ಮಾನವ ಕಳ್ಳಸಾಗಣೆ ಶಂಕೆ : 303 ಭಾರತೀಯರಿದ್ದ ವಿಮಾನ ಮಾರ್ಗ ಮಧ್ಯೆ ಭೂಸ್ಪರ್ಶ

ವಾಟ್ರಿ, ಫ್ರಾನ್ಸ್‌: ವಿಮಾನದಲ್ಲಿ ಸುಮಾರು 300 ಮಂದಿ ಭಾರತೀಯರು ಪ್ರಯಾಣಿಸುತ್ತಿದ್ದರು. ಯುಎಇಯಿಂದ ಹೊರಟಿದ್ದ ವಿಮಾನ ರೊಮಾನಿಯಾದ ಕಂಪನಿ ಲೆಜೆಂಡ್‌ ಏರ್‌ಲೈನ್ಸ್‌ಗೆ ಸೇರಿದ ಎ340 ವಿಮಾನವನ್ನು ಖಚಿತ ಮಾಹಿತಿ ಆಧರಿಸಿ ವಾಟ್ರಿ ವಿಮಾನನಿಲ್ದಾಣದಲ್ಲಿ ಇಳಿಸಲಾಗಿದೆ. ನಿಕರಾಗುವಾಗೆ ತೆರಳುತ್ತಿದ್ದ ವಿಮಾನವನ್ನು ಶುಕ್ರವಾರ ಮಾನವ ಕಳ್ಳಸಾಗಾಣೆ ಶಂಕೆ ಮೇರೆಗೆ ತುರ್ತು ಭೂಸ್ಪರ್ಶ ಮಾಡಲಾಗಿದೆ. ವಿಮಾನದಲ್ಲಿ 303 ಮಂದಿ ಭಾರತೀಯ ಪ್ರಜೆಗಳಿದ್ದಾರೆ. ಬಹುಶಃ ಇವರು ಯುಎಇಯಲ್ಲಿ ಕೆಲಸ ಮಾಡುತ್ತಿದ್ದಿರಬೇಕು. ಇವರನ್ನು ಅಮೆರಿಕ ಅಥವಾ ಕೆನಡಾಗೆ ಅಕ್ರಮವಾಗಿ ಪ್ರವೇಶಿಸುವ ಯತ್ನವಾಗಿ ತೆರಳುತ್ತಿದ್ದರು ಎಂದು ಶಂಕಿಸಲಾಗಿದೆ’ […]

ವಿದೇಶಿ ವ್ಯಾಸಂಗಕ್ಕೆ ವಿದ್ಯಾನಿಧಿ ಯೋಜನೆ ವಿಸ್ತರಣೆ : ರೈತರ ಮಕ್ಕಳಿಗೆ ಗುಡ್ ನ್ಯೂಸ್

ಬೆಂಗಳೂರು:ರೈತರ ಮಕ್ಕಳಿಗಾಗಿ ರೂಪಿಸಿದ ವಿದ್ಯಾನಿಧಿ ಯೋಜನೆ ಕಾಲೇಜು ಶಿಕ್ಷಣಕ್ಕೆ ಸೀಮಿತವಾಗಿದೆ. ರೈತರ ಮಕ್ಕಳಿಗಾಗಿ ರೂಪಿಸಿದ ವಿದ್ಯಾನಿಧಿ ಯೋಜನೆಯನ್ನು ವಿದೇಶಿ ವ್ಯಾಸಂಗಕ್ಕೂ ವಿಸ್ತರಿಸಲು ಸರ್ಕಾರ ಚಿಂತನೆ ನಡೆಸಿದೆ. ವಾರ್ಷಿಕ ಕನಿಷ್ಠ 100 ಮಕ್ಕಳಿಗೆ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಸಂಶೋಧನೆ, ಉನ್ನತ ಶಿಕ್ಷಣ ಸೇರಿ ಯಾವುದೇ ವಿವಿಗಳಲ್ಲಿ ವ್ಯಾಸಂಗ ಮಾಡಿದರೂ ರೈತರ ಮಕ್ಕಳಿಗೆ ನೆರವು ನೀಡುವ ಉದ್ದೇಶದಿಂದ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲಾಗುವುದು. ಯೋಜನೆಗೆ ವಾರ್ಷಿಕ 100 ಕೋಟಿ ರೂಪಾಯಿ ಬೇಕಾಗಬಹುದು ಎಂದು ಅಂದಾಜಿಸಿದ್ದು, ಮುಂದಿನ ಬಜೆಟ್ ನಲ್ಲಿ ಘೋಷಣೆಯಾಗುವ […]

ನೆಲಕ್ಕುರುಳಿದ ಕಟ್ಟಡಗಳು,118 ಸಾವು, ನೂರಾರು ಮಂದಿಗೆ ಗಾಯ : ಚೀನಾದಲ್ಲಿ ಪ್ರಬಲ ಭೂಕಂಪ

ಬೀಜಿಂಗ್ (ಚೀನಾ): ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 6.2 ಎಂದು ಅಳೆಯಲಾಗಿದೆ. ಚೀನಾ ಭೂಕಂಪ ನೆಟ್‌ವರ್ಕ್ ಸೆಂಟರ್ (ಸಿಇಎನ್‌ಸಿ) ಪ್ರಕಾರ, ಸೋಮವಾರ ರಾತ್ರಿ 23:59 ಕ್ಕೆ ವಾಯುವ್ಯ ಚೀನಾದ ಗನ್ಸು ಪ್ರಾಂತ್ಯದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಇದಕ್ಕೂ ಮುನ್ನ ಪಾಕಿಸ್ತಾನದಲ್ಲೂ ಪ್ರಬಲ ಭೂಕಂಪನದ ಅನುಭವವಾಗಿತ್ತು. ಸೋಮವಾರ ತಡರಾತ್ರಿ ಚೀನಾದ ಗನ್ಸು ಪ್ರಾಂತ್ಯದಲ್ಲಿ ಪ್ರಬಲ ಭೂಕಂಪನ ಸಂಭವಿಸಿದೆ. ಚೀನಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಸೋಮವಾರ ಮಧ್ಯರಾತ್ರಿ ಸಂಭವಿಸಿದ ಭೂಕಂಪದಲ್ಲಿ ಕನಿಷ್ಠ 118 ಜನರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಮಾಹಿತಿಯ ಪ್ರಕಾರ, […]

ವಾಯುವ್ಯ ಚೀನಾದಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 116 ಸಾವು; 400 ಗಾಯಾಳು

ಬೀಜಿಂಗ್: ವಾಯುವ್ಯ ಚೀನಾದ ದೂರದ ಪರ್ವತ ಪ್ರದೇಶದಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 400 ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಭೂಕಂಪ ಪರಿಹಾರ ಕೇಂದ್ರ ಮಂಗಳವಾರದಂದು ತಿಳಿಸಿದೆ. ಚೀನಾ ಭೂಕಂಪ ನೆಟ್‌ವರ್ಕ್ ಸೆಂಟರ್ (ಸಿಇಎನ್‌ಸಿ) ಪ್ರಕಾರ ಸೋಮವಾರ ರಾತ್ರಿ 11.59 ಕ್ಕೆ ಗನ್ಸು ಮತ್ತು ಕಿಂಗ್ಹೈ ಪ್ರಾಂತ್ಯಗಳಲ್ಲಿ ಭಾರಿ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರ 10 ಕಿಲೋಮೀಟರ್ ಆಳದಲ್ಲಿತ್ತು. 6.2 ತೀವ್ರತೆಯ ಪ್ರಬಲ ಕಂಪನದ ಬಳಿಕ ನೆರೆಯ […]

‘ವಿಷಪ್ರಾಶನ’;ದ ಹಿನ್ನೆಲೆ ತೀವ್ರ ಅಸ್ವಸ್ಥಗೊಂಡಿದ್ದ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕರಾಚಿ ಆಸ್ಪತ್ರೆಗೆ ದಾಖಲು

ಕರಾಚಿ (ಪಾಕಿಸ್ತಾನ): ಭೂಗತ ಪಾತಕಿ ಮತ್ತು ಭಾರತದ ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ದಾವೂದ್ ಇಬ್ರಾಹಿಂಗೆ ‘ವಿಷಪ್ರಾಶನ’ ಮಾಡಿಸಲಾಗಿದ್ದು, ಆತನನ್ನು ಪಾಕಿಸ್ತಾನದ ಕರಾಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ ಆಸ್ಪತ್ರೆಯಲ್ಲಿ ದಾವೂದ್ ಇಬ್ರಾಹಿಂನನ್ನು ಬಿಗಿ ಭದ್ರತೆಯಲ್ಲಿ ಇರಿಸಲಾಗಿದೆ. ಅಲ್ಲದೆ ಭೂಗತ ಪಾತಕಿಯು ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ. ಆಸ್ಪತ್ರೆಯ ಸಂಪೂರ್ಣ ಮಹಡಿಯನ್ನೇ ಇಬ್ರಾಹಿಂಗೆ ಮೀಸಲಿಡಲಾಗಿದೆ. ಅವನ ಹತ್ತಿರದ ಕುಟುಂಬ ಸದಸ್ಯರು ಮತ್ತು ಸಂಬಂಧಪಟ್ಟ ವೈದ್ಯರನ್ನು ಹೊರತುಪಡಿಸಿ ಹೊರಗಿನಿಂದ ಯಾರಿಗೂ ಅವಕಾಶ ನೀಡುತ್ತಿಲ್ಲ. […]