ಪೈಪ್ ಲೈನ್ ಕಾಮಗಾರಿಗಾಗಿ ಮರಗಳ ತೆರವು: ಜುಲೈ 18 ರಂದು ಸಾರ್ವಜನಿಕ ಅಹವಾಲು ಸಭೆ

ಉಡುಪಿ: ಉಡುಪಿ ನಗರಕ್ಕೆ ವಾರಾಹಿ ನದಿಯಿಂದ ಕುಡಿಯುವ ನೀರು ಸರಬರಾಜು ಯೋಜನೆಯಡಿ ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಜೆ.ಎಲ್.ಎಸ್.ಆರ್ ವರೆಗೆ ಪೈಪ್‌ಲೈನ್ ಅಳವಡಿಸುವ ಕಾಮಗಾರಿಗೆ ಸಂಬಂಧಿಸಿದಂತೆ, ಕಾಮಗಾರಿಗೆ ಅಡಚಣೆಯಾಗುವ 58 ಗಿಡಗಳನ್ನು ತೆರವುಗೊಳಿಸುವ ಕುರಿತು ಜುಲೈ 18 ರಂದು ಮಧ್ಯಾಹ್ನ 3 ಗಂಟೆಗೆ ಉಡುಪಿ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಗೆ ಹಾಜರಾಗಿ ಅಥವಾ ಸಭೆ ನಡೆಯುವ ದಿನಾಂಕದ ಒಳಗೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಉಪ ಸಂರಕ್ಷಣಾಧಿಕಾರಿಯವರ […]

ಅಮರನಾಥ ಯಾತ್ರೆ: ಜಿಲ್ಲಾ ಯಾತ್ರಾರ್ಥಿಗಳ ಸಂಬಂಧಿಕರು ಜಿಲ್ಲಾಡಳಿತದ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡುವಂತೆ ಜಿಲ್ಲಾಧಿಕಾರಿ ಮನವಿ

ಉಡುಪಿ: ಜಿಲ್ಲೆಯಿಂದ ಅಮರನಾಥ ಕ್ಷೇತ್ರ ಯಾತ್ರೆ ಕೈಗೊಂಡು, ಮೇಘಸ್ಪೋಟದ ಪ್ರವಾಹಕ್ಕೆ ಸಿಲುಕಿರುವ, ಸುರಕ್ಷಿತವಾಗಿರುವ ಯಾತ್ರಾರ್ಥಿಗಳು ಯಾರಾದರೂ ಇದ್ದಲ್ಲಿ ಇವರ ಸಂಬಂಧಿಕರು ಕೂಡಲೇ ಜಿಲ್ಲಾಡಳಿತದ ನಿಯಂತ್ರಣ ಕೊಠಡಿ ಟೋಲ್ ಫ್ರೀ ಸಂಖ್ಯೆ 1077 (0820-2574802) ಕರೆ ಮಾಡಿ ಸಂಬಂಧಪಟ್ಟ ಯಾತ್ರಾರ್ಥಿಗಳ ಮಾಹಿತಿಯನ್ನು ನೀಡುವಂತೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಕೋರಿದ್ದಾರೆ.

ದ್ವಿತೀಯ ಪಿ.ಯುಸಿ. ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪ್ರತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ: ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಸ್ಕ್ಯಾನ್ ಮಾಡಲಾದ ಪ್ರತಿಯನ್ನು ವಿದ್ಯಾರ್ಥಿಗಳು ಡೌನ್‌ಲೋಡ್ ಮಾಡಿಕೊಳ್ಳಲು ಜುಲೈ 15 ರ ವರೆಗೆ ಹಾಗೂ ಮರುಮೌಲ್ಯಮಾಪನ ಮತ್ತು ಮರು ಎಣಿಕೆಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 18 ರ ವರೆಗೆ ವಿಸ್ತರಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯುವಕರಿಗೆ ಸೇನಾ ತರಬೇತಿ ನೀಡಲು ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

ಉಡುಪಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ವತಿಯಿಂದ ಸೇನೆಗೆ ಸೇರಬಯಸುವ ರಾಜ್ಯದ ಯುವ ಜನತೆಗೆ ಪೂರ್ವಭಾವಿ ತರಬೇತಿಯನ್ನು ನೀಡಲು ಓರ್ವ ಮಾಜಿ ಸೇನಾ ಅಧಿಕಾರಿ ಹಾಗೂ ದೈಹಿಕ ಶಿಕ್ಷಣ ತರಬೇತಿ ಹೊಂದಿರುವ ಮೂರು ಮಾಜಿ ಸೈನಿಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 14 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ [email protected] ಅನ್ನು ಸಂಪರ್ಕಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈ 15 ರಿಂದ ಆಗಸ್ಟ್ 15 ರವರೆಗೆ ಜಿಲ್ಲಾ ಕಾರ್ಮಿಕ ಅದಾಲತ್ ಕಾರ್ಯಕ್ರಮ

  ಉಡುಪಿ: ಕಾರ್ಮಿಕ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಕಾರ್ಮಿಕ ಕಾಯ್ದೆಗಳಡಿ ಹಾಗೂ ವಿವಿಧ ಮಂಡಳಿಗಳ ಮೂಲಕ ಅನುಷ್ಠಾನಗೊಳಿಸುವ ಯೋಜನೆಗಳಡಿ ಸ್ವೀಕೃತವಾಗಿರುವ, ಇತ್ಯರ್ಥವಾಗದೆ ಬಾಕಿ ಉಳಿದಿರುವ ಪ್ರಕರಣ, ಕಡತ ಹಾಗೂ ವಿವಿಧ ಯೋಜನೆಗಳಡಿ ಬಾಕಿ ಇರುವ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲು ಜುಲೈ 15 ರಿಂದ ಆಗಸ್ಟ್ 15 ರ ವರೆಗೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಛೇರಿ ಹಾಗೂ ಉಡುಪಿ, ಕುಂದಾಪುರ, ಕಾರ್ಕಳ ಕಾರ್ಮಿಕ ನಿರೀಕ್ಷಕರ ಕಛೇರಿಗಳಲ್ಲಿ ಕಾರ್ಮಿಕ ಅದಾಲತ್ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ ಕಾರ್ಮಿಕರು, ಮಾಲೀಕರು ಹಾಗೂ […]