ಕಾಪು ಬ್ಲಾಕ್ ಕಾಂಗ್ರೆಸ್ (ಉತ್ತರ) ಪ್ರಚಾರ ಸಮಿತಿ ಅಧ್ಯಕ್ಷರಾಗಿ ಚರಣ್ ವಿಠ್ಠಲ್ ಕುದಿ ಆಯ್ಕೆ

ಉಡುಪಿ: ಕಾಪು ಬ್ಲಾಕ್ ಕಾಂಗ್ರೆಸ್ (ಉತ್ತರ) ಪ್ರಚಾರ ಸಮಿತಿ ಅಧ್ಯಕ್ಷರಾಗಿ ಚರಣ್ ವಿಠ್ಠಲ್ ಕುದಿ ಆಯ್ಕೆಯಾಗಿದ್ದಾರೆ.

ವಿನಯ್ ಕುಮಾರ್ ಸೊರಕೆ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಚರಣ್‌ ವಿಠ್ಠಲ್‌ ಅವರನ್ನು ಆಯ್ಕೆ ಮಾಡಿ ನೇಮಕಾತಿ ಪತ್ರವನ್ನು ಹಸ್ತಾಂತರಿಸಲಾಯಿತು.

ಈ ಸಮಾರಂಭದಲ್ಲಿ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ವಿಧಾನಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ , ಕಾಪು ಉತ್ತರ ವಲಯದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂತೋಷ ಕುಲಾಲ್ ಪಕ್ಕಾಲೂ , ಪ್ರಚಾರ ಸಮಿತಿ ಉಡುಪಿ ಜಿಲ್ಲಾ ಅಧ್ಯಕ್ಷರಾದ ದಿನೇಶ್ ಪುತ್ರನ್ ಹಾಗೂ ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ನೀರೆ ಕೃಷ್ಣ ಶೆಟ್ಟಿ ಹಾಗೂ ಇನ್ನಿತರ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.

ಚರಣ್‌ ಈ ಹಿಂದೆ ಕಾಪು ಬ್ಲಾಕ್ ಯುವ ಕಾಂಗ್ರೆಸ್ ನ ಅಧ್ಯಕ್ಷರಾಗಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷ ಸಂಘಟನೆಗೆ ಹೆಚ್ಚು ಒತ್ತು ಕೊಟ್ಟು ಕೆಲಸ ಮಾಡಿದ್ದರು, ಹಾಗೂ ಈ ಹಿಂದೆ ಕೊಡಿಬೆಟ್ಟು ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದು, ಸಾಮಾಜಿಕ, ಸಮಾಜ ಸೇವಾಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.