ರೈತರಿಗಾಗಿ ಸಾವಯವ ಕೃಷಿ ಉಚಿತ ತರಬೇತಿ ಕಾರ್ಯಕ್ರಮ

ಉಡುಪಿ : ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆ ಹಾಗೂ ಗೋವರ್ಧನ ಗಿರಿ ಟ್ರಸ್ಟ್ ಸಹಯೋಗದಲ್ಲಿ ಸಾವಯವ ಸಿರಿ ಯೋಜನೆಯಡಿ ಜಿಲ್ಲಾಮಟ್ಟದಲ್ಲಿ ಸಾವಯವ ಕೃಷಿ ವಿಷಯಕ್ಕೆ ಸಂಬಂಧಿಸಿದ 2 ದಿನಗಳ ಉಚಿತ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಹೊಸದಾಗಿ ಸಾವಯವ ಹಾಗೂ ನೈಸರ್ಗಿಕ ಕೃಷಿಯಲ್ಲಿ ತೊಡಗಿಕೊಂಡಿರುವ ಯುವಕ ರೈತರು, ಮಹಿಳೆಯರು ಹಾಗೂ ಸಾವಯವ ಹಾಗೂ ನೈಸರ್ಗಿಕ ಕೃಷಿಯಲ್ಲಿ ಈ ಹಿಂದೆ ತರಬೇತಿ ಪಡೆಯದೇ ಇರುವ ರೈತರೂ ಸಹ ಪಾಲ್ಗೊಳ್ಳಬಹುದಾಗಿದೆ. ಆಸಕ್ತರು ರೈತ ಸಂಪರ್ಕ ಕೇಂದ್ರದಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ಆಗಸ್ಟ್ 17 […]

ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆ: ಅನ್ಯ ರಾಜ್ಯದ ಚೀಟಿದಾರರಿಗೂ ಆಧಾರ್ ಆಧಾರಿತ ಪಡಿತರ ವಿತರಣೆ

ಉಡುಪಿ: ಕೇಂದ್ರ ಸರ್ಕಾರದ ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯಡಿ ಜಿಲ್ಲೆಯ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಬೇರೆ ರಾಜ್ಯದ ಪಡಿತರ ಚೀಟಿದಾರರು ಅವರ ಆಧಾರ್ ದೃಢೀಕೃತ ಬೆರಳಚ್ಚು ಬಯೋಮೆಟ್ರಿಕ್ ಅಥವಾ ಆಧಾರ್ ಆಧಾರಿತ ಒ.ಟಿ.ಪಿ ನೀಡಿ ಪಡಿತರ ಪಡೆಯಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾರತೀಯ ಅಂಚೆ ಇಲಾಖೆ: ಸಹೋದರರಿಗೆ ಹಾಗೂ ಸೇನಾ ಯೋಧರಿಗೆ ಆನ್ ಲೈನ್ ರಾಖಿ ತಲುಪಿಸುವ ಅವಕಾಶ

ಉಡುಪಿ: ಭಾರತೀಯ ಅಂಚೆ ಇಲಾಖೆಯ ವತಿಯಿಂದ ಮನೆಯಲ್ಲಿ ಕುಳಿತು ದೇಶದ ಯಾವುದೇ ಪ್ರದೇಶಕ್ಕೆ ರಾಖಿಯನ್ನು ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸುವ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಕೇವಲ 120 ರೂ. ವೆಚ್ಚದಲ್ಲಿ ಸಹೋದರರಿಗೆ ಹಾಗೂ ಲಡಾಕ್ ಗಡಿ ಪ್ರದೇಶದಲ್ಲಿರುವ ಸೇನಾ ಯೋಧರಿಗೂ ರಾಖಿ ತಲುಪಿಸುವ ಅವಕಾಶ ಕಲ್ಪಿಸಲಾಗಿದೆ. ಈ ಸೇವಾ ಯೋಜನೆಯಲ್ಲಿ www.karnatakapost.gov.in/Rakhi_Post ಗೆ ಲಾಗಿನ್ ಆಗಿ ಕಳುಹಿಸುವವರ ಪೂರ್ಣ ವಿವರಗಳನ್ನು ನೀಡಿದಾಗ ಏಳು ವಿಧದ ಆಕರ್ಷಕ ವಿನ್ಯಾಸವುಳ್ಳ ರಾಖಿಗಳನ್ನು ವೀಕ್ಷಿಸಬಹುದಾಗಿದ್ದು, ಪ್ರತಿಯೊಂದು ವಿನ್ಯಾಸದ ಎದುರು ವಿನ್ಯಾಸ ಅಂಕಿ ನಮೂದಿಸಿದ್ದು […]

ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ಸಾಲ ಯೋಜನೆ, ನಿರುದ್ಯೋಗಿ ಯುವಕರಿಗೆ ಟೂರಿಸ್ಟ್ ಟ್ಯಾಕ್ಸಿ, ಸರಕು ಸಾಗಾಣಿಕೆ ವಾಹನ ಕೊಳ್ಳಲು ಸಹಾಯಧನ ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಒಕ್ಕಲಿಗ ಸಮುದಾಯದ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 18 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kvcdc.karnataka.gov.in, […]

ಜುಲೈ 29 ರಂದು ಉಡುಪಿ ತಾ.ಪಂ ಸಾಮಾನ್ಯ ಸಭೆ

ಉಡುಪಿ: ಉಡುಪಿ ತಾಲೂಕು ಪಂಚಾಯತ್‌ನ ಸಾಮಾನ್ಯ ಸಭೆಯು ಜುಲೈ 29 ರಂದು ಬೆಳಗ್ಗೆ 11.30 ಕ್ಕೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಆಡಳಿತ ಅಧಿಕಾರಿ ಬಾಬು ಎಮ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.