕಾಯಾಗದಲ್ಲಿ […]
ಸೂರ್ಯಾಸ್ತದ ನಂತರ ಪಶ್ಚಿಮ ಆಗಸದಲ್ಲಿ ಬೆರಗುಗೊಳಿಸುವ ದೃಶ್ಯ: ಮಾರ್ಚ್ 1 ರಂದು ಗುರು ಮತ್ತು ಶುಕ್ರ ಸಂಯೋಗ!

ಸೂರ್ಯಾಸ್ತದ ನಂತರ ಬೆರಗುಗೊಳಿಸುವ ಶುಕ್ರ ಗ್ರಹ ಮತ್ತು ಪ್ರಕಾಶಮಾನ ಗುರು ಗ್ರಹ ಪರಸ್ಪರ ಹತ್ತಿರ ಬರುವುದನ್ನು ಪಶ್ಚಿಮ ಆಗಸದಲ್ಲಿ ಕಾಣಬಹುದಾಗಿದೆ. ಸೂರ್ಯಾಸ್ತದ ಬಳಿಕ ಗುರು ಮತ್ತು ಶುಕ್ರಗ್ರಹಗಳು ಹತ್ತಿರದಲ್ಲಿರುವಂತೆ ಕಂಡುಬರುತ್ತದೆ ಮತ್ತು ಸುಮಾರು 2 ಗಂಟೆಗಳ ನಂತರ ಗ್ರಹಗಳು ದಿಗಂತದಲ್ಲಿ ಕಣ್ಮರೆಯಾಗುತ್ತವೆ. ಮಾರ್ಚ್ 1 ಶುಕ್ರವು ಗುರುಗ್ರಹದಿಂದ ಆಕಾಶದ ಮೇಲೆ 0.5 ಡಿಗ್ರಿಗಳಷ್ಟು ಹಾದುಹೋಗುತ್ತದೆ. ಎರಡೂ ಪ್ರಕಾಶಮಾನವಾದ ಗ್ರಹಗಳಾದರೂ ಶುಕ್ರವು ಗುರುವಿಗಿಂತ ಹೆಚ್ಚು ಪ್ರಕಾಶಮಾನವಾಗಿರುತ್ತದೆ. ಸೂರ್ಯ ಮತ್ತು ಚಂದ್ರರ ಬಳಿಕ ಆಕಾಶದಲ್ಲಿ ಅತ್ಯಂತ ಪ್ರಕಾಶಮಾನವಾಗಿ ಹೊಳೆಯುವ ಗ್ರಹ […]
ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಯುವ ಸಹಕಾರಿ ಧುರೀಣ ಯಶ್ ಪಾಲ್ ಎ ಸುವರ್ಣ ಅವರಿಗೆ ಸಾರ್ವಜನಿಕ ಅಭಿನಂದನೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಮಂಗಳೂರು ವತಿಯಿಂದ ಅವಿಭಜಿತ ದಕ ಜಿಲ್ಲೆಯ ವಿವಿಧ ಸಹಕಾರಿ ಸಂಘಗಳ ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಯುವ ಸಹಕಾರಿ ಧುರೀಣ ಸಾಮಾಜಿಕ, ಧಾರ್ಮಿಕ, ರಾಜಕೀಯ ಮುಂದಾಳು ಯಶಪಾಲ್ ಎ ಸುವರ್ಣ ಅವರಿಗೆ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಶಾಲಿನಿ ಡಾ|ಜಿ.ಶಂಕರ್ ತೆರೆದ ಸಭಾಂಗಣದಲ್ಲಿ ಇಂದು ಸಾರ್ವಜನಿಕ ಅಭಿನಂದನೆಯನ್ನು ಮಾಡಲಾಯಿತು. ಅಭಿನಂದನೆ ನೆರವೇರಿಸಿ ಮಾತನಾಡಿದ ನಾಡೋಜ ಡಾ. ಜಿ ಶಂಕರ್ ಅವರು, […]
1 ಶತಕೋಟಿ ಹಣ್ಣಿನ ಮರಗಳನ್ನು ಬೆಳೆಸಿ ಜಾಗತಿಕ ತಾಪಮಾನ ಕಡಿಮೆಗೊಳಿಸಲು ನಾಗಾಲ್ಯಾಂಡ್ ಪಣ: ಫ್ರುಟ್ ಹಬ್ ಆಫ್ ಇಂಡಿಯಾ ಆಗುವತ್ತ ಈಶಾನ್ಯರಾಜ್ಯ

ಭಾರತದ ಈಶಾನ್ಯ ರಾಜ್ಯವಾದ ನಾಗಾಲ್ಯಾಂಡ್ ಸ್ಥಳೀಯವಾಗಿ ಬೆಳೆಯುವ ಹಣ್ಣುಗಳಿಗೆ ಹೆಸರುವಾಸಿಯಾಗಿದೆ. ಸ್ಥಳೀಯವಾಗಿ ಬೆಳೆಯುವ ವಿಲಕ್ಷಣ ಹಣ್ಣುಗಳು ಅತ್ಯಂತ ರುಚಿಯಾಗಿದ್ದು ಅಂತರರಾಷ್ಟ್ರೀಯ ಮಾರುಕಟ್ಟೆಯನ್ನು ಆಕರ್ಷಿಸುತ್ತವೆ ಮತ್ತು ರೈತರನ್ನು ಸಬಲೀಕರಣಗೊಳಿಸುತ್ತವೆ. 2019 ರಲ್ಲಿ ಪ್ರಾರಂಭವಾದ ‘ಟ್ರೀಸ್ ಫಾರ್ ವೆಲ್ತ್’ ನ ಮಹತ್ವಾಕಾಂಕ್ಷೆಯ ಮಿಷನ್ ಅಡಿಯಲ್ಲಿ, ನಾಗಾಲ್ಯಾಂಡ್ನ ಎನ್ಜಿಒ ‘ದ ಎಂಟಪ್ರ್ಯೂನರ್ಸ್ ಅಸೋಸಿಯೇಟ್ಸ್ ‘(ಟಿಇಎ) ರಾಜ್ಯವನ್ನು ‘ಫ್ರೂಟ್ ಹಬ್ ಆಫ್ ಇಂಡಿಯಾ’ ಆಗಿ ಪರಿವರ್ತಿಸಲು ಪಣ ತೊಟ್ಟಿದೆ. ಇದು 2025 ರ ವೇಳೆಗೆ 2 ಮಿಲಿಯನ್ ಹಣ್ಣಿನ ಮರಗಳನ್ನು ನೆಡುವ ಗುರಿಯನ್ನು […]
ಜ.22: ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನ ಮತ್ತು ಕಲಾಸ್ತಕರ ಬಳಗದ ವತಿಯಿಂದ ಕಾಲಮಿತಿ ಯಕ್ಷಗಾನ ಪ್ರದರ್ಶನ

ಮಂಗಳೂರು: ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನ ಮತ್ತು ಕಲಾಸ್ತಕರ ಬಳಗ, ಕೊಡಿಯಾಲ್ ಬೈಲ್ ಮಂಗಳೂರು ಇವರ ಆಶ್ರಯದಲ್ಲಿ ಶ್ರೀಕ್ಷೇತ್ರ ಕುದ್ರೋಳಿ ಭಗವತೀ ದೇವಸ್ಥಾನ ಮತ್ತು ರಂಗಸ್ಥಳ ಮಂಗಳೂರು ಇವರ ಪ್ರೋತ್ಸಾಹದೊಂದಿಗೆ ಮಂಗಳೂರಿನಲ್ಲಿ ಪ್ರಥಮ ಬಾರಿಗೆ ಇದೇ ಬರುವ ಜನವರಿ ೨೨ ರಂದು ಸಂಜೆ ೪ ರಿಂದ ರಾತ್ರಿ ೧೦ ರವರೆಗೆ ಬಡಗು ತಿಟ್ಟಿನ ಪ್ರಸಿದ್ಧ ಯಕ್ಷಗಾನ ಮೇಳವಾಗಿರುವ ಶ್ರೀಕ್ಷೇತ್ರ ಹಟ್ಟಿಯಂಗಡಿ ಮೇಳ, ಇವರಿಂದ ಕಾಲಮಿತಿ ಯಕ್ಷಗಾನ ಪ್ರದರ್ಶನವಾಗಿ ‘ಕೃಷ್ಣ ಗಾರುಡಿ’ ಮತ್ತು ‘ಜಾಂಬವತಿ’ ಎಂಬ ಕಥಾನಕ ಪ್ರದರ್ಶನವು […]